ನಾಲ್ಕು ತಿಂಗಳಿಂದ ಕುಡಿವ ನೀರಿಗೆ ಅಲೆದಾಟ


Team Udayavani, Apr 26, 2022, 3:15 PM IST

Untitled-1

ಬಾಗೇಪಲ್ಲಿ: ರಾಜಕೀಯ ವೈಷಮ್ಯದಿಂದ ಗ್ರಾಮ ದಲ್ಲಿ ಭುಗಿಲೆದ್ದ ಬಿನ್ನಾಭಿಪ್ರಾಯಗಳಿಂದ ಕುಡಿಯುವ ನೀರಿನ ಶುದ್ಧೀಕರಣ ಘಟಕ ನಿರ್ಮಾಣಕ್ಕೆ ಅಡ್ಡಿಯಾಗಿ, ನಾಲ್ಕು ತಿಂಗಳಿನಿಂದ ಶುದ್ಧ ಕುಡಿಯವ ನೀರಿಗಾಗಿ ಮತ್ತೂಂದು ಗ್ರಾಮಕ್ಕೆ ತೆರಳುವ ಅನಿವಾರ್ಯ ಪರಿಸ್ಥಿತಿ ಗೂಳೂರು ಹೋಬಳಿಯ ಚಿನ್ನಕಾಯಲಪಲ್ಲಿ ಗ್ರಾಮದಲ್ಲಿ ಎದುರಾಗಿದೆ.

ಬಾಗೇಪಲ್ಲಿ ತಾಲೂಕಿನ ಚಿನ್ನಕಾಯಲಪಲ್ಲಿ ಗ್ರಾಮದಲ್ಲಿ ಶಿಥಿಲಗೊಂಡಿದ್ದ ಕುಡಿವ ನೀರಿನ ಶುದ್ಧೀಕರಣ ಘಟಕವನ್ನು 4 ತಿಂಗಳ ಹಿಂದಷ್ಟೆ ತೆರವುಗೊಳಿಸಿ ಹೊಸ ಘಟಕ ಸ್ಥಾಪನೆಗೆ ನೀರು ಸರಬರಾಜು ಇಲಾಖೆ ಮುಂದಾಗಿದ್ದು, ಜಮೀನು ಮಾಲೀಕ ಕೆ.ವೆಂಕಟಶಿವಾರೆಡ್ಡಿರವರಿಂದ ಘಟಕ ಸ್ಥಾಪನೆಗೆ ಅಕ್ಷೇಪ ವ್ಯಕ್ತಪಡಿಸಿದ್ದರು. ಶುದ್ಧೀಕರಣ ಘಟಕದ ಯಂತ್ರೋಪಕರಣಗಳು ರಸ್ತೆಯ ಬದಿಯಲ್ಲಿ ಅನಾಥವಾಗಿ ಬಿದ್ದಿವೆ. ಇದರ ಪರಿಣಾಮ ಗ್ರಾಮದಲ್ಲಿರುವ ಗ್ರಾಮಸ್ಥರು ನಾಲ್ಕು ತಿಂಗಳಿನಿಂದ ಕುಡಿವ ನೀರಿಗಾಗಿ ಗೂಳೂರು ಗ್ರಾಮಕ್ಕೆ ಅಲೆದಾಡುವಂತಾಗಿದೆ.

ಬಾಗೇಪಲ್ಲಿ ತಾಲೂಕಿನ ಗೂಳೂರು ಹೋಬಳಿಯ ಚಿನ್ನಕಾಯಲಪಲ್ಲಿ ಶಾಸಕ ಎಸ್‌. ಎನ್‌.ಸುಬ್ಬಾರೆಡ್ಡಿರವರ ಸ್ವಗ್ರಾಮ. ಅದೇ ಗ್ರಾಮದ ನಿವಾಸಿ ಕೆ.ವೆಂಕಟಶಿವಾರೆಡ್ಡಿ ವಿರುದ್ದ ಶಾಸಕ ಎಸ್‌. ಎನ್‌.ಸುಬ್ಬಾರೆಡ್ಡಿ ತಂದೆ ಎಸ್‌.ನಂಜುಂಡರೆಡ್ಡಿ ಗ್ರಾಮದಲ್ಲಿರುವ ಪಿತ್ರಾರ್ಜಿತ ಜಮೀನುಗಳ ಹಂಚಿಕೆ ವಿಚಾರವಾಗಿ ಚಿಕ್ಕಬಳ್ಳಾಪುರ ಅಸಿಸ್ಟೆಂಟ್‌ ಕಮೀಷನರ್‌ ರವರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ, ರಾಜಿ ಸಂಧಾನದ ಮೂಲಕ ಒಬ್ಬರು ತಮ್ಮ ಜಮೀನುಗಳನ್ನು ಫವತಿ ಖಾತೆ ಮಾಡಿಸಿಕೊಂಡಿರುತ್ತಾರೆ. ಸರ್ವೇ ನಂ 24/2ಎ ರಲ್ಲಿರುವ 6 ಗುಂಟೆ ಜಮೀನು ನ್ಯಾಯಾಲಯದ ಆದೇಶದಂತೆ ಕೆ.ವೆಂಕಟಶಿವಾರೆಡ್ಡಿ ಹೆಸರಿಗೆ ಖಾತೆ ಆಗಿದೆ. ಕೆ.ವೆಂಕಟಶಿವಾರೆಡ್ಡಿಗೆ ಸೇರಿರುವ 6 ಗುಂಟೆ ಜಮೀನುನಲ್ಲಿ ಕೆಲವು ವರ್ಷಗಳ ಹಿಂದೆ ಕುಡಿಯುವ ನೀರಿನ ಶುದ್ಧೀಕರಣ ಘಟಕ, ಅಂಗನವಾಡಿ ಹಾಗೂ ಸೊಸೈಟಿ ಕಟ್ಟಡವನ್ನು ನಿರ್ಮಿಸಲಾಗಿದೆ. ಇದಕ್ಕೆ ಅನುಮತಿ ಪಡೆದಿಲ್ಲ ವೆಂದು ಜಮೀನು ಮಾಲೀಕ ಸಂಬಂಧಪಟ್ಟ ಇಲಾಖೆಗಳಿಗೆ ಕಟ್ಟಡಗಳನ್ನು ತೆರವುಗೊಳಿಸುವಂತೆ ನೋಟಿಸ್‌ ಕಳುಹಿಸಿ ಕಟ್ಟಡಗಳಿಗೆ ಬೀಗ ಹಾಕಿದ್ದಾರೆ.

ಭಿನ್ನಮತವೇ ಘಟನೆಗೆ ಕಾರಣ : ಹಲವು ತಿಂಗಳ ಹಿಂದೆ ಚಿನ್ನಕಾಯಲಪಲ್ಲಿ ವಿಎಸ್‌ ಎಸ್‌ಎನ್‌ ಬ್ಯಾಂಕ್‌ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎರಡು ಗುಂಪುಗಳ ನಡುವಿನ ಭಿನ್ನಮತ ಹಾಗೂ ಗ್ರಾಮದಲ್ಲಿ 20 ಗುಂಟೆ ಸರ್ಕಾರಿ ಜಮೀನು ಇದ್ದರೂ ಖಾಸಗಿ ವ್ಯಕ್ತಿಯ ಜಮೀನುನಲ್ಲೆ ಸಾರ್ವಜನಿಕ ಕುಡಿವ ನೀರು ಶುದ್ಧೀಕರಣ ಘಟಕ ನಿರ್ಮಿಸಬೇಕೆಂಬ ಶಾಸಕರ ಗುಂಪಿನವರ ಹಠ ಕಟ್ಟಡಗಳಿಗೆ ಬೀಗ ಹಾಕಲು ಕಾರಣವಾಗಿದೆ. ಚಿನ್ನಕಾಯಲಪಲ್ಲಿ ಗ್ರಾಮದ ಒಂದು ಗುಂಪಿನವರು ಜಮೀನು ಮಾಲೀಕ ಕೆ.ವೆಂಕಟಶಿವಾರೆಡ್ಡಿ ವಿರುದ್ಧ ಬಾಗೇಪಲ್ಲಿ ಠಾಣೆಯಲ್ಲಿ ಮೌಖೀಕ ದೂರು ಸಲ್ಲಿಸಿದ್ದು, ವೃತ್ತ ನಿರೀಕ್ಷಕ ಡಿ.ಆರ್‌.ನಾಗರಾಜು ಗ್ರಾಮಕ್ಕೆ ಭೇಟಿ ಪೂರ್ಣ ದಾಖಲೆಗಳೊಂದಿಗೆ ಠಾಣೆಗೆ ಬರುವಂತೆ ಎರಡು ಗುಂಪಿನವರಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.