ಗುರಿ ಮೀರಿ ಸಾಧನೆ ಮಾಡಿದ ತೋಟಗಾರಿಕೆ ಇಲಾಖೆ


Team Udayavani, Apr 21, 2021, 1:32 PM IST

Department of Horticulture

ಚಿಕ್ಕಬಳ್ಳಾಪುರ: ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಮ ನೈರ್ಮಲ್ಯಕ್ಕೆ ಪೂರಕವಾಗಿರುವ ಮಹಾತ್ಮ ಗಾಂಧಿರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಅಂತರ್ಜಲ ಮಟ್ಟ ವೃದ್ಧಿ, ಜಲಮೂಲಗಳನ್ನು ಪುನಶ್ಚೇತನಗೊಳಿಸುವ ಕಾರ್ಯಗಳಿಗೆ ಬಳಸಿಕೊಂಡ ಬಳಿಕ ಇದೀಗ, ತೋಟಗಾರಿಕೆ ಇಲಾಖೆ ಈ ಯೋಜನೆಯ ಮೂಲಕ ರೈತರ ಕಲ್ಯಾಣಕ್ಕಾಗಿ ಬಳಸಲು ಮುಂದಾಗಿದೆ.

ನರೇಗಾ ಯೋಜನೆಯ ಮೂಲಕ 2020-21ನೇಸಾಲಿನಲ್ಲಿ 50 ಲಕ್ಷ ಮಾನವ ದಿನಗಳು ಸೃಜನೆ ಮಾಡುವಗುರಿ ಹೊಂದಿ, ಆರ್ಥಿಕ ವರ್ಷದ ಅಂತ್ಯದೊಳಗೆ ಗುರಿಮೀರಿ ಒಂದು ಕೋಟಿ ಹತ್ತು ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡಿ, ತೋಟಗಾರಿಕೆ ಇಲಾಖೆ ಗುರಿಮೀರಿಸಾಧನೆ ಮಾಡಿದೆ. ಈ ಯೋಜನೆ ಮೂಲಕ ತೋಟಗಾರಿಕಾ ಬೆಳೆಗಳ ಪ್ರದೇಶ ವಿಸ್ತರಣೆಯನ್ನು ಮಾಡಿ ಮಾವು, ತೆಂಗು, ಪಪ್ಪಾಯ, ಈರುಳ್ಳಿ ಶೇಖರಣಾ ಘಟಕಗಳ ನಿರ್ಮಾಣ, ಪೌಷ್ಠಿಕ ತೋಟಗಳು ಹಾಗೂಇಲಾಖೆಯ ಫಾರಂಗಳ ಅಭಿವೃದ್ಧಿಗಾಗಿ ವಿಶೇಷ ಆದ್ಯತೆನೀಡಲಾಗಿದೆ.

ರೈತರಿಗೆ ಸೌಲಭ್ಯ ಕಲ್ಪಿಸಲು ವಿಶೇಷ ಯೋಜನೆ:ನರೇಗಾ ಯೋಜನೆಯನ್ನು ಚಿಕ್ಕ ಬಳ್ಳಾಪುರ ಜಿಲ್ಲೆಯಲ್ಲಿಪರಿಣಾಮಕಾರಿಯಾಗಿ ಬಳಸಿಕೊಂಡು ಗ್ರಾಮೀಣಪ್ರದೇಶದಲ್ಲಿ ಮೂಲ ಸೌಲಭ್ಯ ವೃದ್ಧಿಗೊಳಿಸಿದರಲ್ಲದೆ ರೇಷ್ಮೆ, ತೋಟಗಾರಿಕೆ ಮತ್ತು ಕೃಷಿ ಚಟು ವಟಿಕೆ ಗಳಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ಸದರಿ ಯೋಜನೆ ಮೂಲಕ ಅನೇಕ ಅನುಕೂಲಗಳನ್ನು ಕಲ್ಪಿಸಲಾಗಿದೆ.

ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರಗಳನ್ನು ಮಾದರಿಯಾಗಿ ಅಭಿವೃದ್ಧಿಗೊಳಿಸಿದ ಜಿಪಂ ನಿಕಟ ಪೂರ್ವಸಿಇಒ ಬಿ.ಫೌಝೀಯಾ ತರುನ್ನುಮ್‌ ಅವರು ಪ್ರಸ್ತುತ ತೋಟಗಾರಿಕೆ ಇಲಾಖೆಯ ನಿರ್ದೇಶಕಿಯಾಗಿ ಸೇವೆಸಲ್ಲಿಸು ತ್ತಿದ್ದು, ತೋಟಗಾರಿಕೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿ ರುವ ರೈತರಿಗೆ ಸಕಲ ಸೌಲಭ್ಯ ಗಳನ್ನು ಕಲ್ಪಿಸಲು ವಿಶೇಷ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದ್ದಾರೆ.

ರೈತರಿಗೆ ತರಬೇತಿ: ನರೇಗಾ ಬಳಸಿಕೊಂಡು ಹೊಸದಾಗಿ 51 ಸಾವಿರ 808 ಎಕರೆ ಪ್ರದೇಶ ದಲ್ಲಿ ತೋಟಗಾರಿಕೆ ಬೆಳೆಗಳನ್ನು ವಿಸ್ತರಿಸಲಾಗಿದೆ. ಜೊತೆಗೆ 109ಎಕರೆ ಪ್ರದೇಶವನ್ನು ನಿರ್ವಹಣೆ ಮಾಡಲಾಗಿದೆ. ಕೃಷಿಗೆಪರ್ಯಾಯವಾಗಿ ತೋಟಗಾರಿಕೆ ಕ್ಷೇತ್ರ ದತ್ತ ರೈತರನ್ನುಆಕರ್ಷಿಸಲು ವಿಭಿನ್ನ ಯೋಜನೆಗಳನ್ನು ಪರಿಚಯಿಸುತ್ತಿದ್ದಾರೆ. ತೋಟಗಾರಿಕೆ ಇಲಾಖೆಯ ಫಾರಂಗಳನ್ನುವೈಜ್ಞಾ ನಿಕವಾಗಿ ಮತ್ತು ಆಧುನಿಕವಾಗಿ ಅಭಿವೃದ್ಧಿ ಗೊಳಿಸಿ, ಅದರ ಮೂಲಕ ರಾಜ್ಯಾದ್ಯಂತ ತೋಟಗಾರಿಕೆ ಕ್ಷೇತ್ರ ದಲ್ಲಿ ಸಕ್ರಿಯ ವಾಗಿ ತೊಡಗಿಸಿಕೊಂಡಿರುವ ಪ್ರಗತಿಪರ ರೈತರು ಮತ್ತು ಸಾಮಾನ್ಯ ರೈತರಿಗೂ ತೋಟಗಾರಿಕೆಬೆಳೆಗಳನ್ನು ಬೆಳೆದು ಆದಾಯ ದ್ವಿಗುಣಗೊಳಿಸುವಸಲು ವಾಗಿ ಅಗತ್ಯ ಮಾರ್ಗದರ್ಶನ ಮತ್ತು ತರಬೇತಿಗಳನ್ನು ನೀಡಲಾಗುತ್ತಿದೆ.

ತೋಟಗಾರಿಕೆ ಇಲಾಖೆಗೂ ವರದಾನ: ಕೇಂದ್ರಮತ್ತು ರಾಜ್ಯ ಸರ್ಕಾರ ಗಳಿಂದ ತೋಟಗಾರಿಕೆ ಕ್ಷೇತ್ರಗಳಅಭಿವೃದ್ಧಿಗಾಗಿ ದೊರೆಯುವ ಯೋಜನೆ ಗಳನ್ನು ಅರ್ಹಫಲಾನುಭವಿಗಳಿಗೆ ತಲುಪಿಸುವ ಸಲುವಾಗಿ ವೈಜ್ಞಾನಿಕಮತ್ತು ತಂತ್ರಜ್ಞಾನ ವಿಧಾನಗಳನ್ನು ಅಳವಡಿಸಿಕೊಂಡುರೈತರು ಬೆಳೆಯುವ ಉತ್ಪನ್ನಗಳಿಗೆ ಕ್ರಿಮಿಕೀಟಗಳ ಬಾಧೆಅಥವಾ ರೋಗದ ಲಕ್ಷಣ ಕಂಡು ಬಂದರೆ, ಅದನ್ನುಆ್ಯಪ್‌ ಮೂಲಕ ಪರಿಹರಿ ಸುವ ಯೋಜನೆ ಸಹಇಲಾಖೆಯಿಂದ ರೂಪಿಸಲಾಗಿದೆ. ಈಗಾ ಗಲೇ ರೈತರಿಗೆ ಇಲಾಖೆ ವತಿಯಿಂದ ಸಿದ್ಧಪಡಿಸಿ ರುವ ಆ್ಯಪ್‌ ಕುರಿತುಅರಿವು ಮೂಡಿಸಲಾಗಿದೆ.

ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.