ಬೆಲೆ ಸಿಗದೇ ಹೂವಿನ ತೋಟ ನಾಶ


Team Udayavani, Apr 10, 2020, 3:21 PM IST

ಬೆಲೆ ಸಿಗದೇ ಹೂವಿನ ತೋಟ ನಾಶ

ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ: ಲಕ್ಷಾಂತರ ರೂ. ಬಂಡವಾಳ ಹಾಕಿ ಹೂವು ಬೆಳೆದರೂ ಕೊರೊನಾ ವೈರಸ್‌ ಸಂಕಷ್ಟದಿಂದ ಹೂವು ಮಾರಾಟಗೊಳ್ಳಲಿಲ್ಲ ಎಂದು ಮನನೊಂದ ರೈತರು ತಮ್ಮ ಹೂವು ತೋಟಗಳನ್ನು ನಾಶಗೊಳಿಸುತ್ತಿರುವ ಪ್ರಸಂಗ ಗಳು ಜಿಲ್ಲೆಯಲ್ಲಿ ವರದಿಯಾಗುತ್ತಿವೆ.

ಹೌದು, ಪುಪ್ಪೋದ್ಯಮಕ್ಕೆ ಹೆಸರಾದ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಕೊರೊನಾ ಸಂಕಷ್ಟ  ದಿಂದ ಇಡೀ ದೇಶವೇ ಲಾಕ್‌ಡೌನ್‌ ಆಗಿರುವು ದರಿಂದ ಹೂವು ಬೆಳೆಗಾರರಿಗೆ ಸೂಕ್ತ ಮಾರುಕಟ್ಟೆ ಸಿಗದೇ ಹಾಕಿದ ಬಂಡವಾಳ ಕೈ ಸೇರದೆ ಕಂಗಾಲಾಗಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ದ್ರಾಕ್ಷಿಯಷ್ಟೇ ಹೂವು ಬೆಳೆಯುವ ರೈತರ ಸಂಖ್ಯೆ ಅಧಿಕವಾಗಿದೆ. ದ್ರಾಕ್ಷಿ ಬೆಲೆ ಕುಸಿತಗೊಂಡಾಗ ಸರ್ಕಾರ ಅವರ ನೆರವಿಗೆ ಧಾವಿಸಿ ಮಾರಾಟ ಹಾಗೂ ಸಾಗಾಟಕ್ಕೆ ಅವಕಾಶ ನೀಡಿತು. ಅಲ್ಲದೇ ಬೆಂಗಳೂರು ಮಹಾ ನಗರದಲ್ಲಿ ಸೂಕ್ತ ಮಾರುಕಟ್ಟೆ ಭರವಸೆ ನೀಡಿತು. ಹೀಗಾಗಿ ಸ್ವಲ್ಪ ಮಟ್ಟಿಗೆ ದ್ರಾಕ್ಷಿ ಬೆಳೆಗಾರರು ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಆದರೆ ಹೂವು ಬೆಳೆಗಾರರಿಗೆ ಮಾರುಕಟ್ಟೆ ಇಲ್ಲದೇ ತೀವ್ರ ಸಮಸ್ಯೆ ಆಗಿದೆ. ಹೂವು ಬೆಳೆದರೂ ಬೇಡಿಕೆ ಇಲ್ಲದ ಪರಿಣಾಮ ಬೆಲೆ ಸಿಗದಂತಾಗಿದ್ದು, ಲಕ್ಷಾಂತರ ರೂ. ಬಂಡವಾಳ ಹಾಕಿದ ರೈತರು ಈ ಕೈ ಸುಟ್ಟುಕೊಳ್ಳುವ ಪರಿಸ್ಥಿತಿ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ.

ಹಲವು ತಿಂಗಳಿಂದ ಸಾಕಷ್ಟು ಬೇಸಾಯ ಮಾಡಿ ಹೂವು ತೋಟಕ್ಕೆ ಬಂಡವಾಳ ಹೂಡಿದ ರೈತ ಈಗ ಕೊರೊನಾ ಸಂಕಷ್ಟದಿಂದ ಹೂವುಗೆ ಬೇಡಿಕೆ ಇಲ್ಲದೇ ಬೆಳೆದ ಹೂವು ತೋಟ ಗಳನ್ನು ಜೆಸಿಬಿಯಿಂದ ನಾಶಗೊಳಿಸುತ್ತಿ ರುವ ದೃಶ್ಯ ಗಳು ಜಿಲ್ಲೆಯಲ್ಲಿ ಕಂಡು ಬಂದಿದೆ.

ತೋಟ ತೆರವು: ದ್ರಾಕ್ಷಿಯನ್ನು ತಿಪ್ಪೆಗಳಿಗೆ ಎಸೆದಂತೆ ಹೂವು ಬೆಳೆಗಾರರು ನಿತ್ಯ ಹೂವು ಕಿತ್ತು ತಿಪ್ಪೆಗೆ ಏಕೆ ಹಾಕಬೇಕೆಂದು ತೋಟಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಮುಂ ದಾ ಗಿರುವುದು ಚಿಕ್ಕಬಳ್ಳಾಪುರ ತಾಲೂಕಿ ನಲ್ಲಿ ಸಾಮಾನ್ಯವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಬೆಳೆಯುವ ತರಹೇವಾರಿ ಗುಲಾಬಿ ಹೂವುಗಳು ನೆರೆಯ ಹೈದರಾಬಾದ್‌ ಮೂಲಕ ವಿದೇಶ ಗಳಿಗೆ ರಫ್ತು ಅಗುತ್ತಿತ್ತು. ಆದರೆ ಕಳೆದ ಎರಡು ತಿಂಗಳಿಂದ ಜಗತ್ತಿಗೆ ಆವರಿಸಿರುವ  ಕೋವಿಡ್ 19 ವೈರಸ್‌ನಿಂದ ಹೂವುಗೆ ಬೇಡಿಕೆ ಕುಸಿದಿರುವುದರಿಂದ ರೈತರು ಅನಿವಾರ್ಯವಾಗಿ ಹೂವು ತೋಟ ಗಳನ್ನು ತೆರವು ಮಾಡುತ್ತಿದ್ದಾರೆ.

ಸುಮಾರು ಎರಡು ಲಕ್ಷ ರೂ. ಖರ್ಚು ಮಾಡಿ ಹೂವು ತೋಟ ಬೆಳೆಸಿದೆವು. ಫ‌ಸಲು ಚೆನ್ನಾಗಿ ಬಂತು. ಆದರೆ ಕೋವಿಡ್ 19 ದಿಂದ ಹೂವು ಮಾರಾಟವಾಗಲಿಲ್ಲ. ಮಾರುಕಟ್ಟೆ ಬಂದ್‌ ಆಗಿದ್ದರಿಂದ ತೋಟ ತೆರವು ಮಾಡಿದೆವು. ಮಂಚನಬಲೆ ಶ್ರೀನಿವಾಸ್‌, ರೈತ

 

–  ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.