ಮೃತರಿಗೆ ಪರಿಹಾರ ಘೋಷಣೆ: ಸಚಿವ ಮೆಚ್ಚುಗೆ
Team Udayavani, Jun 15, 2021, 6:32 PM IST
ಚಿಕ್ಕಬಳ್ಳಾಪುರ: ಬಡತನ ರೇಖೆಗಿಂತ ಕೆಳಗಿರುವಕುಟುಂಬಗಳಲ್ಲಿ ಕೋವಿಡ್ನಿಂದ ಮೃತಪಟ್ಟರೆ ಒಂದು ಲಕ್ಷರೂ. ಪರಿಹಾರ ನೀಡುವ ನಿರ್ಧಾರ ಕೈಗೊಂಡಿರುವುದು ಸರ್ಕಾರದ ಇಚ್ಛಾ ಶಕ್ತಿಯನ್ನು ತೋರಿಸುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಪೆರೇಸಂದ್ರಆರೂರು ಮತ್ತು ದೊಡ್ಡಪೈಲಗುರ್ಕಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಶ್ರೀಸಾಯಿಕೃಷ್ಣಚಾರಿಟಬಲ್ ಟ್ರಸ್ಟ್ನಿಂದ ಆಶಾ ಕಾರ್ಯಕರ್ತೆಯರಿಗೆಐದು ಸಾವಿರ ಆರ್ಥಿಕ ನೆರವು ಮತ್ತು ಆಹಾರ ಸಾಮಗ್ರಿವಿತರಣೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಹಾಸನ ಜಿಲ್ಲಾ ಪ್ರವಾಸದ ವೇಳೆ ಸಿಎಂ ನಮ್ಮ ಜತೆಸಮಾಲೋಚಿಸಿ ಪರಿಹಾರ ನೀಡುವ ಒಂದು ಹಂತದನಿರ್ಣಯ ಕೈಗೊಂಡಿದ್ದರು. ಭಾನುವಾರ ರಾತ್ರಿ ತಾವುಅವರನ್ನು ಭೇಟಿ ಮಾಡಿದಾಗ ಪರಿಹಾರಕ್ಕೆ ಎಷ್ಟು ಹಣಬೇಕಾಗಬಹುದು ಎಂದು ಲೆಕ್ಕಾ ಹಾಕಿದಾಗ 150 ರಿಂದ200 ಕೋಟಿ ರೂ. ನಿರೀಕ್ಷೆ ಮಾಡಲಾಯಿತು. ಕಷ್ಟಕಾಲದಲ್ಲಿ ಜನರ ಪರ ನಿಲ್ಲಬೇಕು ಎಂಬ ಕಾರಣಕ್ಕೆ ಈನಿರ್ಣಯ ಕೈಗೊಳ್ಳಲಾಯಿತು ಎಂದು ತಿಳಿಸಿದರು.
ಪ್ರತ್ಯೇಕವಾಗಿ ಲಕ್ಷ ರೂ. ಪರಿಹಾರ: ರಾಜ್ಯ ಸರ್ಕಾರಕೋವಿಡ್ನಿಂದ ಮೃತಪಟ್ಟವರಿಗೆ ತಲಾ 1 ಲಕ್ಷ ರೂ.ಪರಿಹಾರ ನೀಡಲು ನಿರ್ಧರಿಸಿದೆ. ಅದರ ಜೊತೆಗೆಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ತಮ್ಮ ಶ್ರೀಸಾಯಿ ಕೃಷ್ಣ ಚಾರಿಟಬಲ್ ಟ್ರಸ್ಟ್ ಮೂಲಕ ತಲಾ 1 ಲಕ್ಷ ರೂ. ಪ್ರತ್ಯೇಕವಾಗಿನೀಡಲು ನಿರ್ಧರಿಸಿದ್ದೇನೆ ಎಂದು ಹೇಳಿದರು.
ಕಿಟ್ ವಿತರಣೆಗೆ ಕ್ರಮ: ಕೊರೊನಾ ಸಂಕಷ್ಟದಲ್ಲಿರುವಜನರ ಸೇವೆ ಮಾಡಲು ಬದ್ಧನಾಗಿದ್ದೇನೆ. ಜೊತೆಗೆಕೊರೊನಾ ಸೋಂಕು ನಿಯಂತ್ರಿಸಲು ಶ್ರಮಿಸುತ್ತಿರುವಸಮಾಜದ ಮೆಚ್ಚುಗೆ ಪಾತ್ರರಾಗಿರುವ ಆರೋಗ್ಯಸಿಬ್ಬಂದಿ-ಆಶಾ ಕಾರ್ಯಕರ್ತರಿಗೆ ಸರ್ಕಾರದಿಂದದೊರೆಯುವ ಹೆಚ್ಚುವರಿ ಪೊÅàತ್ಸಾಹಧನದ ಜೊತೆಗೆತಮ್ಮ ನೇತೃತ್ವದ ಟ್ರಸ್ಟ್ನಿಂದಲೂ ತಲಾ 5 ಸಾವಿರ ರೂ.ನಗದು, ಆಹಾರದ ಕಿಟ್ ವಿತರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಟ್ರಸ್ಟ್ನಿಂದ ಈಗಾಗಲೇ ಮಂಚೇನಹಳ್ಳಿ ತಾಲೂಕಿನಲ್ಲಿ ಊಚಿತ ಆಹಾರ ಧಾನ್ಯದ ಜತೆ ತಲಾ ಐದುಸಾವಿರ ರೂ. ನೀಡಲಾಗುತ್ತಿದೆ. ಅದನ್ನು ಮಂಡಿಕಲ್ಲುಭಾಗದಲ್ಲಿರುವ 44 ಮಂದಿಗೂ ವಿಸ್ತರಿಸಲಾಗುವುದುಎಂದೂ ಸಚಿವರು ತಿಳಿಸಿದರು. ಕಾರ್ಯಕ್ರಮದಲ್ಲಿಜಿಲ್ಲಾ ಮಟ್ಟದ ಹಿರಿಯ ಅಧಿ ಕಾರಿಗಳು, ಚುನಾಯಿತಪ್ರತಿನಿ ಧಿಗಳು, ಸ್ಥಳೀಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ