ಜ್ಞಾನ, ತಾಂತ್ರಿಕತೆಯ ಮೇಲೆ ದೇಶದ ಭವಿಷ್ಯ ನಿರ್ಧಾರ


Team Udayavani, Oct 29, 2019, 3:00 AM IST

jnana-tatn

ಚಿಕ್ಕಬಳ್ಳಾಪುರ: ದೇಶದ ಆರ್ಥಿಕ ಪ್ರಗತಿ ಜೊತೆಗೆ ಇಂದು ಸಮಾಜದ ಸಮಗ್ರ ಬೆಳವಣಿಗೆಗೆ ತಾಂತ್ರಿಕತೆಯ ಅಭಿವೃದ್ಧಿ ಮೇಲೆ ನಿಂತಿದ್ದು, ಜ್ಞಾನ ಹಾಗೂ ತಾಂತ್ರಿಕತೆ ಒದಗಿಸುವ ಶಿಕ್ಷಣ ಸಂಸ್ಥೆಗಳು ನಿಜವಾಗಿ ದೇಶಕ್ಕೆ ನಾಯಕತ್ವ ರೂಪಿಸುವ ಹೆಚ್ಚು ಹೊಣೆಗಾರಿಕೆ ಹೊಂದಿವೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಮತ್ತು ಐಟಿ-ಬಿಟಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ್‌ ತಿಳಿಸಿದರು.

ನಗರದ ಹೊರ ವಲಯದ ಮುದ್ದೇನಹಳ್ಳಿಯಲ್ಲಿರುವ ವಿಟಿಯು ಸ್ನಾತಕೋತ್ತರ ಕೇಂದ್ರದಲ್ಲಿ ಸೋಮವಾರ ವಿಟಿಯು ಸ್ನಾತಕೋತ್ತರ ಕೇಂದ್ರದ ಮೂಲ ಸೌಕರ್ಯ ಪರಿಶೀಲಿಸಿದ ಬಳಿಕ ವಿದ್ಯಾರ್ಥಿಗಳೊಂದಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಪ್ರಾಮಾಣಿಕ ಪ್ರಯತ್ನ ಅಗತ್ಯ: ತಂತ್ರಜ್ಞಾನ ಹಾಗೂ ಜ್ಞಾನ ದೇಶದ ಭವಿಷ್ಯವನ್ನು ನಿರ್ಧರಿಸಲಿವೆ. ತಾಂತ್ರಿಕ ಶಿಕ್ಷಣ ನೀಡುವ ಸಂಸ್ಥೆಗಳಿಗೆ ಎಷ್ಟೇ ಒತ್ತು ಕೊಟ್ಟರೂ ಸಾಲದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪಾತ್ರ ಅಮೂಲ್ಯ. ಶಿಕ್ಷಕರು ಕೂಡ ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದರು.

ವಿದ್ಯಾರ್ಥಿಗಳಿಗೆ ಸಾಮಾಜಿಕ ಹೊಣೆಗಾರಿಕೆ ಬಹಳ ಮುಖ್ಯ. ತಾವು ಕಲಿತ ಜ್ಞಾನವನ್ನು ಸಮಾಜದ ಸಮಸ್ಯೆ, ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ರೀತಿಯಲ್ಲಿ ಸಮಾಜಕ್ಕೆ ಧಾರೆ ಎರೆಯಬೇಕು. ಇತ್ತೀಚೆಗೆ ಕಾಲ ಕಳೆದು ಪದವಿ ಪಡೆಯುವರ ಸಂಖ್ಯೆ ಹೆಚ್ಚಾಗಿದೆ. ಅದು ನಿಜವಾದ ವಿದ್ಯಾರ್ಥಿ ಲಕ್ಷ್ಮಣವಲ್ಲ. ಕ್ಯಾಂಪಸ್‌ನಲ್ಲಿ ಇದ್ದು ಕಲಿತರೆ ಅದು ಬದುಕಿಗೆ ನೆರವಾಗುತ್ತದೆ ಎಂದರು.

ಅದ್ಭುತ ಕಟ್ಟಡ: ಮುದ್ದೇನಹಳ್ಳಿಯಲ್ಲಿರುವ ವಿಟಿಯು ಸಂಸ್ಥೆ ದೊಡ್ಡ ಮಟ್ಟಕ್ಕೆ ಬೆಳೆಯಬೇಕಿದೆ. ಇಲ್ಲಿನ ವಿಟಿಯು ಸ್ನಾತಕೋತ್ತರ ಕೇಂದ್ರದ ಕಟ್ಟಡಗಳು ಅದ್ಭುತವಾಗಿ ಮೂಡಿ ಬಂದಿವೆ. ಆದರೆ ಇದಕ್ಕೆ ಬೆಂಬಲವಾಗಿ ಬೇಕಾದ ಮೂಲ ಸೌಕರ್ಯಗಳ ಕೊರತೆ ಇರುವುದು ನನ್ನ ಗಮನಕ್ಕೆ ಬಂದಿದೆ.

ಇಲ್ಲಿ ಭವ್ಯವಾದ ಕಟ್ಟಡ ಕಟ್ಟಲು ಸರ್‌ ಎಂ.ವಿಶೇಶ್ವರಯ್ಯನವರು ತವರು ಮುದ್ದೇನಹಳ್ಳಿ ಇದೆ. ಆದ್ದರಿಂದ ಇಲ್ಲಿ ವಿಟಿಯು ಸ್ನಾತಕೋತ್ತರ ಕೇಂದ್ರವನ್ನು ತೆರೆಯಲಾಗಿದೆ. ಸರ್‌ಎಂವಿಗೆ ಗೌರವ ಸಲ್ಲುವ ರೀತಿಯಲ್ಲಿ ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಈ ಸಂಸ್ಥೆ ರಾಷ್ಟ್ರಕ್ಕೆ ಮಾದರಿ ಆಗುವ ರೀತಿಯಲ್ಲಿ ಬೆಳೆಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ಕುಲಪತಿ ಡಾ.ಕರಿಸಿದ್ದಪ್ಪ, ರಿಜಿಸ್ಟ್ರಾರ್‌ ಡಾ.ಎ.ಎಸ್‌.ದೇಶಪಾಂಡೆ, ಜಿಪಂ ಸಿಇಒ ಬಿ.ಫೌಜಿಯಾ ತರುನ್ನುಮ್‌, ಡಿಸಿಎಂ ಆಪ್ತ ಕಾರ್ಯದರ್ಶಿ ಪ್ರದೀಪ್‌, ತಾಪಂ ಇಒ ಹರ್ಷವಧನ್‌ ಸೇರಿದಂತೆ ಮುದ್ದೇನಹಳ್ಳಿ ವಿಟಿಯುನ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಸಚಿವರು, ವಿಟಿಯು ಕೈಗೊಂಡಿರುವ ಶೈಕ್ಷಣಿಕ ಕಾರ್ಯಕ್ರಮಗಳು, ಪರೀಕ್ಷಾ ವಿಧಾನ, ವಿಟಿಯುನಲ್ಲಿ ಲಭ್ಯವಿರುವ ಸಂಶೋಧನಾ ಕೋರ್ಸ್‌ಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಂವಾದದಲ್ಲಿ ವಿಟಿಯು ಸಮಸ್ಯೆಗಳ ಅನಾವರಣ: ಉನ್ನತ ಶಿಕ್ಷಣ ಸಚಿವ ಇಲಾಖೆ ಕಾರ್ಯಭಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ವಿಟಿಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮ, ಮೂಲ ಸೌಕರ್ಯಗಳಿಂದ ಬಳಲುತ್ತಿರುವ ವಿಟಿಯು ಅವ್ಯವಸ್ಥೆಗಳ ಆಗರ ಅನಾವರಣಗೊಂಡಿತು.

ಸ್ನಾತಕೋತ್ತರ ಕೇಂದ್ರ ಆರಂಭಗೊಂಡು 6 ವರ್ಷ ಕಳೆದಿದೆ. ಇದುವರೆಗೂ ಸುಮಾರು ಜನ ಬಂದು ನಮಗೆ ಭರವಸೆ ಕೊಟ್ಟು ಹೋಗುತ್ತಿದ್ದಾರೆ. ನೀವು ಬಂದು ಹೋದರೂ ನಮಗೆ ರಸ್ತೆ ಸರಿ ಹೋಗುತ್ತದೆ ಎನ್ನುವುದು ಏನು ಖಾತ್ರಿ ಎಂದು ವಿದ್ಯಾರ್ಥಿಯೊಬ್ಬ ಡಿಸಿಎಂರನ್ನು ಪ್ರಶ್ನಿಸಿದರು.

ಕಾಲೇಜು ಕಟ್ಟಡ ಚೆನ್ನಾಗಿದೆ. ಆದರೆ ಸರಿಯಾದ ರಸ್ತೆ ಇಲ್ಲ. ಬಸ್‌ ನಿಲ್ದಾಣ ಬಿಡಿ ಕನಿಷ್ಠ ಮಳೆ, ಗಾಳಿ ಬಿಸಿಲಿನಿಂದ ಆಶ್ರಯ ಪಡೆಯಲು ತಂಗುದಾಣ ಇಲ್ಲ. ಬೇಸಿಗೆ ಬಂದರೆ ಕಾಲೇಜಿನಲ್ಲಿ ಹನಿ ನೀರು ಸಿಗಲ್ಲ. ವಿದ್ಯುತ್‌ ಸಮಸ್ಯೆ ಹೇಳ ತೀರದಾಗಿದೆ. ಸರಿಯಾದ ಕ್ಯಾಂಟೀನ್‌ ವ್ಯವಸ್ಥೆ ಇಲ್ಲ. ಆರೋಗ್ಯದಲ್ಲಿ ಏರುಪೇರು ಆದರೆ ವೈದ್ಯಕೀಯ ಚಿಕಿತ್ಸೆ ಸಿಗಲ್ಲ.

ಎಲ್ಲಾ ಮಕ್ಕಳಿಗೆ ಹಾಸ್ಟೆಲ್‌ ಸೌಕರ್ಯ ಇಲ್ಲ. ಕುಡಿಯುವ ನೀರಿನ ಸಮಸ್ಯೆ ವಿಪರೀತವಾಗಿದೆ. ಮೊದಲು ದುರಸ್ತಿ ಮಾಡದಿರೆ ಸಾಕು ಎಂದರು. ಸುಮಾರು ವಿದ್ಯಾರ್ಥಿಗಳು, ಉಪನ್ಯಾಸಕರು, ಭದ್ರತಾ ಸಿಬ್ಬಂದಿ ಬಿದ್ದು ಗಾಯಗೊಂಡಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಸಂಕಷ್ಟವನ್ನು ಉನ್ನತ ಶಿಕ್ಷಣ ಸಚಿವರ ಮುಂದೆ ತೆರೆದಿಟ್ಟರು.

ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ನೀಡುವಂತೆ ನಮಗೂ ಉಚಿತವಾಗಿ ಲ್ಯಾಟ್‌ಟಾಪ್‌ ನೀಡಬೇಕು ಹಾಗೂ ವಿಟಿಯು ವಿಧಿಸುವ ಶುಲ್ಕ ಸಂಪೂರ್ಣ ಉಚಿತ ಮಾಡಿದರೆ ಕಾಲೇಜಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬರುತ್ತಾರೆ. ಶುಲ್ಕ ಕಡಿತಗೊಳಿಸಬೇಕೆಂದು ವಿದ್ಯಾರ್ಥಿಗಳು ಕೋರಿದರು. ಎಲ್ಲಾ ಸಮಸ್ಯೆಗಳ ಬಗ್ಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸುವುದಾಗಿ ಸಚಿವರು ಭರವಸೆ ನೀಡಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.