ಆಟೋ ಪ್ರಯಾಣ ದರ ಪರಿಷ್ಕರಣೆಗೆ ಚಾಲಕರ ಮನವಿ
Team Udayavani, Oct 7, 2019, 2:55 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹಲವು ವರ್ಷ ಗಳಿಂದ ಪರಿಷ್ಕರಣೆ ಆಗದೇ ನೆನಗುದಿಗೆ ಬಿದಿರುವ ಆಟೋ ಪ್ರಯಾಣ ದರವನ್ನು ಕೂಡಲೇ ಪರಿಷ್ಕರಿಸಿ ಆಟೋ ಚಾಲಕರ ಹಿತ ಕಾಯಬೇಕೆಂದು ಆಗ್ರಹಿಸಿ ತ್ರಿಚಕ್ರ ವಾಹನ ಚಾಲಕರ ಸಂಘದ ಪದಾಧಿಕಾರಿಗಳು ಇತ್ತೀ ಚೆಗೆ ಜಿಲ್ಲಾಧಿಕಾರಿ ಆರ್. ಲತಾಗೆ ಮನವಿ ಸಲ್ಲಿಸಿದರು.
ರಾಜ್ಯ ಆಟೋ ಚಾಲಕರ ಸಂಘದ ಕಾಯಾಧ್ಯಕ್ಷ ಕೆ.ವಿ.ಸುರೇಶ್ ಕುಮಾರ್, ಜಿಲ್ಲಾಧ್ಯಕ್ಷ ಡಾಂಬು ಶ್ರೀನಿವಾಸ್, ಕರವೇ ಜಿಲ್ಲಾಧ್ಯಕ್ಷ ಎಂ.ಆರ್.ಲೋಕೇಶ್ ಮತ್ತಿತರ ನಿಯೋಗ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಹಕ್ಕೋತ್ತಾಯಗಳನ್ನು ಈಡೇರಿಸುವಂತೆ ಕೋರಿ ಮನವಿ ಸಲ್ಲಿಸಿತು. ಕೇಂದ್ರ ಸರ್ಕಾರ ತಿದ್ದುಪಡಿ ಮೂಲಕ ಜಾರಿಗೆ ತಂದಿರುವ ಮೋಟಾರು ವಾಹನ ಕಾಯ್ದೆಯ ಬಗ್ಗೆ ಕೂಡಲೇ ಸಾರಿಗೆ ಇಲಾಖೆ ಅಧಿಕಾರಿಗಳಿಂದ ಆಟೋ ಚಾಲಕರಿಗೆ ಜಾಗೃತಿ ಮೂಡಿಸಬೇಕು. ಆಟೋ ಚಾಲಕರಿಗೆ ಸಂಬಂಧಿಸಿದ ಸಮಸ್ಯೆ ಗಳ ಚರ್ಚೆಗೆ ಜಿಲ್ಲಾ ಮಟ್ಟದ ಸಾರಿಗೆ ಪ್ರಾಧಿಕಾರ ಸಭೆ ಆಯೋಜಿಸಬೇಕು, ಅಧಿಕೃತ ಆಟೋಗಳ ನಿಲ್ದಾಣ ಹಾಗೂ ಆರ್ಟಿಒ ಇಲಾಖೆಯಿಂದ ಪರವಾನಿಗೆ ಪಡೆದು ಕೊಳ್ಳುವ ಬಗ್ಗೆ ಚಾಲಕರಲ್ಲಿ ಅರಿವು ಮೂಡಿಸ ಬೇಕೆಂದು ನಿಯೋಗ ಜಿಲ್ಲಾಧಿಕಾರಿಗಳನ್ನು ಕೋರಿತು.
ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಒಂದು ಬಾರಿ ಆಟೋ ಪ್ರಯಾಣ ದರ ಪರಿಷ್ಕರಣೆಗೊಂಡಿದ್ದು, ಬಳಿಕ ಸುಮಾರು ವರ್ಷ ಗಳಿಂದ ಪ್ರಯಾಣ ದರ ಏರಿಕೆ ಅಥವಾ ಪರಿಷ್ಕರಣೆಗೊಂಡಿಲ್ಲ. ಸದ್ಯ, ಆಟೋ ಚಾಲ ಕರು ಸಂಕಷ್ಟದಲ್ಲಿದ್ದು, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗಿದೆ. ಆದ್ದರಿಂದ ಜಿಲ್ಲಾಡಳಿತ ಕೂಡಲೇ ಆಟೋ ಪ್ರಯಾಣ ದರ ಹೆಚ್ಚಿಸಲು ಪರಿಷ್ಕರಣೆ ಮಾಡಬೇಕೆಂದು ಕೋರಿ ದರು. ಬಹಳಷ್ಟು ನಗರ ಪಟ್ಟಣಗಳಲ್ಲಿ ಅಧಿ ಕೃತ ಆಟೋಗಳಿಗೆ ನಿಲ್ದಾಣ ಇಲ್ಲದೇ ಸಮಸ್ಯೆ ಇದ್ದು, ಕೂಡಲೇ ಜಿಲ್ಲಾಡಳಿತ ಆಟೋ ನಿಲ್ದಾಣ ಗಳಿಗೆ ಜಾಗ ಗುರುತಿಸಿ ನಿಲ್ದಾಣ ಗಳನ್ನು ಆಯಾ ನಗರಸಭೆಗಳ ಮೂಲಕ ನಿರ್ಮಿಸಿ ಕೊಡಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಆಟೋ ಚಾಲಕರ ಸಂಘದ ಪದಾಧಿಕಾರಿಗಳಾದ ಶಬ್ಬೀರ್, ಎಸ್.ಗೋಪಿ, ಎನ್. ವೆಂಕಟೇಶ್, ಫಕ್ರು ದ್ಧೀನ್ ಸೇರಿದಂತೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ