ಕುಡಿವ ನೀರಿಗಾಗಿ ಪಕ್ಕದ ಊರಿಗೆ ದಂಡಯಾತ್ರೆ

ಚಂಚುರಾಯನಪಲ್ಲಿ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ

Team Udayavani, Nov 6, 2020, 5:59 PM IST

ಕುಡಿವ ನೀರಿಗಾಗಿ ಪಕ್ಕದ ಊರಿಗೆ ದಂಡಯಾತ್ರೆ

ಬಾಗೇಪಲ್ಲಿ ತಾ.ತಿಮ್ಮಂಪಲ್ಲಿ ಗ್ರಾಪಂನ ಚಂಚುರಾಯನಪಲ್ಲಿ ದಲಿತಕೇರಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿರುವುದು.

ಬಾಗೇಪಲ್ಲಿ: ತಾಲೂಕಿನ ತಿಮ್ಮಂಪಲ್ಲಿ ಗ್ರಾಪಂನ ಚಂಚುರಾಯನಪಲ್ಲಿ ದಲಿತ ಕೇರಿಯಲ್ಲಿ ಸುಮಾರು 110 ಕುಟುಂಬಗಳು ವಾಸವಿದ್ದು, ಈ ದಲಿತ ಕಾಲೋನಿಯಲ್ಲಿ 540 ಜನಸಂಖ್ಯೆ ಇದೆ. ಕಳೆದ 3-4 ವರ್ಷಗಳಿಂದ ಕುಡಿಯುವ ನೀರಿನ ಇವರನ್ನು ನಿತ್ಯ ಬೆಳಗಾದರೇ ಕಾಡುತ್ತಿದೆ.

ಕುಡಿಯುವ ನೀರಿಗಾಗಿ ಹಲವು ಬಾರಿ ಮನವಿ ಸಲ್ಲಿಸಿ ಹೋರಾಟ ಮಾಡುತ್ತಿದ್ದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಾಗಲೀ, ಜನಪ್ರತಿನಿಧಿಗಳಾಗಲೀ ಮನವಿಗೆ ಸ್ಪಂದಿಸದಿರುವುದು ದಲಿತ ಕೇರಿಯ ನಿವಾಸಿಗಳ ಆಕ್ರೋಶಕ್ಕೆಕಾರಣವಾಗಿದೆ.

ಪಕ್ಕದ ಗ್ರಾಮಗಳಿಗೆ ಅಲೆದಾಟ: ಗ್ರಾಮದ ಮಹಿಳೆಯರು, ಮಕ್ಕಳು, ವೃದ್ಧರು, ಬಿಂದಿಗೆ ಹಿಡಿದು ನೀರಿಗಾಗಿ ಅಕ್ಕಪಕ್ಕದಲ್ಲಿರುವ ಹತ್ತಿರದ ಬೊಮ್ಮಯ್ಯಗಾರಿಪಲ್ಲಿ, ಮರಸನಪಲ್ಲಿ, ಗುಂಡ್ಲಪಲ್ಲಿ ಗ್ರಾಮಗಳಿಗೆ ಹೋಗಿ ನೀರು ತರಬೇಕಾದ ದುಸ್ಥಿತಿ ಇದೆ.

ಪಿಡಿಒ ಸಿಗಲ್ಲ: ಚಂಚುರಾಯನಪಲ್ಲಿ ಕಾಲೋನಿಯಲ್ಲಿ ನೀರಿನ ಸಮಸ್ಯೆ ಜಟಿಲವಾಗಿದ್ದು, ಸಮಸ್ಯೆ ಬಗ್ಗೆ ಮನವಿ ಮಾಡಲು ಬರುವ ಸಾರ್ವಜನಿಕರಿಗೆ ತಿಮ್ಮಂಪಲ್ಲಿ ಗ್ರಾಪಂ ಪಿಡಿಒ ನಾರಾಯಣಸ್ವಾಮಿಯ ದರ್ಶನ ಭಾಗ್ಯ ಸಿಗುವುದಿಲ್ಲ ಎನ್ನಲಾಗಿದೆ.

ಅನುದಾನ ದುರ್ಬಳಕೆ: 2018-19 ನೇ ಸಾಲಿನ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಸುಮಾರು 70 ಲಕ್ಷಕ್ಕೂ ಹೆಚ್ಚು ಅನುದಾನ ಗ್ರಾಮದ ಅಭಿವೃದ್ಧಿಗೆ ಬಿಡುಗಡೆಯಾಗಿ ಹಣ ಖರ್ಚಾಗಿದ್ದರೂ, ಗ್ರಾಮದಲ್ಲಿ ಮಾತ್ರ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥವಾಗಿಲ್ಲ.ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಯಾರೊಬ್ಬರೂ ಮುಂದಾಗಿಲ್ಲ.

ಪಕ್ಕದ ಗ್ರಾಮಗಳಿಗೆ ತೆರಳಿ ನೀರು ತರಬೇಕಿದೆ’ :  ಕೂಲಿ ನಾಲಿ ಮಾಡಿ ಜೀವನ ನಡೆಸುತ್ತಿದ್ದೇವೆ. ಪ್ರತಿ ದಿನ ಕೂಲಿಗೆ ಹೋಗುವ ಮುನ್ನ ಅಕ್ಕಪಕ್ಕದ ಹಳ್ಳಿಗಳಿಂದ ನೀರು ತರಬೇಕಾಗಿದೆ. ನಮ್ಮ ಗ್ರಾಮಕ್ಕೆ ಅಧಿಕಾರಿಗಳು ಬರುತ್ತಾರೆ ಹೋಗುತ್ತಾರೆ ಆದರೂ ನೀರಿನ ಸಮಸ್ಯೆ ಹೇಳಿದರೆ ತಾತ್ಕಾಲಿಕವಾಗಿ ಇತ್ಯರ್ಥಗೊಳಿಸಿ ಹೋಗುತ್ತಾರೆ. ನಂತರ ಯಥಾಸ್ಥಿತಿ. ನಮ್ಮ ಪರಿಸ್ಥಿತಿ ಯಾರಿಗೆ ಹೇಳಬೇಕು, ನೀರು ಕೊಡಲಿಕ್ಕೆ ಆಗುತ್ತಿಲ್ಲವಾದರೆ ವಿಷವಾದರೂ ಕೊಡಿ ಎಂದು ಸ್ಥಳೀಯ ನಿವಾಸಿ ಮಂಜುಳಾ ಅಳಲು ತೋಡಿಕೊಂಡರು.

ಟ್ಯಾಂಕರ್‌ ನೀರು ಸರಬರಾಜು ಸ್ಥಗಿತ :  ನೀರಿನ ಸಮಸ್ಯೆ ನೀಗಿಸುವಂತೆ ಮನವಿ ಮಾಡಿದಾಗ ಅಧಿಕಾರಿಗಳು ನಾಮ್‌ಕಾವಸ್ಥೆಗೆ ಖಾಸಗಿ ಟ್ಯಾಂಕರ್‌ನಿಂದ ನೀರನ್ನು ಹಾಗಾಗ ಗ್ರಾಮಕ್ಕೆ ಸರಬರಾಜು ಮಾಡುತ್ತಿದ್ದರೂ, ಆದರೆ ನೀರು ಸರಬರಾಜು ಮಾಡುವ ಟ್ಯಾಂಕರ್‌ ಮಾಲೀಕನಿಗೆ ಹಣ ನೀಡಿಲ್ಲ ಎಂದು ಇತ್ತೀಚೆಗೆ ಟ್ಯಾಂಕರ್‌ನಿಂದ ನೀರು ಸರಬರಾಜು ಮಾಡುವುದನ್ನು ಸ್ಥಗಿತಗೊಳಿಸಿದ್ದಾರೆ.

ಚಂಚುರಾಯನಪಲ್ಲಿ ಗ್ರಾಮದಲ್ಲಿ ಸಿಆರ್‌ಎಫ್ ಅನುದಾನದಲ್ಲಿಖಾಸಗಿ ಟ್ಯಾಂಕರ್‌ ಮೂಲಕ ಜನರಿಗೆ ನೀರು ಸರಬರಾಜು ಮಾಡಲಾಗುತ್ತಿತ್ತು. ಸ್ಥಗಿತಗೊಂಡಿರುವುದು ಗಮನಕ್ಕೆ ಬಂದಿಲ್ಲ. ಇತ್ತೀಚೆಗೆ ಒಂದು ಕೊಳವೆ ಬಾಕೊರೆಯಲಾಗಿದೆ ಆದರೂ ನೀರು ಸಿಗಲಿಲ್ಲ.ಖಾಸಗಿ ಕೊಳವೆಬಾ ಮಾಲೀಕರೊಂದಿಗೆ ಪಿಡಿಒ ಒಮ್ಮೆ ಚರ್ಚಿಸಿ ಸಮಸ್ಯೆ ಇತ್ಯರ್ಥಗೊಳಿಸಬೇಕು. ರಾಮ ಲಿಂಗಾರೆಡ್ಡಿ, ಎಇಇ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ. ಬಾಗೇಪಲ್ಲಿ

ತಾಲೂಕಿನ ಚಂಚಯರಾಯನಪಲ್ಲಿ ಗ್ರಾಮದಲ್ಲಿ ನೀರಿನ ಸಮಸ್ಯೆ ಬಗ್ಗೆನನಗೆ ಮಾಹಿತಿ ಇಲ್ಲ. ಪಿಡಿಒ ಅವರ ಬಳಿ ಚರ್ಚೆ ಮಾಡಿ ಕೂಡಲೇ ನೀರು ಸರಬರಾಜು ಮಾಡುವಂತೆ ಸೂಚಿಸುತ್ತೇನೆ. ಎಚ್‌.ಎನ್‌.ಮಂಜುನಾಥ ಸ್ವಾಮಿ, ಇಒ, ತಾಪಂ ಬಾಗೇಪಲ್ಲಿ

 

ಪಿ.ಮಂಜುನಾಥರೆಡ್ಡಿ

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.