ಉಪ ಚುನಾವಣೆಗೆ ಜಿಲ್ಲಾಡಳಿತ ತಾಲೀಮು


Team Udayavani, Sep 23, 2019, 3:00 AM IST

upachuna

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ನ್ಯಾಯ ಸಮ್ಮತ ಹಾಗೂ ಮುಕ್ತ ಚುನಾವಣೆ ನಡೆಸಲು ತಾಲೀಮು ಆರಂಭಿಸಿರುವ ಜಿಲ್ಲಾಡಳಿತ ರಜೆ ದಿನವಾದ ಭಾನುವಾರ ಸಹ ಜಿಲ್ಲಾಧಿಕಾರಿ ಆರ್‌.ಲತಾ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದು ಚುನಾವಣೆ ಸಿದ್ಧತೆಗಳ ಕುರಿತು ಮಾರ್ಗದರ್ಶನ ನೀಡಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಸಭಾಂಗಣದಲ್ಲಿ ಮಧ್ಯಾಹ್ನ 3 ರಿಂದ 4 ಗಂಟೆ ವರೆಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ, ಚುನಾವಣೆಗೆ ಬೇಕಾದ ತಯಾರಿ, ಚುನಾವಣಾ ನೀತಿ ಸಂಹಿತೆ ಅನುಷ್ಠಾನದ ಕುರಿತು ಚರ್ಚೆ ನಡೆಸಿ ಅಧಿಕಾರಿಗಳು ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.

ನೀತಿ ಸಂಹಿತೆ ಉಲ್ಲಂಘಿಸಿದರೆ ಕ್ರಮ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆ 2019ರ ನೀತಿ ಸಂಹಿತೆಯು ಸೆ.21ರಿಂದ ಜಾರಿಯಾಗಿದ್ದು, ಕಟ್ಟುನಿಟ್ಟಾಗಿ ಅಧಿಕಾರಿಗಳು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಬೇಕು. ನೀತಿ ಸಂಹಿತೆ ಉಲ್ಲಂ ಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇಡೀ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಜಾರಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಚುನಾವಣಾ ಸಿದ್ಧತೆಯನ್ನು ಸಮರ್ಪಕವಾಗಿ ತಯಾರಿ ಮಾಡಿಕೊಳ್ಳಬೇಕು. ಈಗಾಗಲೇ ಎಲ್ಲಾ ಕಡೆ ಪೋಸ್ಟರ್‌, ಬ್ಯಾನರ್‌, ಫ್ಲೆಕ್ಸ್‌ಗಳನ್ನು ತೆರವುಗೊಳಿಸಲಾಗಿದೆ ಎಂದರು.

ಮೊಬೈಲ್‌ ಸ್ವಿಚ್ಡ್ಆಫ್ ಆಗಬಾರದು: ಅಧಿಕಾರಿಗಳು ತಮ್ಮ ಮೊಬೈಲ್‌ಪೋನ್‌ಗಳನ್ನು ಯಾವುದೇ ಕಾರಣಕ್ಕೂ ಸ್ವಿಚ್‌xಆಫ್ ಮಾಡಿಕೊಳ್ಳಬಾರದು. ಅನುಮತಿ ಇಲ್ಲದೇ ರಜೆ ತೆಗೆದುಕೊಳ್ಳಬಾರದು. ಉಪಚುನಾವಣೆಗೆ ಸಂಬಂಧಪಟ್ಟ ನೀಡುವ ಸೂಚನೆಗಳನ್ನು ಪಾಲಿಸಿ ವರದಿ ನೀಡಬೇಕೆಂದು ಸಭೆಯಲ್ಲಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಮತಗಟ್ಟೆ ಕೇಂದ್ರಗಳ ಮೂಲ ಸೌಕರ್ಯಗಳನ್ನು ಮುಂಚಿತವಾಗಿ ಅಧಿಕಾರಿಗಳು ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದರು. ಸಭೆಯಲ್ಲಿ ಜಿಪಂ ಸಿಇಒ ಬಿ.ಫೌಜಿಯಾ ತರನ್ನುಮ್‌ ಮಾತನಾಡಿ, ಮತದಾರರ ಜಾಗೃತಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಕ್ಷೇತ್ರದಲ್ಲಿ ಜಿಲ್ಲಾ ಸ್ವೀಪ್‌ ಸಮಿತಿಯಿಂದ ಹಮ್ಮಿಕೊಳ್ಳಲಾಗುವುದು.

ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅರಿವು ಮೂಡಿಸುವ ಕಾರ್ಯಗಳಿಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರತಿ, ಉಪವಿಭಾಧಿಕಾರಿ ಎ.ಎನ್‌.ರಘನಂದನ್‌, ಡಿವೈಎಸ್‌ಪಿ ಪ್ರಭುಶಂಕರ್‌ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಉಪ ಚುನಾವಣೆ ಯಾರ್ಯಾರಿಗೆ ಯಾವ ಹೊಣೆ?: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯ ಎಂ.ಸಿ.ಸಿ. ನೋಡಲ್‌ ಅಧಿಕಾರಿ ಹಾಗೂ ಚುನಾವಣಾ ನೀತಿ ಸಂಹಿತೆಯ ನಿರ್ವಹಿಸುವ ಹೊಣೆಯನ್ನು ಜಿಪಂ ಸಿಇಒ ಬಿ. ಫೌಜಿಯಾ ತರನ್ನುಮ್‌ ಕಾರ್ಯನಿರ್ವಹಿಸಲಿದ್ದಾರೆ. ಇವಿಎಂಗಳ ನಿರ್ವಹಣೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು, ಸಾರಿಗೆ ನಿರ್ವಹಣೆ ಪ್ರಾದೇಶಿಕ ಸಾರಿಗೆ ಅಧಿಕಾರಿ, ಚುನಾವಣಾ ತರಬೇತಿ ನಿರ್ವಹಣೆ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆ ಜಿಲ್ಲಾ ಅಧಿಕಾರಿಗಳು.

ಚುನಾವಣಾ ಸಮಗ್ರಗಳ ನಿರ್ವಹಣೆಗೆ ಜಿಲ್ಲಾಡಳಿತದ ಸಹಾಯಕರು, ಚುನಾವಣಾ ಖರ್ಚು-ವೆಚ್ಚ ನಿರ್ವಹಣೆಯನ್ನು ಮುಖ್ಯ ಲೆಕ್ಕಾಧಿಕಾರಿಗಳು, ಕಾನೂನು ಆದೇಶಕ್ಕೆ ಡಿವೈಎಸ್‌ಪಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಘೋಷಣೆಯಾಗಿರುವ ಉಪ ಚುನಾವಣೆಯನ್ನು ಯಾವುದೇ ಗೊಂದಲಗಳಿಗೆ ಅವಕಾಶ ಇಲ್ಲದೇ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ. ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಜಿಲ್ಲಾದ್ಯಂತ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲಾಗುವುದು.
-ಆರ್‌.ಲತಾ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.