ಅತೃಪ್ತ ಶಾಸಕರ ಅನರ್ಹತೆ ಖಚಿತ, 15 ಶಾಸಕರಿಗೆ ರಾಜಕೀಯ ತ್ರಿಶಂಕು ಸ್ಥಿತಿ; ರೆಡ್ಡಿ
Team Udayavani, Jul 24, 2019, 2:59 PM IST
ಚಿಕ್ಕಬಳ್ಳಾಪುರ: ಪಕ್ಷಕ್ಕೆ ದ್ರೋಹ ಎಸಗಿದ ಶಾಸಕರ ವಿರುದ್ಧ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಈಗಾಗಲೇ ಸ್ಪೀಕರ್ ಗೆ ದೂರು ನೀಡಿದ್ದಾರೆ. ಕಾನೂನು ಪ್ರಕಾರ ಅವರ ವಿರುದ್ಧ ಶಿಸ್ತು ಕ್ರಮ ಖಚಿತ. ಬಂಡಾಯ ಶಾಸಕರಿಗೆ ರಾಜಕೀಯ ತ್ರಿಶಂಕು ಸ್ಥಿತಿ ನಿರ್ಮಾಣವಾಗಲಿದೆ ಎಂದು ಮಾಜಿ ಕೃಷಿ ಸಚಿವ ಹೆಚ್.ಶಿವಶಂಕರ್ ರೆಡ್ಡಿ ತಿಳಿಸಿದ್ದಾರೆ.
ನಾವು ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡಲು ಸಿದ್ದರಿದ್ದೇವೆ. ಬಿಜೆಪಿ ಅನೈತಿಕ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.
ಅವರು ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದ ಗ್ರಾಪಂ ನೌಕರರ ಸಮ್ಮೇಳನ ಉದ್ಘಾಟಿಸಿದ ನಂತರ ಸುದ್ದಿಗಾರರ ಜತೆ ಮಾತನಾಡುತ್ತ ಈ ಅಭಿಪ್ರಾಯ ವ್ಯಕ್ತಪಡಿಸಿದರು.