ಡಿ.ಜೆ.ನಾಗರಾಜರೆಡ್ಡಿರವರೇ ಜೆಡಿಎಸ್‌ ಅಭ್ಯರ್ಥಿ


Team Udayavani, Feb 4, 2023, 4:04 PM IST

tdy-17

ಬಾಗೇಪಲ್ಲಿ: ಕ್ಷೇತ್ರದಲ್ಲಿ ಸಿಪಿಐ(ಎಂ) ಜತೆ ಈವರೆಗೆ ಹೊಂದಾಣಿಕೆ ಬಗ್ಗೆ ಯಾರೂ ನಮ್ಮ ಜತೆ ಮಾತುಕತೆ ಮಾಡಿಲ್ಲ. ಅಂತಿಮವಾಗಿ ಜೆಡಿಎಸ್‌ ನಿಂದ ಅಧೀ ಕೃತವಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಡಿ.ಜೆ.ನಾಗರಾಜ ರೆಡ್ಡಿರ ವರೇ ಆಗಿರುತ್ತಾರೆ ಎಂದು ಜೆಡಿಎಸ್‌ ಶಾಸಕಾಂಗ ನಾಯಕ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ಪಟ್ಟಣದ ಸೂರ್ಯ ಕನ್ವೆಂಷನ್‌ ಹಾಲ್‌ನಲ್ಲಿ ಖಾಸಗಿ ಕಾರ್ಯಕ್ರಮಕ್ಕಾಗಿ ಪಟ್ಟಣಕ್ಕೆ ಆಗಮಿಸಿದ ವೇಳೆ ಸುದ್ದಿಗಾರರ ಜತೆ ಮಾತನಾಡಿದರು. ಬಾಗೇಪಲ್ಲಿ ಚುನಾವಣೆಯಲ್ಲಿ ಈವರೆಗೆ ಯಾವ ರಾಜಕೀಯ ಪಕ್ಷದ ಜತೆಗೆ ಹೊಂದಾಣಿಕೆ ಬಗ್ಗೆ ಮಾತುಕತೆ ಮಾಡಿಲ್ಲ. ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ. ಜೆಡಿಎಸ್‌ನ ಅಭ್ಯರ್ಥಿಗಳ ಪಟ್ಟಿಯಲ್ಲಿ ಡಿ.ಜೆ.ನಾಗರಾಜರೆಡ್ಡಿರವರ ಹೆಸರು ಪ್ರಕಟ ಮಾಡಲಾಗಿದೆ. ಅವರೇ ಈ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಬದಲಾಯಿಸುವ ಪ್ರಶ್ನೆಯೇ ಇಲ್ಲ. ಡಿ.ಜೆ.ನಾಗರಾಜರೆಡ್ಡಿರವರು ಮೊದಲಿ ನಿಂದಲೂ ಈ ಕ್ಷೇತ್ರದಲ್ಲಿ ಜೆಡಿಎಸ್‌ ಪಕ್ಷವನ್ನು ಸಂಘಟಿಸಿದ್ದಾರೆ. ಇವರಿಗೆ ಟಿಕೆಟ್‌ ನೀಡದೇ ಬೇರೆಯವರಿಗೆ ನೀಡುವುದಿಲ್ಲ. ತಮ್ಮ ಸ್ವಕ್ಷೇತ್ರಗಳಲ್ಲಿ ಬಿಟ್ಟು ಬಾಗೇಪಲ್ಲಿ ಕ್ಷೇತ್ರಗಳಲ್ಲಿ ಅನಿತಾ ಕುಮಾರಸ್ವಾಮಿರವರನ್ನು ಅಭ್ಯರ್ಥಿ ಮಾಡಲು ನಮಗೇನೂ ಹುಚ್ಚು ಹಿಡಿದಿಲ್ಲ ಎಂದರು.

ಶಿವಲಿಂಗೇಗೌಡರು ಸೇರಿದಂತೆ ಅನೇಕರು ಪಕ್ಷ ತೊರೆದರೆ ಜೆಡಿಎಸ್‌ಗೆ ನಷ್ಟ ಇಲ್ಲ. ಸಿದ್ದರಾಮಯ್ಯ ರವರು ಎಲ್ಲ ಕಡೆ ಜೆಡಿಎಸ್‌ ಗೆದ್ದೆತ್ತಿನ ಬಾಲ ಹಿಡಿಯುವುದಾಗಿ ಹೇಳಿದ್ದು, ಅವರೇ ಸೋಲೆತ್ತಿನ ಬಾಲ ಹಿಡಿಯುವವರು ಆಗಿದ್ದಾರೆ. ಅವರ ಪರಿಸ್ಥಿತಿ ನೋಡಿ, ಅವರಿಗೆ ಕ್ಷೇತ್ರ ಇಲ್ಲದೇ ರಾಜ್ಯದಲ್ಲೆಲ್ಲಾ ಓಡಾಡುತ್ತಿದ್ದಾರೆ. ದೇವೇಗೌಡ ಕುಟುಂಬದ ಬಗ್ಗೆ ಮಾತ ನಾಡುವವರು ಎಚ್ಚರಿಕೆಯಿಂದ ಮಾತನಾಡಬೇಕು. ನಾವು ಯಾರಿಗೂ ಏನೂ ಮೋಸ ಮಾಡಿ ಲ್ಲ. ದೇವೇಗೌಡರವರು, ಬೈರೇಗೌಡರು ಜತೆಯಲ್ಲಿ ರಾಜಕೀಯ ಮಾಡಿಕೊಂಡಿದ್ದವರು. ಕೃಷ್ಣಬೈರೇಗೌ ಡರವರು ಹಿಂದಿನ ಇತಿಹಾಸ ತಿಳಿದು ಮಾತನಾಡ ಬೇಕು. ನಮ್ಮ ಜೊತೆ ಇದ್ದು, ಅಧಿಕಾರ ಪಡೆದು, ನಾಯಕರಾಗಿ ನಮ್ಮ ಕುಟುಂಬಕ್ಕೆ ಎಲ್ಲರೂ ಚೂರಿ ಹಾಕಿದ್ದಾರೆ. ಎದುರಾಳಿ ಪಕ್ಷದ ರಾಜಕಾರಣಿಗಳು ನೀಚಮಟ್ಟದ ರಾಜಕೀಯ ಮಾಡಬಾರದು ಎಂದರು.

ಪಟ್ಟಣದ ಕೆಎಚ್‌ಬಿ ಕಾಲೋನಿಗೆ ಹೆಲಿಕಾಪ್ಟರ್‌ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಆಗಮಿಸು ತ್ತಿದ್ದಂತೆ, ಜೆಡಿಎಸ್‌ನ ಅಭ್ಯರ್ಥಿ ಡಿ.ಜೆ.ನಾಗರಾಜರೆಡ್ಡಿ, ಪುತ್ರ ದೀಪಕ್‌ ಗೌಡ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಜೆಡಿಎಸ್‌ ಬಾವುಟಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.

ಜೆಡಿಎಸ್‌ ನ ಶಾಸಕ ಬಂಡೆಪ್ಪ ಖಾಶಂಪುರ್‌, ಚಿಕ್ಕಬಳ್ಳಾಪುರದ ಜೆಡಿಎಸ್‌ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಜೆಡಿಎಸ್‌ ಜಿಲ್ಲಾಧ್ಯಕ್ಷ ಕೆ.ವಿ.ಮುನೇಗೌಡ, ಜೆಡಿಎಸ್‌ ಅಭ್ಯರ್ಥಿ ಡಿ.ಜೆ.ನಾಗರಾಜರೆಡ್ಡಿ, ಜಿಪಂ ಮಾಜಿ ಸದಸ್ಯರಾದ ಕೆ.ಸಿ.ರಾಜಾಕಾಂತ್‌, ಹರಿನಾಥರೆಡ್ಡಿ, ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್‌.ನರಸಿಂಹನಾಯ್ಡು, ಪುರಸಭೆ ಸದಸ್ಯೆ ಸುಜಾತಾ ನಾಯ್ಡು, ಜೆಡಿಎಸ್‌ ಯುವ ಬ್ರಿಗೇಡ್‌ನ‌ ರಾಜ್ಯ ಸಂಘಟನಾ ಕಾರ್ಯದರ್ಶಿ ಮುದ್ದಲಪಲ್ಲಿ ಎಂ.ಎನ್‌.ರಾಜಾರಾರೆಡ್ಡಿ, ಜೆಡಿಎಸ್‌ ತಾಲೂಕು ಗೌರವಾಧ್ಯಕ್ಷ ಮಹಮದ್‌ ಎಸ್‌. ನೂರುಲ್ಲಾ, ಅಧ್ಯಕ್ಷ ಸೂರ್ಯನಾರಾಯಣರೆಡ್ಡಿ, ಮುಖಂಡ ಚೇಳೂರಿನ ರಾಮಕೃಷ್ಣಾರೆಡ್ಡಿ, ಲಕ್ಷ್ಮೀನಾರಾಯಣ, ಪಿ.ಎಲ್‌.ಗಣೇಶ್‌ ಇತರರಿದ್ದರು.

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-13

ರೈತರಿಗೆ ಸಮಸ್ಯೆ ಕೇಳುವವರೇ ಇಲ್ಲ

TDY-19

ಅಧಿಕಾರಕ್ಕಾಗಿ ಕಾಂಗ್ರೆಸ್‌ನಿಂದ ಸುಳ್ಳು ಭರವಸೆ

tdy-18

ಯುಗಾದಿ ಹಬ್ಬದ ದಿನಸಿ ಕಿಟ್‌ ಪೊಲೀಸ್‌ ವಶಕ್ಕೆ

tdy-17

ಅಕಾಲಿಕ ಆಲಿಕಲ್ಲು ಮಳೆಗೆ ನೆಲಕಚ್ಚಿದ ಬೆಳೆ

tdy-15

ಶಾಸಕರು ಕಮಿಷನ್‌ ಪಡೆದಿಲ್ಲ ಎಂದು ಪ್ರಮಾಣ ಮಾಡಲಿ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.