![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ
Team Udayavani, May 4, 2019, 3:00 AM IST
![swayam](https://www.udayavani.com/wp-content/uploads/2019/05/swayam-620x348.jpg)
ಚಿಕ್ಕಬಳ್ಳಾಪುರ: ಆರೋಗ್ಯವಂತ ನಾಗರಿಕ ಸಮಾಜ ನಿರ್ಮಾಣಕ್ಕಾಗಿ ಯುವಕರು ಸ್ವಯಂ ಪ್ರೇರಣೆಯಿಂದ ರಕ್ತದಾನಕ್ಕೆ ಮುಂದಾಗಬೇಕಿದ್ದು, ರಕ್ತದಾನದಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ತಪ್ಪು ಕಲ್ಪನೆಯನ್ನು ಜನರಿಂದ ತೊಲಗಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ತಿಳಿಸಿದರು.
ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸ್ಥಳೀಯ ಆರ್ಯವೈಶ್ಯ ಮಂಡಳಿ, ಶ್ರೀ ಪೇಟೆ ಆಂಜನೇಯಸ್ವಾಮಿ ದೇವಾಲಯ ಟ್ರಸ್ಟ್ ಹಾಗೂ ಭಾರತೀಯ ರೆಡ್ಕ್ರಾಸ್ ಸೊಸೈಟಿ ಜಿಲ್ಲಾ ಶಾಖೆ ಸಂಯುಕ್ತಾಶ್ರಯದಲ್ಲಿ ವಾಸವಿ ಜಯಂತಿ ಪ್ರಯುಕ್ತ ಎಂಟನೇ ವರ್ಷದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಅವರು ಮಾತನಾಡಿದರು.
ರಕ್ತದಾನದ ಮೂಲಕ ಮರುಜನ್ಮ: ತುರ್ತು ಸಂದರ್ಭಗಳಲ್ಲಿ ರಕ್ತದ ಕೊರತೆಯಿಂದ ನಿತ್ಯ ಅನೇಕ ಮಂದಿ ರೋಗಿಗಳು, ಗರ್ಬಿಣಿಯರು, ಅಪಘಾತದಲ್ಲಿ ಗಾಯಗೊಂಡವರು ಸಾವಿಗೀಡಾಗುತ್ತಿದ್ದು, ರಕ್ತದ ಕೊರತೆಯಿಂದ ಜೀವನ್ಮರಣದ ನಡುವೆ ಹೋರಾಟ ನಡೆಸುವವರಿಗೆ ರಕ್ತದಾನದ ಮೂಲಕ ಮರುಜನ್ಮ ನೀಡಿ ಪ್ರತಿಯೊಬ್ಬರು ತಮ್ಮ ಜೀವನವನ್ನು ಜೀವನ ಸಾರ್ಥಕ ಪಡಿಸಿಕೊಳ್ಳಬೇಕಿದೆ ಎಂದರು.
ದೇಶದ ಪ್ರಗತಿಗೆ ಅಡಿಪಾಯವಾಗಿರುವ ಯುವಜನರು ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ಅರಿತು ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳಲ್ಲಿ ಪಾಲ್ಗೊಳ್ಳಬೇಕು. ಆಗ ಮಾತ್ರ ಉತ್ತಮ ಆರೋಗ್ಯವಂತ ಸಮಾಜ ನಿರ್ಮಾಣ ಆಗುತ್ತದೆ ಎಂದರು.
ಜಾಗೃತಿ ಅಗತ್ಯ: ರಕ್ತದಾನದಿಂದ ರಕ್ತದ ಅವಶ್ಯಕತೆ ಇರುವವರಿಗೆ ಮಾತ್ರ ಲಾಭವಾಗುವುದಿಲ್ಲ. ದಾನಿಗಳ ಆರೋಗ್ಯ ವೃದ್ಧಿಯಾಗುವ ಜೊತೆಗೆ ಹೃದಯಘಾತದ ಸಂಭವ, ರಕ್ತದಲ್ಲಿ ಕೊಬ್ಬಿನ ಅಂಶ ಕಡಿಮೆಯಾಗುತ್ತದೆ. ಆದ್ದರಿಂದ ರಕ್ತದಾನ ಮಾಡಲು ಯಾರೂ ಕೂಡ ಹಿಂಜರಿಯಬಾರದು. ಈ ಬಗ್ಗೆ ಯುವಕರು ಜನರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಸೇವಾ ಮನೋಭಾವ: ಆರ್ಯವೈಶ್ಯ ಮಂಡಳಿ ಅಧ್ಯಕ್ಷ ನಂಜುಂಡರಾಮಯ್ಯ ಶೆಟ್ಟಿ ಮಾತನಾಡಿ, ಯುವಕರಲ್ಲಿ ರಕ್ತದಾನದ ಕುರಿತ ಮೌಡ್ಯವನ್ನು ದೂರ ಮಾಡಬೇಕು. ರಕ್ತದ ಅವಶ್ಯಕತೆ ಬಂದೊದಗಿದ ಸಂದರ್ಭದಲ್ಲಿ ಮಾತ್ರ ರಕ್ತದ ಮಹತ್ವ ಅರಿವಾಗುತ್ತದೆ. ಆರೋಗ್ಯವಂತ ವ್ಯಕ್ತಿಗಳು ತಪ್ಪದೇ ರಕ್ತದಾನ ಮಾಡಬೇಕೆಂದರು. ಸತತ ಏಳು ವರ್ಷಗಳಿಂದ ಶ್ರೀವಾಸವಿ ಜಯಂತಿ ಪ್ರಯುಕ್ತ ಆರ್ಯವೈಶ್ಯ ಮಂಡಳಿ ರಕ್ತದಾನ ಶಿಬಿರಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು, ಇದರಿಂದ ಯುವಕರಲ್ಲಿ ಸೇವಾ ಮನೋಭಾವ ಬೆಳೆಯುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಭಾರತೀಯ ರೆಡ್ಕ್ರಾಸ್ ಕಾರ್ಯದರ್ಶಿ ಗುರುರಾಜರಾವ್, ವೈದ್ಯಾಧಿಕಾರಿ ಡಾ.ಹೇಮಂತ್ ಸಾವಳಗಿ, ತಾಂತ್ರಿಕ ತಜ್ಞ ಶ್ರೀನಾಥ್, ಜಿಲ್ಲಾ ಸಂಚಾಲಕ ಭರತ್ ಕುಮಾರ್, ಆರ್ಯವೈಶ್ಯ ಮಂಡಳಿ ಕಾರ್ಯದರ್ಶಿ ಬಿ.ಎನ್.ಸೂರ್ಯನಾರಾಯಣ ಶೆಟ್ಟಿ, ವಾಸವಿ ಕ್ಲಬ್ ಅಧ್ಯಕ್ಷ ಶ್ರೀಧರ್, ವಾಸವಿ ಯೂತ್ ಕ್ಲಬ್ ಅಧ್ಯಕ್ಷ ಗಣೇಶ್, ಮುಖಂಡರಾದ ಲಕ್ಷ್ಮೀರಾಮ್, ಕೃಷ್ಣಮೂರ್ತಿ, ಬಿ.ಆರ್.ಬದರಿನಾಥ್, ರಾಣಿ ಪ್ರಭಾಕರ್, ಶ್ರೀಧರ್, ಸ್ವರೂಪ್ ಉಪಸ್ಥಿತರಿದ್ದರು.
ಶಿಬಿರದಲ್ಲಿ 171 ಯೂನಿಟ್ ರಕ್ತ ಸಂಗ್ರಹ: ಆರ್ಯವೈಶ್ಯ ಮಂಡಳಿ ವಾಸವಿ ಜಯಂತಿ ಪ್ರಯುಕ್ತ ಜಿಲ್ಲಾ ಭಾರತೀಯ ರೆಡ್ಕ್ರಾಸ್ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಬರೋಬ್ಬರಿ 171 ಮಂದಿ ವಾಸವಿ ಕ್ಲಬ್, ವಾಸವಿ ಯೂತ್ ಹಾಗೂ ಆರ್ಯವೈಶ್ಯ ಮಂಡಳಿ ಸದಸ್ಯರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು.
ರಕ್ತದಾನ ಮಾಡಿದವರಿಗೆ ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪ್ರಮಾಣ ಪತ್ರ ವಿತರಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಶಿಬಿರದಲ್ಲಿ ಪಾಲ್ಗೊಂಡ ರಕ್ತದಾನಿಗಳಿಗೆ ಆರ್ಯವೈಶ್ಯ ಮಂಡಳಿಯಿಂದ ಲಘು ಉಪಹಾರ, ಹಣ್ಣು, ಬಿಸ್ಕೆಟ್, ಹಣ್ಣಿನ ರಸ ನೀಡಲಾಯಿತು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![2-gudibande](https://www.udayavani.com/wp-content/uploads/2024/07/2-gudibande-150x90.jpg)
Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು
![Chikkaballapura: ಇದು ರಾಜಕೀಯ ಬಜೆಟ್ ಅಲ್ಲ, ರಾಷ್ಟ್ರೀಯ ಬಜೆಟ್: ಸಂಸದ ಡಾ.ಕೆ.ಸುಧಾಕರ್](https://www.udayavani.com/wp-content/uploads/2024/07/sudhakar-1-150x108.jpg)
Chikkaballapura: ಇದು ರಾಜಕೀಯ ಬಜೆಟ್ ಅಲ್ಲ, ರಾಷ್ಟ್ರೀಯ ಬಜೆಟ್: ಸಂಸದ ಡಾ.ಕೆ.ಸುಧಾಕರ್
![Chikkaballapur: Siddaramaiah should resign if there is morality: MP Dr K Sudhakar](https://www.udayavani.com/wp-content/uploads/2024/07/sudhakr-150x83.jpg)
Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್
![Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ: ನಟ ಚೇತನ್ ಆರೋಪ](https://www.udayavani.com/wp-content/uploads/2024/07/chethan-150x105.jpg)
MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್
![4-gudibande](https://www.udayavani.com/wp-content/uploads/2024/07/4-gudibande-150x90.jpg)
Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.