ಪ್ರಧಾನಿ ಬಳಿ ಸಿಎಂ ನಿಯೋಗ: ಸುಧಾಕರ್
Team Udayavani, Aug 31, 2020, 1:58 PM IST
ಶಿಡ್ಲಘಟ್ಟ: ಕೇಂದ್ರ ಸರ್ಕಾರ ಜಿಎಸ್ಟಿಯಲ್ಲಿ ರಾಜ್ಯದ ಪಾಲು ಕೊಡಬೇಕೆಂದು ಎಲ್ಲಾ ರಾಜ್ಯಗಳಿಂದ ಬೇಡಿಕೆ ಸಲ್ಲಿಕೆಯಾಗಿದೆ. ಜಿಎಸ್ಟಿ ಕೋತಾ ಆದರೆ, ರಾಜ್ಯದ ಪ್ರಗತಿಗೆ ಕಷ್ಟವಾಗುತ್ತದೆ. ಹಾಗಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜು ಬೊಮ್ಮಯಿ, ಕೇಂದ್ರ ಸಚಿವರು ಒಳಗೊಂಡಂತೆ ಒಂದು ಉನ್ನತ ಮಟ್ಟದ ನಿಯೋಗ ಪ್ರಧಾನಿ, ವಿತ್ತ ಸಚಿವರನ್ನು ಭೇಟಿಮಾಡಲಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ಜಿಲ್ಲೆಯಲ್ಲಿ ಗುರುಭವನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಗೋಶಾಲೆ ಆರಂಭಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯದ ಅಭಿವೃದ್ಧಿಗಾಗಿ ಎಲ್ಲಾ ರೀತಿಯಲ್ಲಿ ಸಹಕರಿಸುತ್ತಿದೆ. ಜಿಎಸ್ಟಿನಲ್ಲಿ ಕರ್ನಾಟಕಕ್ಕೆ ಬರುವ ಪಾಲು ಬರುತ್ತದೆ ಎಂಬ ವಿಶ್ವಾಸ ತಮಗಿದೆ. ರಾಜ್ಯದ ಮುಖ್ಯಮಂತ್ರಿ, ಕೇಂದ್ರ ಸಚಿವರು ಹಾಗೂ ಗೃಹ ಸಚಿವರು ಪ್ರಧಾನಿ, ವಿತ್ತ ಸಚಿವರಿಗೆ ಮನವರಿಕೆ ಮಾಡಿಕೊಡುತ್ತಾರೆ ಎಂದು ಹೇಳಿದರು.
ಆರ್ಥಿಕ ದುಸ್ಥಿತಿಯಲ್ಲಿ ರಾಜ್ಯದ ಆರ್ಥಿಕ ಶಿಸ್ತು, ಆರ್ಥಿಕ ಪ್ರಗತಿ ಇವೆಲ್ಲೂ ಮುಂದುವರಿಯಲು ಕೇಂದ್ರ ಸರ್ಕಾರ ನಮ್ಮ ಕೆಲಸ ಮಾಡಿಕೊಡಬೇಕಾಗಿದೆ. ನಮ್ಮ ಪಾಲಿನ ತೆರಿಗೆ ಹಣವನ್ನು ನೀಡಬೇಕಾಗಿದೆ. ಅದನ್ನು ಮನವರಿಕೆ ಮಾಡಿಕೊಡಲು ರಾಜ್ಯ ಸರ್ಕಾರ ಎಲ್ಲಿಯೂ ಎಡವಲ್ಲ, ಅದಕ್ಕಾಗಿ ವಿಶೇಷ ಧೈರ್ಯಬೇಕಾಗಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸಿದ ಸಚಿವರು, ರಾಜ್ಯಕ್ಕೆ ಕೇಂದ್ರದಿಂದ ಯಾವುದೇ ರೀತಿಯ ಅನ್ಯಾಯ ಆಗುವುದಿಲ್ಲ. ನಮ್ಮ ಪಕ್ಷದ ನಾಯಕರು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ನಮ್ಮ ಪಾಲು ತರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
Chikballapur; ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ