2 ತಿಂಗಳಲ್ಲಿ ಎಕೋ ಥೀಮ್ ಪಾರ್ಕ್ ಕಾಮಗಾರಿ ಪೂರ್ಣ
Team Udayavani, Jul 3, 2022, 4:03 PM IST
ಚಿಕ್ಕಬಳ್ಳಾಪುರ: ನಗರಕ್ಕೆ ಹೊಂದಿಕೊಂಡಿರುವ ಕಂದವಾರ ಕೆರೆ ಬಳಿ ಕೆ.ಆರ್.ಎಸ್.ಬೃಂದಾವನ ಮಾದರಿಯಲ್ಲಿ ನಿರ್ಮಾಣ ಮಾಡುತ್ತಿರುವ ಎಕೋ ಥೀಮ್ ಪಾರ್ಕ್ನ ಕಾಮಗಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಆರ್.ಲತಾ ಪರಿಶೀಲನೆ ಮಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸುಮಾರು 8.1 ಕೋಟಿ ರೂ. ವೆಚ್ಚದಲ್ಲಿ ಎಕೋ ಥೀಮ್ ಪಾರ್ಕ್ನ್ನು ನಿರ್ಮಿಸಲಾಗುತ್ತಿದ್ದು, 2 ತಿಂಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸ ಲಾಗುವುದು. ಪರಿಸರ ಸ್ನೇಹಿ ಉದ್ಯಾನವನ ಪ್ರವಾಸಿಗರ ಮನಸೆಳೆಯುವ ಹಲವು ವೈಶಿಷ್ಟ್ಯಗಳನ್ನೊಳಗೊಂಡ ವಿಶಿಷ್ಟ ಮಾದರಿಗಳು ಈ ಪಾರ್ಕ್ನಲ್ಲಿ ಮೈತಳೆಯಲಿದ್ದು, ಜಿಲ್ಲೆಗೆ ಅತ್ಯಂತ ಆಕರ್ಷಣೀಯ ಮಾದರಿಯ ಉದ್ಯಾನವನ ಇದಾಗಲಿದೆ ಎಂದರು.
ಈ ಉದ್ಯಾನವನದಲ್ಲಿ ಸರಳ ಜಿಮ್, ಪಾರ್ಕಿಂಗ್ ವ್ಯವಸ್ಥೆ, ಮಕ್ಕಳ ಆಟದ ಅನುಕೂಲ ಗಳು, ಹಿರಿಯ ನಾಗರಿಕರ ವಿಶ್ರಾಂತಿ ಸ್ಥಳ, ಸಂಗೀತ ಕಾರಂಜಿ, ಬೋಟಿಂಗ್, ಕಲಾ ಗ್ರಾಮದ ಮಳಿಗೆಗಳು, ಸ್ಥಳೀಯ ಕಲೆಗಳ ಪ್ರದರ್ಶನ ಕೇಂದ್ರ, ಪಾದಾಚಾರಿ ಸೇತುವೆ, ವನೌಷಧಿ ಸಸ್ಯಗಳ ಪಾರ್ಕ್ ಇತ್ಯಾದಿ ವಿಶೇಷ ಆಕರ್ಷಣೆಯೊಂದಿಗೆ ಪ್ರವಾಸಿಗರಿಗೆ ಮುದ ನೀಡಲಿದೆ. ಒಟ್ಟಾರೆ ಜಿಲ್ಲೆಯ ಪ್ರವಾಸೋದ್ಯಮ ವನ್ನು ಅಭಿವೃದ್ಧಿಪಡಿಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ನಂತರ ಜಿಲ್ಲಾಧಿಕಾರಿಗಳು ನೇರವಾಗಿ ಮುನ್ಸಿಪಾಲ್ ಬಡಾವಣೆ ಎಸ್.ಡಿ.ಎಂ.ಐ (ಐಡಿಯಾ ಸಮಿತಿ) ಬಡಾವಣೆಗಳ ಉದ್ಯಾನವನ ಗಳು ಮತ್ತು ಚೆನ್ನಯ್ಯ ಪಾರ್ಕ್ಗೆ ಭೇಟಿ ನೀಡಿ, ಅಲ್ಲಿನ ನಿರ್ವಹಣೆಯನ್ನು ವೀಕ್ಷಿಸಿ ಸ್ಥಳದಲ್ಲೇ ನಿರ್ವಹಣೆಯ ಉನ್ನತೀಕರಣಕ್ಕೆ, ಸ್ವಚ್ಛತೆ ಕಾಪಾಡಲು ಅಗತ್ಯ ಸೂಚನೆಗಳನ್ನ ನಗರಾಭಿವೃದ್ಧಿ ಕೋಶದ ಮತ್ತು ನಗರ ಸಭೆಯ ಅಧಿಕಾರಿಗಳಿಗೆ ನೀಡಿದರು.
ನಗರಸಭೆ ಅಧ್ಯಕ್ಷ ಆನಂದ್ ರೆಡ್ಡಿ (ಬಾಬು), ಉಪವಿಭಾಗಾಧಿಕಾರಿ ಡಾ.ಸಂತೋಷ್ ಕುಮಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ರೇಣುಕಾ, ತಹಶೀಲ್ದಾರ್ ಗಣಪತಿ ಶಾಸ್ತ್ರಿ, ನಗರಸಭೆ ಪೌರಾಯುಕ್ತ ಮಹಾಂತೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ