ಮರಾಠ ಅಭಿವೃದ್ಧಿ ನಿಗಮ ರದ್ದತಿಗೆ ಆಗ್ರಹ
Team Udayavani, Nov 23, 2020, 6:44 PM IST
ಚಿಕ್ಕಬಳ್ಳಾಪುರ: ರಾಜ್ಯದ ನೆಲ, ಜಲ, ಭಾಷೆ, ಸಾಹಿತ್ಯ ಮತ್ತು ಕಲೆ ಉಳಿಸುವ ಬದಲಾಗಿ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ರದ್ದತಿ ರಚಿಸುವ ಮೂಲಕ ಕನ್ನಡ ವಿರೋಧಿಧೋರಣೆ ಅನುಸರಿಸುತ್ತಿದೆಯೇ ಎಂಬ ಅನುಮಾನಕನ್ನಡಿಗರಿಗೆಮೂಡುವಂತಾಗಿದೆ ಎಂದು ನಗರಸಭೆ ಸದಸ್ಯ ವಕೀಲ ಮುನಿರಾಜುಕಳವಳ ವ್ಯಕ್ತಪಡಿಸಿದರು. ನಗರದ ಶ್ರೀ ಕಾಳಿಕಾಂಭ ಸಮುದಾಯಭವನದಲ್ಲಿ ಕಸ್ತೂರಿ ಕರ್ನಾಟಕ ಜನಪರವೇದಿಕೆಯ ಸಾಂಸ್ಕೃತಿಕ ಘಟಕದಿಂದಆಯೋಜಿಸಿದ್ದ 65ನೇ ಕನ್ನಡ ರಾಜ್ಯೋತ್ಸವಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ5 ಕೋಟಿ ರೂ.ಅನುದಾನ ಮೀಸಲಿಟ್ಟಿರುವ ಸರ್ಕಾರ,ಮರಾಠ ಅಭಿವೃದ್ಧಿ ನಿಗಮಕ್ಕೆ 50 ಕೋಟಿರೂ.ಅನುದಾನ ನೀಡುವ ಮೂಲಕ ಏನುಸಾಧನೆ ಮಾಡಲು ಹೊರಟಿದೆ ಎಂದು ಪ್ರಶ್ನಿಸಿದರು.
ಹಿಂಪಡೆಯಲು ಆಗ್ರಹ: ಚಿಕ್ಕಬಳ್ಳಾಪುರಜಿಲ್ಲೆ ಗಡಿ ಪ್ರದೇಶವಾಗಿದ್ದು, ಇಲ್ಲಿ ತೆಲುಗು ಭಾಷೆ ವ್ಯಾಮೋಹ ಹೆಚ್ಚಿದ್ದರೂ ಸಹ ಕನ್ನಡದ ವಿಷಯದಲ್ಲಿ ಎಲ್ಲರೂ ಒಂದಾಗಿ ಭಾಷಾ ಸಾಮರಸ್ಯ ಕಾಪಾಡಿಕೊಂಡಿದ್ದಾರೆ. ಜೊತೆಗೆಸೌಹಾರ್ದತೆವಾತಾವರಣನಿರ್ಮಿಸಲಾಗಿದೆ. ಸರ್ಕಾರ ರಾಜ್ಯದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗಾಗಿ ವಿಶೇಷ ಒತ್ತು ನೀಡಿ ಮರಾಠ ನಿಗಮಆದೇಶಹಿಂಪಡೆದುಕನ್ನಡಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚು ಅನುದಾನ ನೀಡಬೇಕೆಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿಸಿಗೌರವಿಸಲಾಯಿತು. ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಜಿ.ಚಂದ್ರಶೇಖರ್, ತಾಲೂಕು ಅಧ್ಯಕ್ಷ ರಾಮಾಂಜನೇಯ, ಸಾಂಸ್ಕೃತಿಕ ಘಟಕದ ಅಧ್ಯಕ್ಷ ಸಿ.ಎನ್.ಮುನಿರಾಜು, ನಗರಸಭಾ ಸದಸ್ಯ ಅನಿಲ್ಕುಮಾರ್, ಮನೋಹರ್, ಎನ್ಎಸ್ಯುಐ ರಾಜ್ಯ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ತಾಲೂಕು ಸಂಚಾಲಕ ಆಫ್ರಿದ್, ಸಿಂಗ್, ವಚನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾರಾಯಣಸ್ವಾಮಿ (ಪಟೇಲ್) ಮತ್ತಿತರರು ಉಪಸ್ಥಿತರಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಂಚಲನ ಸೃಷ್ಠಿಸಿದ ಜಿಲ್ಲಾಧಿಕಾರಿಗಳ ನೋಟಿಸ್
ಹೆತ್ತ ಮಗುವನ್ನು ಮಾರಾಟ ಮಾಡಿದ ತಾಯಿ! : ಮಹಿಳೆ ಸಹಿತ ನಾಲ್ವರ ಬಂಧನ
ಆಂಧ್ರ ಮಹಿಳೆಗೆ 75 ಲಕ್ಷ ರೂ.ವಂಚನೆ, ಹಲ್ಲೆ : ರೈಸ್ ಮಿಲ್ ಮಾಲೀಕನ ವಿರುದ್ಧ ಮಹಿಳೆ ಆರೋಪ
ಚಿಕ್ಕಬಳ್ಳಾಪುರ : ದ್ವಿತೀಯ ಹಂತದ ಕೋವಿಡ್ ಲಸಿಕೆ ಅಭಿಯಾನ ಆರಂಭ- 2358 ಫಲಾನುಭವಿಗಳಿಗೆ
ರಸ್ತೆ ನಿರ್ಮಾಣ ವಿಚಾರ : ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ : ಹಲವರಿಗೆ ಗಾಯ