ಪಠ್ಯಪುಸ್ತಕ ಪರಿಷ್ಕರಣೆ ಗೊಂದಲ ನಿವಾರಿಸಲು ಆಗ್ರಹ
ವಿದ್ಯಾರ್ಥಿಗಳಿಗೆ ಕೂಡಲೇ ಉಚಿತ ಬಸ್ಪಾಸ್ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು
Team Udayavani, Jul 11, 2022, 6:15 PM IST
ಚಿಕ್ಕಬಳ್ಳಾಪುರ: ಪಠ್ಯಪುಸ್ತಕ ಪರಿಷ್ಕರಣೆ ಗೊಂದಲ ನಿವಾರಣೆ, ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡಬೇಕೆಂದು ಆಗ್ರಹಿಸಿ ಎನ್ಎಸ್ಯುಐ ಕಾರ್ಯಕರ್ತರು ನಗರದಲ್ಲಿ ಕನ್ನಡ ಬಾವುಟದೊಂದಿಗೆ ಪ್ರತಿಭಟನೆ ನಡೆಸಿದರು.
ನಗರದ ವಿದ್ಯಾರ್ಥಿನಿಲಯದಿಂದ ಶಿಡ್ಲಘಟ್ಟದ ವೃತ್ತದವರೆಗೆ ಕನ್ನಡ ಬಾವುಟದೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಎನ್ಎಸ್ಯುಐ ಕಾರ್ಯಕರ್ತರು, ರಾಜ್ಯ ಸರ್ಕಾರ ಪಠ್ಯಪುಸ್ತಕ ಗೊಂದಲ ನಿವಾರಿಸಿ, ಹಳೇ ಪುಸ್ತಕಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಮತ್ತು ವಿದ್ಯಾರ್ಥಿಗಳಿಗೆ ಕೂಡಲೇ ಉಚಿತ ಬಸ್ಪಾಸ್ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಎನ್.ಎಸ್ .ಯು.ಐ ಸಂಘಟನೆಯ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ, ಮಾನವೀಯ ಸಂದೇಶವನ್ನು ಇಡೀ ಜಗತ್ತಿನಲ್ಲಿ ಪಸರಿಸಲು ಕಾರಣಕರ್ತರಾದವರನ್ನು ಮೂಲೆಗುಂಪು ಮಾಡಿ ಅವಹೇಳನಾ ಮಾಡುವ ಕೆಲಸವನ್ನು ಪಠ್ಯಪುಸಕ್ತ ಪರಿಷ್ಕರಣಾ ಸಮಿತಿ ಮಾಡುತ್ತಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಉಗ್ರ ಹೋರಾಟ: ಜೊತೆಗೆ, ಮಕ್ಕಳಲ್ಲಿ ದೇಶಭಕ್ತಿಯನ್ನು ಬೆಳೆಸುವ ಬದಲಿಗೆ ಕೋಮುವಾದದ ಬೀಜವನ್ನು ಬಿತ್ತನೆ ಮಾಡಿ, ಮನಸ್ಸುಗಳನ್ನು ಕೆಡಿಸಿ, ಕೇಸರಿಕರಣ ಮಾಡಲು ಹೊರಟಿದೆ. ವಿದ್ಯಾರ್ಥಿಗಳಿಗೆ ನೈಜ ಸಂಗತಿಯನ್ನು ಮನವರಿಕೆ ಮಾಡಿಕೊಡಲು ಹೋರಾಟವನ್ನು ಆರಂಭಿಸಿದ್ದೇವೆ. ಪಠ್ಯಪುಸ್ತಕದ ಗೊಂದಲವನ್ನು ನಿವಾರಿಸದಿದ್ದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಶಾಂತಿಯುತ ಪ್ರತಿಭಟನೆ ಸಹಿಸುತ್ತಿಲ್ಲ: ನಾವು ಚಡ್ಡಿ ಸುಡಲು ಹೋದರೇ, ಮನೆಗೆ ನುಗ್ಗಿದ್ದೇವೆ ಎಂದು ಅಪವಾದ ಹೂರಿಸುವ ಕೆಲಸವನ್ನು ಮಾಡಿ ದ್ದಾರೆ. ಸಂವಿಧಾನಾತ್ಮಕವಾಗಿ ಶಾಂತಿಯುತವಾಗಿ ಪ್ರತಿಭಟನೆ ಮಾಡಲು ಬಿಜೆಪಿ ನೇತೃತ್ವದ ಸರ್ಕಾರ ಸಹಿಸುತ್ತಿಲ್ಲ ಎಂದು ದೂರಿದರು.
ಮಾನವೀಯ ಸಂದೇಶ ನೀಡಿ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಭಗತ್ಸಿಂಗ್, ಮಾನವೀಯ ಸಂದೇಶವನ್ನು ನೀಡಿದರು. ಸಮಾಜವನ್ನು ಸುಧಾರಣೆ ಮಾಡಿದ ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ರಾಷ್ಟ್ರಕವಿ ಕುವೆಂಪು ಅವರಿಗೆ ಅವಹೇಳನೆ ಮಾಡುವುದನ್ನು ನಾವು ಯಾವ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದರು.
ಜನಜಾಗೃತಿ ಅಭಿಯಾನ: ನಿಜಾಂಶವನ್ನು ಇಡೀ ವಿದ್ಯಾರ್ಥಿ ಸಮುದಾಯಕ್ಕೆ ತಿಳಿಸುವ ಕೆಲಸವನ್ನು ಮಾಡುವ ಸಲುವಾಗಿ ಜನಜಾಗೃತಿ ಅಭಿಯಾನ ವನ್ನು ನಡೆಸುತ್ತಿದ್ದೇವೆ. ಜೊತೆಗೆ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಎನ್ಎಸ್ಯುಐ ಸದಾ ಬೆಂಬಲ ವ್ಯಕ್ತಪಡಿಸಿ ಹೋರಾಟ ನಡೆಸುತ್ತದೆ ಎಂದು ವಿವರಿಸಿದರು. ಎನ್ಎಸ್ಯುಐ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಯ್ಕುಮಾರ್, ರಾಜ್ಯ ಕಾರ್ಯದರ್ಶಿ ಹಾಗೂ ಚಿಕ್ಕಬಳ್ಳಾಪುರ ಉಸ್ತುವಾರಿ ದಿನೇಯ್ ದೀಪಕ್, ಜಿಲ್ಲಾಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಪ್ರಸನ್ನಕುಮಾರ್, ಶಿವಾನಂದ, ಪ್ರಧಾನ ಕಾರ್ಯದರ್ಶಿ ಮದನ್ ಮೋಹನ್, ಮುರಳಿ, ಕಾಂಗ್ರೆಸ್ ಸಾಮಾಜಿಕ ಜಾಲಾತಾಣ ಜಿಲ್ಲಾಧ್ಯಕ್ಷ ಶಾಹಿದ್ ಅಬ್ಟಾಸ್, ಹಮೀಮ್, ನರಸಿಂಹಮೂರ್ತಿ, ಸಂತೋಷ, ಸಂಘಟನೆಯ ಜಿಲ್ಲಾ, ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ