ಶಿಥಿಲಾವಸ್ಥೆಯ ಶಾಲಾಕಟ್ಟಡ ಕೆಡವಲು ಆಗ್ರಹ
Team Udayavani, Dec 10, 2018, 3:38 PM IST
ಪಾತಪಾಳ್ಯ: ಚೇಳೂರು ಹೋಬಳಿಯ ಮಂಡ್ಯಂಪಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಶಿಥಿಲಾವಸ್ಥೆ ಯಲ್ಲಿರುವ ಶಾಲಾ ಕಟ್ಟಡವನ್ನು ಕೆಡವಬೇಕೆಂದು ಎಸ್ಡಿಎಂಸಿ ಅಧ್ಯಕ್ಷ ರಾಮಾಂಜಿ ಆಗ್ರಹಿಸಿದ್ದಾರೆ.
ಪಾಳ್ಯಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮಂಡ್ಯಂಪಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಊರ ಹೊರ ಭಾಗದಲ್ಲಿದ್ದು 35 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಇಬ್ಬರು ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಶಾಲಾ ಆವರಣದಲ್ಲಿ ಮೂರು ಕೊಠಡಿಗಳಿದ್ದರೂ ಎರಡು ಕೊಠಡಿಗಳು ಪ್ರಯೋ
ಜನೆಕ್ಕೆ ಇಲ್ಲದಂತಾಗಿದೆ. ಒಂದು ಕೊಠಡಿಯನ್ನು ಮಾತ್ರ ಪಾಠ ಮಾಡಲು ಉಪಯೋಗಿಸಬೇಕಾಗಿದ್ದು, ಮಕ್ಕಳಿಗೆ ತೊಂದರೆಯಾಗಿದೆ.
ಕಟ್ಟಡ ಕೆಡವುದರ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದರೂ ಇದುವರೆಗೆ ಕ್ರಮ ತೆಗೆದು ಕೊಂಡಿಲ್ಲ. ಗ್ರಾಪಂ ಕೇಂದ್ರ ಸ್ಥಾನವಾದ ಪಾಳ್ಯಕೆರೆಯಲ್ಲಿ ಇತ್ತೀಚೆಗೆ ನಡೆದ ಮಕ್ಕಳ ಗ್ರಾಮಸಭೆಯಲ್ಲಿ ಕಟ್ಟಡದ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದರೂ ಗ್ರಾಪಂ ಅಧಿಕಾರಿಗಳು ಇದುವರೆಗೆ ಕ್ರಮ ತೆಗೆದುಕೊಂಡಿಲ್ಲ. ಶಿಥಿಲಾವಸ್ಥೆಯ ಕಟ್ಟಡದ ಬಳಿ ಮಕ್ಕಳು ಆಡುವಾಗ ಅನಾಹುತಗಳಾದರೆ ಅಧಿಕಾರಿಗಳೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಶಿಥಿಲಾವಸ್ಥೆಯ ಕಟ್ಟಡವನ್ನು ಕೆಡವಿ ಮುಂದೆ ಸಂಭವಿಸಬಹುದಾದ ಅನಾಹುತವನ್ನು ತಪ್ಪಿಸಬೇಕೆಂದು ಗ್ರಾಮದ ವೆಂಕಟ ರವಣ, ನರಸಿಂಹಪ್ಪ, ಗಂಗುಲಪ್ಪ ಒತ್ತಾಯಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಪಾಳ್ಯಕೆರೆ ಸಿಆರ್ಪಿ ಐ.ವಿ.ಕೃಷ್ಣಾರೆಡ್ಡಿ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಪಾಳ್ಯಕೆರೆ ಗ್ರಾಪಂ ಪಿಡಿಒ ಚಂದ್ರಶೇಖರ ಪ್ರತಿಕ್ರಿಯಿಸಿ, ಇತ್ತೀಚೆಗೆ ನಡೆದ ಮಕ್ಕಳ ಗ್ರಾಮಸಭೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡದ ಬಗ್ಗೆ ಪ್ರಸ್ತಾಪನೆ ಸಲ್ಲಿಸಿದ್ದು, ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…