ನಗರದಲ್ಲಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಆಗ್ರಹ
Team Udayavani, May 14, 2019, 3:00 AM IST
ಚಿಂತಾಮಣಿ: ಜಿಲ್ಲೆಯ ವಾಣಿಜ್ಯ ನಗರಿ ಚಿಂತಾಮಣಿ ನಗರದಲ್ಲಿ ಇತ್ತೀಚ್ಚಿಗೆ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೆಳ್ಳಂ ಬೆಳ್ಳಗೆ ನಗರದ ಝಾನ್ಸಿ ಮೈದಾನ ಮತ್ತು ಹಲವು ಮುಖ್ಯ ರಸ್ತೆಗಳಲ್ಲಿ ವಾಯು ವಿಹಾರಕ್ಕೆ ಬರುವ ಸಾರ್ವಜನಿಕರಿಗೆ ತೊಂದರೆಯಾಗಿದೆ.
ಭಯದ ವಾತಾವರಣದಲ್ಲಿ ವಾಯು ವಿಹಾರ: ನಗರದಲ್ಲಿ ಬೆಳ್ಳಂ ಬೆಳಗ್ಗೆ ನೂರಾರು ಜನ ಮಹಿಳೆಯರು ವೃದ್ಧರು, ಮಕ್ಕಳು ಯುವತಿಯರು ಯವಕರು ಎಲ್ಲಾ ವಯೋಮಾನದವರು ನಗರದ ಝಾನ್ಸಿ ಮೈದಾನದಲ್ಲಿ ಸೇರಿದಂತೆ ಹಲವು ಮುಖ್ಯ ಬೀದಿಗಳಲ್ಲಿ ಹಾಗೂ ರಸ್ತೆ ಬದಿಯ ಫುಟ್ಪಾತ್ನಲ್ಲಿ ವಾಯುವಹಾರಕ್ಕೆ ಬರುತ್ತಿದ್ದು, ಈ ವೇಳೆ ಬೀದಿ ನಾಯಿಗಳ ಹಾವಳಿ ಇರುವುದರಿಂದ ವಾಯು ವಿಹಾರಕ್ಕೆ ಬರಲು ಯೋಚಿಸುವಂತಾಗಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ.
ನಗರಸಭೆ ನಿರ್ಲಕ್ಷ್ಯ: ಬೆಳ್ಳಂ ಬೆಳಗ್ಗೆ ನಗರದಾದ್ಯಂತ ಬೀದಿ ನಾಯಿಗಳು ಓಡಾಡುತ್ತಿದ್ದು, ನಾಯಿಗಳ ಹಾವಳಿಯನ್ನು ನಿಯಂತ್ರಿಸಬೇಕಾದ ನಗರಸಭೆ ಮಾತ್ರ ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಝಾನ್ಸಿ ಮೈದಾನದಲ್ಲಿ ಬೀದಿ ನಾಯಿಗಳು: ನಗರ ಹೃದಯ ಭಾಗದಲ್ಲಿರುವ ಝಾನ್ಸಿ ಆಟದ ಮೈದಾನಕ್ಕೆ ಮುಂಜಾನೆ ಮತ್ತು ಸಂಜೆ ವಾಯು ವಿಹಾರಕ್ಕೆ ಬರುವವರಲ್ಲಿ ವೃದ್ಧರು, ಮಕ್ಕಳು, ಮಹಿಳೆಯರು ಹೆಚ್ಚು ಇರುವುದರಿಂದ ಸಂಕಷ್ಟಕ್ಕೀಡಾಗುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ