ಬಹು ವರ್ಷಗಳ ಬೇಡಿಕೆಯಾದ ಕ್ರೀಡಾಂಗಣಕ್ಕೆ ಜಾಗ ಮಂಜೂರಾತಿಗೆ ಆದೇಶಿಸಿದ ಜಿಲ್ಲಾದಿಕಾರಿ


Team Udayavani, Mar 23, 2022, 6:43 PM IST

Untitled-1

ಗುಡಿಬಂಡೆ: ತಾಲೂಕಿನ ಕ್ರೀಡಾಪಟುಗಳ ಬಹು ವರ್ಷಗಳ ಬೇಡಿಕೆಯಾದ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣಕ್ಕೆ ಸೂಕ್ತ ಜಾಗಕ್ಕಾಗಿ ಜಿಲ್ಲಾಧಿಕಾರಿ ಆರ್.ಲತಾ ಅಮಾನಿಬೈರಸಾಗರ ಗ್ರಾಮದ ಸರ್ವೆ ನಂ. 3 ರಲ್ಲಿ 6-00 ಎಕರೆ ಜಮೀನು ಮಂಜೂರು ಮಾಡಲು ಅಧೇಶ ಹೊರಡಿಸಿದ್ದಾರೆ.

ಕ್ರೀಡಾಂಗಣಾಕ್ಕಾಗಿ ಜಾಗ ಗುರುತು: ಸುಮಾರು ವರ್ಷಗಳ ಹಿಂದೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ರವರು ಪತ್ರ ಮುಖೇನ ಜಿಲ್ಲಾಧಿಕಾರಿಗಳಿಗೆ ಮತ್ತು ಗುಡಿಬಂಡೆ ತಹಶೀಲ್ದಾರ್ ರವರಿಗೆ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣಕ್ಕಾಗಿ ಸೂಕ್ತ ಜಾಗ ಗುರುತಿಸಿ ಮಂಜೂರು ಮಾಡುವಂತೆ ಆದೇಶ ಪತ್ರ ನೀಡಿರುತ್ತಾರೆ, ಹಾಗೂ ಜಿಲ್ಲಾಧಿಕಾರಿಗಳು ಸಹ ತಹಶೀಲ್ದಾರ್‌ಗೆ ಜಾಗ ಗುರುತಿಸಿ ಮಂಜೂರಾತಿ ಆದೇಶಕ್ಕಾಗಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿರುತ್ತಾರೆ, ಅದರಂತೆ ಕಳೆದ ವರ್ಷ 2020ನೇ ಸೆ.22 ರಂದು ಜಿಲ್ಲಾ ಕ್ರೀಡಾ ಇಲಾಖೆಯ ನಿರ್ದೆಶಕಿ ಪಟ್ಟಣದ ಹತ್ತಿರ ಇರುವ ಅಮಾನಿಬೈರಸಾಗರ ಗ್ರಾಮದ ಸ.ನಂ. 3 ರ ಸರ್ಕಾರಿ ಜಮೀನಿಗೆ ಬೇಟಿ ನೀಡಿ, ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸಲು ಒಪ್ಪಿಗೆ ಸೂಚಿಸಿ ಹೋಗಿದ್ದರು.

ಉದಯವಾಣಿ ವರದಿ: ಇದರ ಬೆನ್ನೆಲ್ಲೆ ಈ ವಿಚಾರವಾಗಿ ದಿನಾಂಕ: 29-09-2021 ರಂದು ’ಕ್ರೀಡಾಂಗಣಕ್ಕೆ ಜಾಗ ಗುರುತಿಸಿದ್ರೂ ಮಂಜೂರು ಮಾಡಿಲ್ಲ’ಎಂಬ ಶೀರ್ಷಿಕೆಯಡಿ ಸುದ್ದಿ ಪ್ರಕಟಿಸಿತ್ತು. ಈ ವಿಚಾರವಾಗಿ ಎಚ್ಚೆತ್ತುಕೊಂಡ ಅಬಕಾರಿ ಇಲಾಖೆ ಅಧಿಕಾರಿಗಳು ಸಹ ಸ್ಥಳಕ್ಕೆ ಬೇಟಿ ನೀಡಿದ್ದರು, ತದ ನಂತರ ಅಬಕಾರಿ ಇಲಾಖೆಯ ಹಿಂಬರಹದ ನಂತರ ಜಿಲ್ಲಾಧಿಕಾರಿಗಳು ಕೆಲವು ಷರತ್ತುಗಳನ್ನು ವಿಧಿಸಿ ತಾಲೂಕು ಆಡಳಿತಕ್ಕೆ ಅತಿ ಜರೂರಾಗಿ ಜಾಗ ಮಂಜೂರು ಮಾಡಿ ಕ್ರೀಡಾ ಇಲಾಖೆಗೆ ವರ್ಗಾವಣೆ ಮಾಡುವಂತೆ ಆದೇಶ ಮಾಡಿದ್ದಾರೆ.

15 ದಿನದಲ್ಲಿ ಹಸ್ತಾಂತರ: ಕ್ರೀಡಾಂಗಣಕ್ಕಾಗಿ ಜಾಗ ಮಂಜುರು ಮಾಡಿರುವ ಅಮಾನಿ ಬೈರಸಾಗರ ಗ್ರಾಮದ ಸರ್ವೆ ನಂ. 3 ರಲ್ಲಿ 6-00 ಎಕರೆ ಜಮೀನು ಸ್ವತ್ತನ್ನು 15 ದಿನಗಳ ಒಳಗಾಗಿ ಅಳತೆ ಮಾಡಿಸಿ, ಚೆಕ್ಕುಬಂದಿ ಗುರ್ತಿಸಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಇಲಾಖೆ, ಚಿಕ್ಕಬಳ್ಳಾಪುರ ರವರಿಗೆ 15 ದಿನಗಳ ಒಳಗಾಗಿ ಹಸ್ತಾಂತರಿಸಲು ಜಿಲ್ಲಾದಿಕಾರಿಗಳು ಆಧೇಶ ಮಾಡಿದ್ದಾರೆ.

ಎಂಟು ವರ್ಷಗಳಿಂದ ಪ್ರತಿಭಟನೆ: ಕ್ರೀಡಾಂಗಣ ವಿಲ್ಲದೆ ಅನೇಕ ಪ್ರತಿಭೆಗಳು ಕ್ರೀಡೆಗಳಲ್ಲಿ ಮೂಲೆಗುಂಪಾಗಿದ್ದು, ಇದನ್ನು ಮನಗೊಂಡ ತಾಲೂಕಿನ ಪ್ರತ್ಯೇಕ ವಿದಾನಸಭಾ ಕ್ಷೇತ್ರ ಹೋರಾಟ ಸಮಿತಿಯ ಸದಸ್ಯರು ಬೆಂಬಿಡದೇ 2014 ರಿಂದಲೂ ಕ್ರೀಡಾಂಗಣಕ್ಕಾಗಿ ಒತ್ತಾಯಿಸಿ ಶಾಸಕರಿಗೆ, ಲೋಕಸಭಾ ಸದಸ್ಯರಿಗೆ, ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರ್‌ರಿಗೆ, ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿಕೊಂಡೇ ಬರುತ್ತಿದ್ದರು, ತಾಲೂಕಿನ ಕ್ರೀಡಾಭಿಮಾನಿಗಳ ಕೋರಿಕೆಯಂತೆ ಜಿಲ್ಲಾಧಿಕಾರಿ ಆರ್.ಲತಾ ಆದೇಶಿಸಿದ್ದಾರೆ.

 

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.