ಶಾಸಕರು-ಸಚಿವರ ಗೈರು, ಸಾಹಿತ್ಯಾಭಿಮಾನಿಗಳ ಕೊರತೆ


Team Udayavani, Feb 28, 2021, 12:48 PM IST

ಶಾಸಕರು-ಸಚಿವರ ಗೈರು, ಸಾಹಿತ್ಯಾಭಿಮಾನಿಗಳ ಕೊರತೆ

ಚಿಕ್ಕಬಳ್ಳಾಪುರ: ಹೇಳಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದ ಗಡಿ ಜಿಲ್ಲೆ. ಇಲ್ಲಿ ಕನ್ನಡ ಭಾಷೆಗಿಂತಲೂಬೇರೆ ಭಾಷೆಗಳ ಪ್ರಭಾವ ಹೆಚ್ಚಾಗಿದೆಯೆಂಬ ದೂರು ಸಾಮಾನ್ಯ. ಇಂತಹ ಪ್ರದೇಶದಲ್ಲಿ ನಡೆದ 8ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಸಹಿತ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳ ಶಾಸಕರು ಗೈರು ಹಾಜರಾದರು.

ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಜನರನ್ನು ಅಥವಾ ಕನ್ನಡ ಅಭಿಮಾನಿಗಳನ್ನು ಸೇರಿಸಬಾರದೆಂದುನಿರ್ಬಂಧ ಹೇರಿದ್ದರಿಂದ ಸಮ್ಮೇಳನದಲ್ಲಿ ಸರಳದ ನೆಪದಲ್ಲಿ ಸಂಪೂರ್ಣವಾಗಿ ಸರಳವಾಗಿ ನಡೆಯಿತು. ಜಿಲ್ಲೆಯಲ್ಲಿ ಕನ್ನಡ ಭಾಷೆಯ ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ನಿಲುವುಮತ್ತು ಗಡಿ ಜಿಲ್ಲೆಯಲ್ಲಿ ಕನ್ನಡ ಭಾಷೆಯ ಅಭಿವೃದ್ಧಿ ವಿಷಯದಲ್ಲಿ ಏನು ಕಾರ್ಯಕ್ರಮರೂಪಿಸಲಾಗಿದೆ ಎಂಬುದು ತಿಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಗೈರು ಹಾಜರಾಗಿದ್ದರು.

ಪ್ರಚಾರ ನಡೆಸಿಲ್ಲ: ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಜಿಲ್ಲೆಯ ಶಿಡ್ಲಘಟ್ಟ,ಬಾಗೇಪಲ್ಲಿ, ಗೌರಿ ಬಿದನೂರು, ಚಿಂತಾ ಮಣಿಕ್ಷೇತ್ರದ ಶಾಸಕರು ಹಾಗೂ ವಿವಿಧ ಪಕ್ಷಗಳ ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಗೈರು ಹಾಜರಿ ಎದ್ದುಕಾಣು ತ್ತಿತ್ತು. ಜಿಲ್ಲಾ ಮಟ್ಟದಲ್ಲಿ ನಡೆದ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ವ್ಯಾಪಕ ವಾಗಿ ಪ್ರಚಾರ ನಡೆಸಿಲ್ಲವೆಂದು ದೂರು ಕೇಳಿಬಂದಿದೆ.

ಭಿನ್ನಮತ: ಜಿಲ್ಲೆಯಲ್ಲಿರುವ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಅದರಲ್ಲೂ ವಿಶೇಷವಾಗಿ ಕನ್ನಡ ಸಾಹಿತ್ಯ ಪರಿಷತ್‌ ಮುಖಂಡರು ಮತ್ತು ಸದಸ್ಯರನ್ನು ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಕೈವಾರ ಶ್ರೀನಿವಾಸ್‌ ವಿಶ್ವಾಸಕ್ಕೆತೆಗೆದುಕೊಂಡಿಲ್ಲವೆಂಬ ಗುರುತ್ತರ ಆರೋಪ  ಕೇಳಿಬಂದಿದೆ. ಒಟ್ಟಾರೆ ಸಮ್ಮೇಳನದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಮತ್ತು ಸದಸ್ಯರ ನಡುವಿನ ಭಿನ್ನಮತ ಸ್ಫೋಟಗೊಂಡಿದೆ.

ಮಾಹಿತಿ, ಆಮಂತ್ರಣ ನೀಡಿದರೂ ಬಂದಿಲ್ಲ :

ಕೋವಿಡ್ ಸೋಂಕು ಕಾರಣ 500 ಮಂದಿಗೆ ಮಾತ್ರ ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಅದರ ಅನ್ವಯ ಕನ್ನಡಪರ ಹೋರಾಟಗಾರರು-ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಸಾಪ ಸದಸ್ಯರಿಗೆಮಾಹಿತಿ ನೀಡಲಾಗಿದೆ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬ ಆರೋಪ ನಿರಾಧಾರ. ಜಿಲ್ಲೆಯ ಶಾಸಕರಿಗೆ ಖುದ್ದಾಗಿ ಭೇಟಿ ನೀಡಿ ಆಮಂತ್ರಣ ನೀಡಿದ್ದೇನೆ. ಅವರು ಯಾಕೆ ಬಂದಿಲ್ಲ ಎಂಬುದು ಗೊತ್ತಿಲ್ಲ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಕೈವಾರ ಶ್ರಿನಿವಾಸ್‌ ಸ್ಪಷ್ಟಪಡಿಸಿದರು.

ಭಾಷಾಭಿಮಾನಿಗಳ ಕೊರತೆ :

ಸಮ್ಮೇಳನದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಸಾಹಿತ್ಯಾಭಿಮಾನಿಗಳು ಬಂದಿಲ್ಲ. ಕನ್ನಡಪರ ಸಂಘಟನೆಗಳ ಸದಸ್ಯರು ಸಹ ಕಾಣಿಸಲಿಲ್ಲ. ಕೆಲವರು ಒಲ್ಲದ ಮನಸ್ಸಿನಿಂದ ಸಮ್ಮೇಳನಕ್ಕೆ ಬಂದು ಕಾರ್ಯಕ್ರಮ ನೋಡಿ ಇದು ಜಿಲ್ಲಾ ಸಮ್ಮೇಳನವೋ? ಅಥವಾ ತಾಲೂಕು ಸಮ್ಮೇಳನವೋ? ಎಂದು ಬೇಸರ ವ್ಯಕ್ತಪಡಿಸಿದರು. ಸಮ್ಮೇಳನದ ಅಂಗವಾಗಿ ಪುಸ್ತಕಗಳ ಮಳಿಗೆಗಳನ್ನು ಹಾಕಿದರೂ ಸಹ ಸಮ್ಮೇಳನದಲ್ಲಿ ಸಾಹಿತ್ಯ ಅಭಿಮಾನಿಗಳ ಕೊರತೆಯಿಂದ ಮಳಿಗೆಯಲ್ಲಿ ವ್ಯಾಪಾರ ವಹಿವಾಟು ಸಹ ಕುಂಠಿತಗೊಂಡಿತ್ತು

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.