ಅವಸಾನದ ಅಂಚಿಗೆ ನಾಟಕ ಸಂಸ್ಕೃತಿ


Team Udayavani, Mar 7, 2019, 11:10 AM IST

blore-3.jpg

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೃಶ್ಯ ಮಾಧ್ಯಮಗಳ ಹಾವಳಿಯಿಂದಾಗಿ ಇಂದು ನಾಟಕ ಸಂಸ್ಕೃತಿ ಅವಸಾನದ ಅಂಚಿಗೆ ಬಂದು ತಲುಪಿ ನಾಟಕಗಳಿಗೆ ಜೀವಾಳವಾಗಿದ್ದ ಕಲಾವಿದರು ಕೂಡ ಇಂದು ಒಪ್ಪೊತ್ತಿನ ಊಟಕ್ಕಾಗಿ ಪರದಾಡಬೇಕಿದೆ ಎಂದು ತಾಪಂ ಅಧ್ಯಕ್ಷ ಬಿ.ಎಂ.ರಾಮುಸ್ವಾಮಿ ತಿಳಿಸಿದರು.

ತಾಲೂಕಿನ ಬೊಮ್ಮಹಳ್ಳಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪರಿವರ್ತನಾ ಟ್ರಸ್ಟ್‌ ವತಿಯಿಂದ ಆಯೋ ಜಿಸಿದ್ದ ಅಪ್ಪ-ಮಗ ಸಾಮಾಜಿಕ ಹಾಸ್ಯಭರಿತ ನಾಟಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಾಟಕಕ್ಕೆ ಧಕ್ಕೆ: ಗ್ರಾಮೀಣ ಭಾಗದಿಂದ ಬಂದ ನೂರಾರು ನಾಟಕ ಕಲಾವಿದರು ಇಂದು ಮೂಲೆ ಗುಂಪಾದಂತಾಗಿದೆ. ನಾಟಕ ಸೊಗಡು ಇಂದಿಗೂ ಎಲ್ಲರಲ್ಲೂ ಮನೆ ಮಾತಾಗಿದ್ದರೂ ಟಿವಿ ಸಂಸ್ಕೃತಿಯಿಂದ ನಾಟಕ ಸಂಸ್ಕೃತಿಗೆ ಧಕ್ಕೆ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು. 

ಯುವಪೀಳಿಗೆ ಮೇಲೆ: ಇಂದಿನ ಆಧುನಿಕ ಸಮಾಜದಲ್ಲಿ ನವ ಮಾಧ್ಯಮಗಳ ಪ್ರಭಾವ ದಿಂದ ಮುಂದಿನ ಪೀಳಿಗೆಗೆ ನಾಟಕ ಸಂಸ್ಕೃತಿ ಎಂಬುದು ಮರೀಚಿಕೆಯಾಗಲಿದೆ. ಜಾನಪದ ಮತ್ತು ರಂಗ ಕಲೆಗಳು ಸಮಾಜದ ಸಾಂಸ್ಕೃತಿಕ ಸಂಪತ್ತಾಗಿದ್ದು, ಇದನ್ನು ಕಾಪಾಡಿಕೊಳ್ಳುವ ಗುರುತ್ತರ ಜವಾಬ್ದಾರಿ ಇಂದಿನ ವಿದ್ಯಾರ್ಥಿಯುವ ಪೀಳಿಗೆ ಮೇಲಿದೆ ಎಂದರು.

ಇತ್ತೀಚೆಗೆ ದೃಶ್ಯ ಮಾಧ್ಯಮಗಳಲ್ಲಿ ಬರುವ ಕಿರುತೆರೆ ಧಾರವಾಹಿಗಳಿಗೆ ಮಾರು ಹೋಗಿರುವ ಮಹಿಳೆಯರು ದೇಶೀಯ ಸಂಸ್ಕೃತಿಯನ್ನೇ ಮರೆಯುತ್ತಿದ್ದಾರೆ. ಇದು ಮಕ್ಕಳ ಮೇಲೆ ವ್ಯತಿರಿಕ್ತ ಪಡಿಣಾಮ ಬೀರಲಿದೆ ಎಂದರು. ದಸಂಸ ಜಿಲ್ಲಾ ಸಂಚಾಲಕ ಕೇಶವ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಇಂದು ಗ್ರಾಮೀಣ ಮಟ್ಟದಲ್ಲಿ ನಾಟಕ ಸಂಸ್ಕೃತಿ ಬೆಳೆಸಲು ವಿಶೇಷ ಕಾರ್ಯಕ್ರಮ ಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ. ಇದರಿಂದ ಕನ್ನಡ ಉಳಿಸುವುದರ ಜೊತೆಗೆ ಗ್ರಾಮೀಣ ನಾಟಕ ಕಲಾವಿದರಲ್ಲಿನ ಸೂಪ್ತ ಪ್ರತಿಭೆಗಳನ್ನು ಪ್ರೋತ್ಸಾಹಿಸಿದಂತಾಗಲಿದೆ ಎಂದರು.

ನಶಿಸಲು ಬಿಡಬಾರದು: ನಾಟಕ ಸಂಸ್ಕೃತಿಯು ಜನರಲ್ಲಿ ಸಾಮಾಜಿಕ ಸಮಸ್ಯೆ ಸವಾಲುಗಳ ಬಗ್ಗೆ ಬೆಳಕು ಚೆಲ್ಲುವುದರಿಂದ ನಾಟಕದ ಬಗ್ಗೆ ಸಾರ್ವಜನಿಕರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ನಾಟಕದ ಅಭಿರುಚಿ ಹೆಚ್ಚು ಬೆಳೆಸಿಕೊಳ್ಳಬೇಕೆಂದು ಹೇಳಿ ವರನಟ ಡಾ.ರಾಜ್‌ ಕುಮಾರ್‌, ಬಾಲಕೃಷ್ಣ, ವಿಷ್ಣುವರ್ಧನ್‌ ಸೇರಿದಂತೆ ನಾಟಕ ಕಂಪನಿಗಳಲ್ಲಿ ಹೆಸರುವಾಸಿ ಪಡೆದ ಅನೇಕ ಕಲಾವಿದರು ಹೆಸರಾಂತ ಚಲನಚಿತ್ರಗಳ ಮುಖೇನ ಮನೆ ಮಾತಾದರು. ಇಂತಹ ನಾಟಕ ಕಲೆ ನಶಿಸಿ ಹೋಗದಂತೆ ನೋಡಿಕೊಳ್ಳಬೇಕೆಂದರು.
 
ಬಚ್ಚಪ್ಪ ಕಲಾ ತಂಡದಿಂದ ಅಪ್ಪ-ಮಗ ಸಾಮಾಜಿಕ ಹಾಸ್ಯಭರಿತ ನಾಟಕ ಪ್ರದರ್ಶಿಸಲಾಯಿತು. ಎನ್‌ಎಸ್‌ಯುಐನ ರಾಜ್ಯ ಸಂಚಾಲಕ  ಕೆ.ಎನ್‌.ಮುನೀಂದ್ರ, ಬೊಮ್ಮನ ಹಳ್ಳಿ ನಾರಾಯಣಸ್ವಾಮಿ, ಪುಟ್ಟು, ಆಶಾ ಫೌಂಡೇಷನ್‌ನ ಆಶಾ, ರಾಜೇಶ್‌, ಮುನಿ ನಂಜಪ್ಪ, ನವೀನ್‌, ಲೋಕೇಶ್‌ ಇದ್ದರು. 

ನಾಟಕದ ಬಗೆ ಅಭಿರುಚಿ ಮೂಡಿಸುವ ಕಾರ್ಯಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬೊಮ್ಮನಹಳ್ಳಿ ಪರಿವರ್ತನಾ ಟ್ರಸ್ಟ್‌ ಅಧ್ಯಕ್ಷ ಬೊಮ್ಮನಹಳ್ಳಿ ವೇಣು ಮಾತನಾಡಿ, ನಾಟಕ ಮತ್ತು ಕಲಾವಿದರ ಪ್ರೋತ್ಸಾಹಕ್ಕೆ ಪ್ರೇಕ್ಷಕರೇ ಕಾರಣ. ಇವರ ಶ್ರೀ ರಕ್ಷೆಯಿಂದ ಮಾತ್ರ ಕಲಾವಿದರ ಬದುಕು ಹಸನಾಗುತ್ತದೆ. ಈ ನಿಟ್ಟಿನಲ್ಲಿ ಪರಿವರ್ತನಾ ಟ್ರಸ್ಟ್‌ ವತಿಯಿಂದ ಸಮಾಜದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ನಾಟಕ ಸಂಸ್ಕೃತಿ ಬಗ್ಗೆ ಅಭಿರುಚಿ ಮೂಡಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿದೆ ಎಂದರು.

ಹಿಂದಿನ ಅನೇಕರು ಅಕ್ಷರ ಜ್ಞಾನ ವಿಲ್ಲದಿದ್ದರೂ ನ್ಯಾಯ, ಸತ್ಯ ಪರಂಪರೆ ತಿಳಿಸಿ ವಿಚಾರಿಸುವ ಗೀಗೀ ಪದ, ಲಾವಣ್ಯ, ವಚನ ಸಾಹಿತ್ಯ, ಸೋಬಾನೆ, ಹೀಗೆ ಅನೇಕ ಕಲಾಪ್ರಕಾರಗಳ ಮೂಲಕ ಸಮಾಜದಲ್ಲಿ ನೆಮ್ಮದಿ ಮತ್ತು ಶಾಂತಿ ಸೃಷ್ಠಿಸಲು ಕಾರಣಕರ್ತರಾಗಿದ್ದರು. ಅಂತಹ ಕಲಾವಿದರ ಒಳಿತಿಗಾಗಿ ಸರ್ಕಾರ ಹೆಚ್ಚು ಹೆಚ್ಚು ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.