ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಹೆಚ್ಚಳ
Team Udayavani, Apr 8, 2017, 4:48 PM IST
ಚಿಕ್ಕಬಳ್ಳಾಪುರ: ಸಿನಿಮಾ ಹಾಗೂ ದೃಶ್ಯ ಮಾಧ್ಯಮಗಳ ಪ್ರಭಾವದಿಂದಾಗಿ ದೈಹಿಕ ಆರೊಗ್ಯ ಕಾಪಾಡಿಕೊಳ್ಳಲು ಹೆಚ್ಚಿನ ಕಾಳಜಿ ತೋರುವ ಮನುಷ್ಯರು, ಮಾನಸಿಕ ಆರೋಗ್ಯವನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದ್ದಾರೆ. ಇದರ ಪರಿಣಾಮವಾಗಿ ಇಂದು ಸಮಾಜದಲ್ಲಿ ಮಾನಸಿಕ ಖಿನ್ನತೆ ರೋಗದಿಂದ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧಾ ತೀವ್ರ ಕಳವಳ ವ್ಯಕ್ತಪಡಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಆಯೋಜಿಸಿದ್ದ ವಿಶ್ವ ಆರೋಗ್ಯ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಜಾಗತೀಕರಣದ ಪ್ರಭಾವದಿಂದ ಮಾನವ ಸಂಬಂಧಗಳು ಮೂಲೆಗುಂಪಾಗಿ ಪರಸ್ಪರ ಮುಕ್ತವಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ. ನಿರ್ಜಿàವ ವಸ್ತುಗಳೊಂದಿಗೆ ಭಾವನೆಗಳನ್ನು ಹಂಚಿಕೊಂಡಾಗ ಆ ಸಮಸ್ಯೆಗೆ ಪರಿಹಾರ ಎಂಬುದೇ ಇರುವುದಿಲ್ಲ. ದಿನನಿತ್ಯದ ಜಂಜಾಟ, ಯಾಂತ್ರಿಕತೆಯನ್ನು ಮೆಟ್ಟಿ ಆರೋಗ್ಯವನ್ನು ಬಲಿಷ್ಠಗೊಳಿಸಬೇಕು. ಆರಂಭಿಕ ಹಂತದಲ್ಲಿಯೇ ಮಾನಸಿಕ ಕಾಯಿಲೆಯನ್ನು ಪತ್ತೆ ಹಚ್ಚಿ, ಚಿಕಿತ್ಸೆ ನೀಡಬೇಕು. ಇದಕ್ಕೆ ತರಬೇತಿ ಅಗತ್ಯ.
ಮಕ್ಕಳನ್ನು ಗ್ಯಾಜೆಟ್ಗಳಿಂದ ದೂರವಿಡಬೇಕು. ಪ್ರತಿನಿತ್ಯ ಯೋಗ, ಧ್ಯಾನ ಮಾಡುವ ಮೂಲಕ ಮಾನಸಿಕ ಖಿನ್ನತೆಯಿಂದ ದೂರ ಉಳಿಯಬಹುದಾಗಿದೆ. ಮನುಷ್ಯ ದೈಹಿಕ ಆರೋಗ್ಯಕ್ಕೆ ಕೊಡುವ ಪ್ರಾಮುಖ್ಯತೆಯನ್ನು ಮಾನಸಿಕ ಆರೋಗ್ಯಕ್ಕೆ ನೀಡುತ್ತಿಲ್ಲ. ನಿರ್ಜಿàವ ವಸ್ತುಗಳೊಂದಿಗೆ ಭಾವನೆ ಹಂಚಿಕೊಳ್ಳಲು ಶುರು ಮಾಡಿದಾಗ ಖಿನ್ನತೆ ರೋಗ ಆವರಿಸಿಕೊಳ್ಳುತ್ತದೆ ಎಂದು ಹೇಳಿದರು.
ಸದೃಢ ಮಾನಸಿಕ ಆರೋಗ್ಯ ಮುಖ್ಯ: ಜಿಪಂ ಸಿಇಒ ಜೆ.ಮಂಜುನಾಥ ಮಾತನಾಡಿ, ಮಾನವನಿಗೆ ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯವಾಗಿದೆ. 2017 ನೇ ವಿಶ್ವ ಆರೋಗ್ಯ ದಿನಾಚರಣೆ ವಿಷಯ “ಖಿನ್ನತೆ ಅಥವಾ ಬೇಜಾರು ಕಾಯಿಲೆ ಕುರಿತ ಚರ್ಚೆ’ಯಾಗಿದೆ. ಖಿನ್ನತೆ ಎಂಬುದು ಪ್ರಮುಖಿ ಮಾನಸಿಕ ಕಾಯಿಲೆಯಾಗಿದೆ. ಇದನ್ನು ದೂರ ಮಾಡಲು ತ್ವರಿತವಾಗಿ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದರು.
ಖಿನ್ನತೆಯಿಂದ ಸಾಧನೆ ಅಸಾಧ್ಯ: ಇತ್ತೀಚಿನ ದಿನಗಳಲ್ಲಿ ವಿಶ್ವಾದ್ಯಂತ 350 ಮಿಲಿಯನ್ ಜನರು ಖಿನ್ನತೆಗೆ ಒಳಗಾಗಿ¨ªಾರೆ. ಭಾರತದಲ್ಲೂ ಹೆಚ್ಚು ಜನರು ಮಾನಸಿಕ ಖಿನ್ನತೆಗೆ ಒಳಗಾಗಿರುವುದು ಕಂಡುಬಂದಿದೆ. ಮನಸು ಸರಿಯಿಲ್ಲದ ಯಾವುದೇ ವ್ಯಕ್ತಿ ಸಾಧನೆ ಮಾಡಲು ಸಾಧ್ಯವಿಲ್ಲ. ಪ್ರಸ್ತುತ ದಿನಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗಿ ಖಿನ್ನತೆಗೊಳಗಾಗುತ್ತಾರೆ. ಆದರೆ, ಇದನ್ನು ತಡೆಗಟ್ಟುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ. ಮಾನಸಿಕ ಕಾಯಿಲೆ ದೂರ ಮಾಡಲು ಜಿಲ್ಲಾ ಆರೋಗ್ಯ ಇಲಾಖೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.
ರೋಗ ತಡೆಗೆ ಕ್ರಮ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ರವಿಶಂಕರ್ ಮಾತನಾಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಆಶಾ ಕಾರ್ಯಕರ್ತೆಯರ ಮೂಲಕ ವಿವಿಧ ರೋಗಗಳನ್ನು ತಡೆಗಟ್ಟುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಮೂಢನಂಬಿಕೆಗಳನ್ನು ಹೋಗಲಾಡಿಸುವ ಪ್ರಯತ್ನ ಮಾಡಿದೆ.
ಅದರ ಫಲವಾಗಿ ಕಳೆದ ವರ್ಷ ಆರೋಗ್ಯ ರಕ್ಷಣೆಯಲ್ಲಿ ಒಳ್ಳೆಯ ಫಲಿತಾಂಶ ಬಂದಿದೆ. 2015 ರಲ್ಲಿ 124 ಮನೆ ಹೆರಿಗೆ ಪ್ರಕರಣ ವರದಿಯಾಗಿದ್ದು, 2016ರಲ್ಲಿ 62ಕ್ಕೆ ಇಳಿಕೆಯಾಗಿದೆ. 2015ರಲ್ಲಿ 304 ಶಿಶು ಮರಣ ಪ್ರಕರಣಗಳು ವರದಿಯಾಗಿದ್ದರೆ, ಕಳೆದ ವರ್ಷ 195ಕ್ಕೆ ಇಳಿಕೆಯಾಗಿದೆ. ತಾಯಿ ಮರಣ 26 ರಿಂದ 19ಕ್ಕೆ ಇಳಿಕೆಯಾಗಿದೆ. ಪುರುಷರ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಶೇ.38 ರಷ್ಟಾಗಿದೆ ಎಂದು ಮಾಹಿತಿ ನೀಡಿದರು.
ಸಾಧಕರಿಗೆ ಸನ್ಮಾನ: ವಿಶ್ವ ಆರೋಗ್ಯ ದಿನಾಚರಣೆಯಲ್ಲಿ ಆರೋಗ್ಯ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಮನೋತಜ್ಞ ಕಿಶೋರ್, ಶುಶ್ರೂಷಕಿಯಾಗಿ 30 ವರ್ಷ ಸೇವೆ ಸಲ್ಲಿಸಿದ ವಿಜಯಲಕ್ಷಿ ಮತ್ತಿತರರನ್ನು ಸನ್ಮಾನಿಸಲಾಯಿತು. ಜಿಲ್ಲಾ ಆಯುಷ್ ಅಧಿಕಾರಿ ಇಂದುಮತಿ, ತಾಲೂಕು ಆರೋಗ್ಯಾಧಿಕಾರಿ ಡಾ.ಮಿತ್ರಣ್ಣ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಸುರೇಂದ್ರನಾಥ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು, ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಹೊಸ ಸೇರ್ಪಡೆ
Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!
Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ