ಕೋವಿಡ್ ನಿರ್ದೇಶನಗಳನ್ನು ಪಾಲಿಸಿ ದೀಪಾವಳಿ ಹಬ್ಬ ಆಚರಣೆ: ಸಚಿವ ಸುಧಾಕರ್ ಹರ್ಷ
Team Udayavani, Nov 15, 2020, 8:23 AM IST
ಚಿಕ್ಕಬಳ್ಳಾಪುರ: ಕೋವಿಡ್-19 ಹಿನ್ನಲೆಯಲ್ಲಿ ಈ ಬಾರಿಯ ದೀಪಾವಳಿ ಹಬ್ಬವನ್ನು ಸರಳವಾಗಿ ಆಚರಿಸುವ ನಿಟ್ಟಿನಲ್ಲಿ ಜನತೆಯು ಸರ್ಕಾರದ ನಿರ್ದೇಶನಗಳನ್ನು ಪಾಲಿಸುವಲ್ಲಿ ಯಶಸ್ವಿಯಾಗಿದ್ದು, ನನ್ನ ಹುಟ್ಟೂರಾದ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿಯೂ ರಾಸಾಯನಿಕ ಪಟಾಕಿಗಳನ್ನು ನಿಷೇಧಿಸಿ ಹಸಿರು ಪಟಾಕಿಗಳನ್ನು ಬಳಸುತ್ತಿರುವುದು ಸ್ವಾಗತಾರ್ಹ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಈ ಬಾರಿ ಪಟಾಕಿ ಅಂಗಡಿಗಳನ್ನು ನಿಷೇಧಿಸುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಈ ಮೂಲಕ ನಾಂದಿ ಹಾಡಲಾಗಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪರಿಸರಕ್ಕೆ ಮಾರಕವಾದ ಎಲ್ಲಾ ಪಟಾಕಿಗಳನ್ನು ನಿಷೇಧಿಸಿ ದಿಟ್ಟ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿರುವುದು ಸಕಾರಾತ್ಮಕ ಬೆಳವಣಿಗೆ ಎಂದರು.
ನಾಡಿನ ಸಮಸ್ತ ಜನತೆಯು ತಮ್ಮ ಮನೆಗಳಲ್ಲಿ ಹಣತೆಯನ್ನು ಹಚ್ಚುವ ಮೂಲಕ ಸಾಂಪ್ರದಾಯಿಕವಾಗಿ ಬೆಳಕಿನ ಹಬ್ಬವನ್ನು ಆಚರಿಸಬೇಕೆಂದು ಮನವಿ ಮಾಡಿರುವ ಉಸ್ತುವಾರಿ ಸಚಿವರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ದೈಹಿಕ ಅಂತರ ಕಾಪಾಡಿ ದೀಪಗಳ ಹಬ್ಬ ದೀಪಾವಳಿಯನ್ನು ಆಚರಿಸಬೇಕೆಂದು ಮನವಿ ಮಾಡಿ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ