ಜಿಲ್ಲೆಯಲ್ಲಿ ಸಂಕಟ, ಸಂತಸ ತಂದ ಮಳೆರಾಯ


Team Udayavani, Oct 14, 2021, 2:35 PM IST

ಜಿಲ್ಲೆಯಲ್ಲಿ ಸಂಕಟ ಸಂತಸ ತಂದ ಮಳೆರಾಯ

ಚಿಂತಾಮಣಿ: ಹಲವು ವರ್ಷಗಳಿಂದ ಮಳೆ ಇಲ್ಲದೆ ನರಳಾಡುತ್ತಿದ್ದ ತಾಲೂಕಿನ ಜನತೆಗೆ ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆರಾಯ ಒಂದೇ ಬಾರಿಗೆ ಸಂಕಟ ಮತ್ತು ಸಂತಸ ಎರಡೂ ಒಮ್ಮೆಯೇ ನೀಡಿದಂತಾಗಿದೆ.

ಹಲವು ವರ್ಷಗಳಿಂದ ಸಮರ್ಪಕವಾಗಿ ಮಳೆಯಾಗದೆ ಸಮಯಕ್ಕೆ ಸರಿಯಾಗಿ ಬೆಳೆಯಾಗದೆ ಜನ ತತ್ತರಿಸಿದ್ದರು. ಆದರೆ ಪ್ರಸ್ತುತ ಕಳೆದ ವಾರದಿಂದ ತಾಲೂಕು ಸೇರಿ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಗೆ ತಾಲೂಕಿನ ಹತ್ತಾರು ಕೆರೆಗಳು ತುಂಬಿ ಕೋಡಿ ಹರಿದು ಬೆಳೆಗಳಿಗೆ ಅನುಕೂಲವಾದರೆ, ಇನ್ನು ಕೆಲ ಕಡೆ ನೀರು ಹರಿಯುವ ರಭಸಕ್ಕೆ ಗ್ರಾಮಗಳ ಸಂಪರ್ಕ ರಸ್ತೆಗಳು, ಸೇತುವೆಗಳು ಕಡಿದು ಸಂಚಾರಕ್ಕೆ ತೊಂದರೆಯಾಗಿ ಜನ ನರಳಾಡುವಂತಾಗಿದೆ.

ತುಂಬಿ ತುಳುಕಿದ ನದಿಗಳು: ಹಲವು ವರ್ಷಗಳಿಂದ ಬತ್ತಿ ಹೋಗಿದ್ದ ತಾಲೂಕಿನಲ್ಲಿ ಹಾದು ಹೋಗುವ ಪಾಪಾಗ್ನಿ, ಕುಶಾವತಿ ನದಿಗಳು ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ತುಂಬಿ ಹರಿಯುತ್ತಿವೆ. ಮುಂಗಾನಹಳ್ಳಿ, ಚಿಲಕಲನೇರ್ಪು ಹೋಬಳಿಗಳಲ್ಲಿ ಸೇತುವೆಗಳು ಕಡಿದು ಕೊಚ್ಚಿ ಹೋಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಅಷ್ಟೇ ಅಲ್ಲದೆ ನದಿಗಳ ಪಕ್ಕದ ಹಲವಾರು ಎಕರೆ ಜಮೀನುಗಳಲ್ಲಿ ಬೆಳೆದ ವಿವಿಧ ಬೆಳೆಗಳು ಭೂ ಸಮೇತ ಕೊಚ್ಚಿ ಹೋಗಿ ರೈತರು ಪರದಾಡುವಂತಾಗಿದೆ.

ಇದನ್ನೂ ಓದಿ;- ಚನ್ನಮ್ಮ ವಿವಿ ಸ್ನಾತಕೋತ್ತರ ಕೇಂದ್ರಕಗ್ಕೆ ಭೂಮಿ ಕೊಡಿ

ಧಾರಾಕಾರ ಮಳೆಗೆ ಕಡಿದ ರಸ್ತೆಗಳು: ಪಾಪಾಗ್ನಿ ನದಿ ಹರಿಯುವ ರಭಸಕ್ಕೆ ಚಿಂತಾಮಣಿಯಿಂದ ಕೋರ‌್ಲ ಪರ್ತಿ ಗ್ರಾಮಕ್ಕೆ ಸಾಗುವ ರಸ್ತೆಯಲ್ಲಿ ಬರುವ ಪಾವದೇ ನಹಳ್ಳಿ, ಬುರಡುಗುಂಟೆ ಗ್ರಾಮದ ಬಳಿ ಎರಡು ಸೇತುವೆಗಳು ಕೊಚ್ಚಿ ಹೋಗಿವೆ. ಈ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡು ಹತ್ತಾರು ಗ್ರಾಮಗಳಿಗೆ ತೆರ ಳಲು ಕಷ್ಟವಾಗಿದೆ. ಅಲ್ಲದೆ ಚಿಂತಾಮಣಿಯಿಂದ ಕೊರ‌್ಲ ಪರ್ತಿಗೆ ತೆರಳುವ ಬಸ್‌ ಮಾರ್ಗ ಒಂದೇ ಆಗಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಹಾಗೆಯೇ ವಿದ್ಯಾರ್ಥಿಗಳು, ನೌಕರರು ಶಾಲಾ ಕಾಲೇಜುಗಳಿಗೆ, ಗ್ರಾಮಗಳಿಗೆ ತೆರಳಲು ಕಷ್ಟವಾಗಿದ್ದು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

3ನೇ ಬಾರಿ ಕೊಚ್ಚಿ ಹೋದ ಮಾದಮಂಗಳ ಸೇತುವೆ ಇನ್ನು ಮುಂಗಾನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಹರಿಯುವ ಕುಶಾವತಿ ನದಿ ಮಂಗಳವಾರ ಸುರಿದ ಭಾರೀ ಮಳೆಗೆ ತುಂಬಿ ಹರಿದ ಪರಿಣಾಮ, ಮಾದಮಂಗಳ ಬಳಿಯ ಕುಶಾವತಿಯ ಸೇತುವೆ 3ನೇ ಬಾರಿ ಕೊಚ್ಚಿ ಹೋಗಿದೆ. ಇದರಿಂದಾಗಿ ಆ ಭಾಗದ ಜನ ಸಂಚಾರವಿಲ್ಲದೆ ಪರದಾಡು ವಂತಾಗಿದೆ. ಕಳೆದ 2015ರಲ್ಲಿ 15 ದಿನ ಸುರಿದ ಜಡಿ ಮಳೆಗೆ ತಾಲೂಕಿನ ಕೆರೆಗಳು ತುಂಬಿ ನದಿಗೆ ನೀರು ಹರಿದ ಪರಿಣಾಮ ನದಿ ತುಂಬಿ ಹರಿದು ಸೇತುವೆ ಪಕ್ಕದ ಮಣ್ಣು ಕೊಚ್ಚಿ ಹೋಗಿ ರಸ್ತೆ ಸಂಪರ್ಕ ಕಡಿತಗೊಂಡಿತ್ತು.

ಆಗ ಸುತ್ತಮುತ್ತಲಿನ ಗ್ರಾಮಸ್ಥರು ಮಳೆ ನಿಂತ ಮೇಲೆ ತಾತ್ಕಾಲಿಕವಾಗಿ ಮಣ್ಣು ಹಾಕಿ ಸಂಚಾರಕ್ಕೆ ಅನುವು ಮಾಡಿಕೊಂಡು ಕಡಿತಗೊಂಡ ಸಂಪರ್ಕವನ್ನು ದುರಸ್ಥಿ ಮಾಡುವಂತೆ ಅಧಿಕಾರಿಗಳನ್ನು ಕೋರಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ 2020 ರಲ್ಲಿ ಮತ್ತೆ ಸಂಪರ್ಕ ಕಡಿತಗೊಂಡಿತು. ಇದರಿಂದ ಏಟಿಗಡ್ಡಗೊಲ್ಲಪಲ್ಲಿ, ಮಾದಮಂಗಳ ಬ್ರಾಹ್ಮಣ ಹಳ್ಳಿ, ಕೋನಪಲ್ಲಿ ಗ್ರಾಮಸ್ಥರು ಪರದಾ ಡುವಂತಾಗಿತ್ತು. ಇಷ್ಟೆಲ್ಲಾ ಅನಾಹುತಗಳಾಗಿ ಜನ ಪರದಾಡಿ ದರೂ 2020ರಲ್ಲಿ ತಾಲೂಕು ಆಡಳಿತ ಕೇವಲ ತಾತ್ಕಾಲಿಕ ದುರಸ್ಥಿ ಮಾಡಿ ಮೌನಕ್ಕೆ ಶರಣಾಗಿತ್ತು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.