ಕೃಷಿ ಕ್ಷೇತ್ರ ಅಭಿವೃದ್ಧಿಗೆ ಸಂಕಲ್ಪ
Team Udayavani, Nov 20, 2019, 3:38 PM IST
ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪರಿಸರ ಮತ್ತು ಜಲ ಸಂರಕ್ಷಣೆಗಾಗಿ ವಿಶೇಷ ಕಾಳಜಿ ವಹಿಸಿ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವಂತೆ ಮಾಡಿದ ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್,ತಾಲೂಕಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ರೈತರು ಅಭಿವೃದ್ಧಿಗೊಳಿಸಿರುವ ತೋಟ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲೆಯಲ್ಲಿ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅವರು, ನರೇಗಾ ಯೋಜನೆಯಡಿ ರೇಷ್ಮೆ ಕೃಷಿ ಮತ್ತು ತೋಟಗಾರಿಕೆ ಬೆಳೆ ಬೆಳೆಯಲು ರೈತರಿಗೆ ಅನುಕೂಲ ಕಲ್ಪಿಸಲು ಮುಂದಾಗಿದ್ದಾರೆ. ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ಅಭಿವೃದ್ಧಿ ಗೊಳಿಸಿರುವ ತೋಟಗಳನ್ನು ವೀಕ್ಷಿಸಿ ರೈತ ರೊಂದಿಗೆ ಸಮಾಲೋಚನೆ ನಡೆಸಿದರು.
ಪರಿಶೀಲನೆ: ಗ್ರಾಮೀಣಾಭಿವೃದ್ಧಿ ಮತ್ತುನೈರ್ಮಲ್ಯ ಕಾಪಾಡಲು ಪೂರಕವಾಗಿರುವ ನರೇಗಾ ಯೋಜನೆಯಡಿ ಮಳೆ ನೀರು ಸಂರಕ್ಣೆ ಮಾಡಲು ಮಳೆನೀರು ಕೊಯ್ಲು, ಚೆಕ್ ಡ್ಯಾಂಗಳು ಮತ್ತು ಕಲ್ಯಾಣಿಗಳನ್ನು ನಿರ್ಮಿಸುವ ಜೊತೆಗೆ ರೈತರು ವೈಯಕ್ತಿಕವಾಗಿ ನರೇಗಾ ಯೋಜನೆಯ ಲಾಭ ಪಡೆಯಲು ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ಮಾಡಲು ಯೋಜನೆ ರೂಪಿಸಿದರಲ್ಲದೇ ಸ್ವತಃ ರೈತರ ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಅರಿವು ಮೂಡಿಸಲು ಸೂಚನೆ: ಭೇಟಿ ವೇಳೆಯಲ್ಲಿ ರೈತರೊಂದಿಗೆ ಮುಕ್ತವಾಗಿ ಸಮಾ ಲೋಚನೆ ನಡೆಸಿದ ಅವರು, ರೈತರು ಯಾವ ಬೆಳೆ ಬೆಳೆದಿದ್ದಾರೆ, ಇಲಾಖೆಯಿಂದ ಯಾವ ರೀತಿ ಪ್ರೋತ್ಸಾಹ ಮತ್ತು ಸಹಕಾರ ದೊರೆಯುತ್ತಿದೆ ಸೇರಿದಂತೆ ಇನ್ನಿತರೆ ವಿಚಾರಗಳ ಬಗ್ಗೆಸಂವಾದ ನಡೆಸಿ ಜಿಲ್ಲಾ ಪಂಚಾಯಿತಿ ಹಾಗೂರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ದೊರೆಯುವ ಯೋಜನೆಗಳಕುರಿತು ರೈತರಿಗೆ ಅರಿವು ಮೂಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈಗಾಗಲೇಜಿಲ್ಲೆಯ ಗುಡಿ ಬಂಡೆ ತಾಲೂಕಿನಲ್ಲಿ ಕೃಷಿ ಬೆಳೆಗಳನ್ನು ವೀಕ್ಷಣೆ ಮಾಡಿ ಮಂಗಳವಾರತಾಲೂಕಿನ ಬೂದಾಳ ಗ್ರಾಮದಲ್ಲಿ ನರೇಗಾಯೋಜನೆಯಡಿ ಸಿದ್ಧ ಪಡಿಸಿರುವ ಹಣ್ಣು ಮಾಗಿಸುವ ಘಟಕ, ವೀರಾಪುರ ಗ್ರಾಮದಲ್ಲಿ ಸೀಬೆ ತೋಟ ಹಾಗೂ ಬಳಿಕ ಬೀರಪ್ಪನ ಹಳ್ಳಿಯಲ್ಲಿ ಗೋಡಂಬಿ ಸಂಸ್ಕರಣ ಘಟಕ, ಚಿಂತಾಮಣಿ ತಿನ್ನಕಲ್ಲು ದ್ರಾಕ್ಷಿ ಮತ್ತು ಗೋಡಂಬಿ, ಸೀಬೆ ತೋಟ ಪರಿಶೀಲಿಸಿದ್ದಾರೆ. ಜಿಪಂ ಸಿಇಒ ಅವರೊಂದಿಗೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕುಮಾರಸ್ವಾಮಿಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು