ಚಂದ್ರಯಾನ-2 ರಲ್ಲಿ ಜಿಲ್ಲೆಯ ವಿಜ್ಞಾನಿ ಗುರ್ರಪ್ಪ ಛಾಪು


Team Udayavani, Sep 9, 2019, 3:00 AM IST

chandrayaa

ಚಿಕ್ಕಬಳ್ಳಾಪುರ: ಇಸ್ರೋ ಅಂದರೆ ಸಾಕು ಇಡೀ ಜಗತ್ತೆ ನಿಬ್ಬೆರಗಾಗಿ ನೋಡುತ್ತದೆ. ದೇಶದ ತಂತ್ರಜ್ಞಾನ ಕ್ಷೇತ್ರದಲ್ಲಿ ತನ್ನದೇ ಆದ ಕಾರ್ಯ ಚಟುವಟಕೆಗಳಿಂದ ಅದರಲ್ಲೂ ಚಂದ್ರಯಾನ-2 ಸಾಧನೆ ಬಳಿಕ ವಿಶ್ವದ ಗಮನ ಸೆಳೆಯುತ್ತಿರುವ ಇಸ್ರೋ ಟೀಮ್‌ನಲ್ಲಿ ಬರಗಾಲದ ಜಿಲ್ಲೆಯೆಂಬ ಹಣೆಪಟ್ಟಿ ಹೊಂದಿರುವ ಚಿಕ್ಕಬಳ್ಳಾಪುರದ ವಿಜ್ಞಾನಿಯೊಬ್ಬರು ಕಾರ್ಯ ನಿರ್ವಹಿಸುವ ಮೂಲಕ ಗಮನ ಸೆಳೆದಿದ್ದಾರೆ.

ಹೌದು, ಜಿಲ್ಲೆಯಲ್ಲಿ ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿ ಮೊದಲಿರುವ ಅತಿ ಚಿಕ್ಕ ತಾಲೂಕಾದ ಗುಡಿಬಂಡೆಗೆ ಸೇರಿದ ಕುಗ್ರಾಮವೊಂದಕ್ಕೆ ಸೇರಿದ ಗುರ್ರಪ್ಪ, ಹಲವು ವರ್ಷಗಳಿಂದ ಇಸ್ರೋದಲ್ಲಿ ವಿಜ್ಞಾನಿಯಾಗಿ ಕಾರ್ಯ ನಿರ್ವಹಿಸುತ್ತಿರುವುದು ಜಿಲ್ಲೆಯು ಹೆಮ್ಮೆ ಪಡುವಂತಾಗಿದೆ.

ಕಳೆದ ಶನಿವಾರ ಬೆಂಗಳೂರಿನ ಇಸ್ರೋ ನಿಯಂತ್ರಣ ಕಚೇರಿಯಲ್ಲಿ ನಡೆದ ಚಂದ್ರಯಾನ-2 ರ ವಿಕ್ರಮ ಲ್ಯಾಂಡರ್‌ ತನ್ನ ಪಥ ಬದಲಿಸಿ ಸಂಪರ್ಕಕ್ಕೆ ಸಿಗದಿದ್ದರೂ ಧೃತಿಗೆಡದ ಇಸ್ರೋ ವಿಜ್ಞಾನಿಗಳು ಉತ್ಸಾಹದಿಂದಲೇ ತಮ್ಮ ಕಾರ್ಯವನ್ನು ಮುಂದುವರಿಸಿದ್ದರು. ಖುದ್ದು ಪ್ರಧಾನಿ ಪ್ರಧಾನಿ ಮೋದಿಯೇ ಇಸ್ರೋ ನಿಯಂತ್ರಣ ಘಟಕಕ್ಕೆ ತೆರಳಿ ಇಸ್ರೋ ಅಧ್ಯಕ್ಷ ಕೆ.ಶಿವನ್‌ಗೆ ಸಾಂತ್ವನ ಹೇಳಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅಕ್ಕಪಕ್ಕ ಇಸ್ರೋ ವಿಜ್ಞಾನಿಯಾಗಿರುವ ಜಿಲ್ಲೆಯ ಗುರ್ರಪ್ಪ, ಕಾಣಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

ಜಂಗಾಲಹಳ್ಳಿಯವರು: ಇಸ್ರೋ ಸಂಸ್ಥೆಯಲ್ಲಿ ಟೀಮ್‌ ಆಪರೇಟರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಗುರ್ರಪ್ಪ, ಜಿಲ್ಲೆಯ ಗುಡಿಬಂಡೆ ತಾಲೂಕಿನ ವರ‌್ಲಕೊಂಡ ಗ್ರಾಪಂ ವ್ಯಾಪ್ತಿಗೆ ಬರುವ ಜಂಗಾಲಹಳ್ಳಿ ಗ್ರಾಮದವರು. ಬಡತನದಲ್ಲಿಯೇ ಹುಟ್ಟಿ ಬೆಳೆದ ಗುರ್ರಪ್ಪ, ವಿಶ್ವದ ಪ್ರತಿಷ್ಠಿತ ಭಾರತೀಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋದಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಜಿಲ್ಲೆಗೆ ಹೆಮ್ಮೆಯ ವಿಷಯ.

ಚಿಕ್ಕಬಳ್ಳಾಪುರ ಮಳೆ, ಬೆಳೆ ಇಲ್ಲದೇ ಬರದ ಜಿಲ್ಲೆಯಾದರೂ ಜಿಲ್ಲೆಯಲ್ಲಿ ವಿಜ್ಞಾನಿಗಳಿಗೆ ಬರ ಇಲ್ಲ ಎನ್ನುವುದನ್ನು ಸಾಬೀತು ಮಾಡಿದೆ. ಬೆಂಗಳೂರಿನ ಇಸ್ರೋ ನಿಯಂತ್ರಣ ಘಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ಗುರ್ರಪ್ಪ, ಕೂಡ ಅವರೊಂದಿಗೆ ಕಾಣಿಸಿಕೊಂಡಿದ್ದನ್ನು ಅವರ ಹುಟ್ಟೂರಿನ ಜನ ದೃಶ್ಯ ಮಾಧ್ಯಮಗಳಲ್ಲಿ ನೋಡಿ ಸಂತಸ ಪಟ್ಟಿದ್ದಾರೆ.

28 ವರ್ಷಗಳಿಂದ ಕರ್ತವ್ಯ: ಗುರ್ರಪ್ಪ, ತಮ್ಮ ಪ್ರಾಥಮಿಕ ಶಿಕ್ಷಣವನ್ನು ಗುಡಿಬಂಡೆ ತಾಲೂಕಿನ ಸ್ವಗ್ರಾಮ ಜಂಗಾಲಹಳ್ಳಿ ಹಾಗೂ ಪೋಲಂಪಲ್ಲಿ ಗ್ರಾಮದಲ್ಲಿ ಮುಗಿಸಿ ಪ್ರೌಢ ಶಿಕ್ಷಣವನ್ನು ಗುಡಿಬಂಡೆಯಲ್ಲಿ ಮುಗಿಸಿದ್ದಾರೆ. ತದ ನಂತರ ಬೆಂಗಳೂರಿನಲ್ಲಿ ಡಿಪ್ಲೋಮಾ ಕೋರ್ಸ್‌ ಓದಿದ ಬಳಿಕ ಬೆಂಗಳೂರಿನ ಬಿಇಎಂಎಸ್‌ ಕಾಲೇಜಿನಲ್ಲಿ ಇಂಜಿನಿಯರಿಂಗ್‌ ನಂತರ ಕಳೆದ 28 ವರ್ಷಗಳಿಂದ ಇಸ್ರೋ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಇವರೊಂದಿಗೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಡಿ.ಪಾಳ್ಯದ ಆರ್‌.ಶ್ರೀನಾಥ್‌ ಎಂಬುವರು ಕೆಲಸ ಮಾಡುತ್ತಿದ್ದಾರೆ ಎಂದು ಗುರ್ರಪ್ಪ ತನ್ನ ಸಹೋದ್ಯೋಗಿಯನ್ನು ನೆನೆಸಿಕೊಂಡರು. ಚಂದ್ರಯಾನದಲ್ಲಿ ಆರ್ಬಿಟರ್‌ ಕಳುಹಿಸುವ ಚಿತ್ರಗಳನ್ನು ಫೋಕಸ್‌ ಮಾಡಿ ಆ ಚಿತ್ರಗಳನ್ನು ವಿಜ್ಞಾನಿಗಳಿಗೆ ನೀಡುವ ಕೆಲಸವನ್ನು ಶ್ರೀನಾಥ್‌ ಮಾಡುತ್ತಿದ್ದಾರೆ.

ಕಂಟ್ರೋಲ್‌ ಯೂನಿಟ್‌ ಮ್ಯಾನೇಜರ್‌: ಇಸ್ರೋ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುರ್ರಪ್ಪ, ಇಸ್ರೋ ನಿಯಂತ್ರಣ ಘಟಕದಲ್ಲಿರುವ ಕಂಟ್ರೋಲ್‌ ಯೂನಿಟ್‌ ಮ್ಯಾನೇಜರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ಚಂದ್ರಯಾನ-2ರ ಕಂಟ್ರೋಲ್‌ ಯೂನಿಟ್‌ನ್ನು ಕೂಡ ಇವರೇ ಅಭಿವೃದ್ಧಿಪಡಿಸಿದ್ದಾರೆ. ಒಟ್ಟಿನಲ್ಲಿ ಬರದಿಂದ ತತ್ತರಿಸುತ್ತಿರುವ ಜಿಲ್ಲೆಯಲ್ಲಿ ವಿಜ್ಞಾನಿಗಳಿಗೆ ಬರ ಇಲ್ಲ ಎಂಬುದನ್ನು ಇಸ್ರೋ ಸಂಸ್ಥೆಯಲ್ಲಿ ಸತತ 28 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವುದು ಗುರ್ರಪ್ಪ ಸೇವೆಯನ್ನು ನೋಡಿದರೆ ಚಿಕ್ಕಬಳ್ಳಾಪುರ ಜಿಲ್ಲೆ ಹೆಮ್ಮೆ ಪಡುವಂತಾಗಿದೆ.

ಇಸ್ರೋ ಸಂಸ್ಥೆಯಲ್ಲಿ ಕೆಲಸ ಮಾಡುವುದು ನನಗೆ ಹೆಮ್ಮೆಯ ವಿಚಾರ. ಚಂದ್ರಯಾನ-2 ಯಶಸ್ವಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಇಸ್ರೋದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರು ಕೂಡ ಸಾಕಷ್ಟು ಶ್ರಮಪಟ್ಟಿದ್ದಾರೆ. ರಾತ್ರಿ, ಹಗಲು ಕೆಲಸ ಮಾಡಿದ್ದಾರೆ.
-ಗುರ್ರಪ್ಪ, ಇಸ್ರೋ ವಿಜ್ಞಾನಿ

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.