ಪರಿಸರ ಸ್ನೇಹಿ ನಾಡ ಕಚೇರಿ ಉದ್ಘಾಟನೆ ಇಂದು
Team Udayavani, Aug 19, 2019, 3:00 AM IST
ಶಿಡ್ಲಘಟ್ಟ: ತಾಲೂಕು ಸಹಿತ ಜಿಲ್ಲಾದ್ಯಂತ ಅಂತರ್ಜಲ ಮಟ್ಟವನ್ನು ವೃದ್ಧಿಗೊಳಿಸಲು ಮಳೆ ನೀರು ಕೊಯ್ಲು ಪದ್ಧತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆಸಕ್ತಿ ವಹಿಸಿ ಶಾಲಾ ಕಾಲೇಜು ಹಾಗೂ ಸರ್ಕಾರಿ ಜಮೀನು ಮತ್ತು ಕಚೇರಿಗಳ ಸುತ್ತಮುತ್ತ ಗಿಡಗಳನ್ನು ನೆಟ್ಟು ಪೋಷಣೆ ಮಾಡಿ ಪರಿಸರ ಸಂರಕ್ಷಣೆಗಾಗಿ ಗಮನ ಸೆಳೆದಿದ್ದ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರ ಮತ್ತೂಂದು ಕನಸು ಪರಿಸರ ಸ್ನೇಹಿ ನಾಡ ಕಚೇರಿ ಕಟ್ಟಡ ಉದ್ಘಾಟನೆಗೆ ಸಜ್ಜಾಗಿದ್ದು, ಸೋಮವಾರ ಉದ್ಘಾಟನೆ ಭಾಗ್ಯ ಕಾಣಲಿದೆ.
ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಗ್ರಾಮದಲ್ಲಿ ಪರಿಸರ ಸ್ನೇಹಿ ನಾಡ ಕಚೇರಿ ನಿರ್ಮಿಸಲು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೇ ನಿಗದಿತ ಕಾಲಾವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟನೆಗೆ ಸಜ್ಜುಗೊಳಿಸಿದ್ದು, ಕಟ್ಟಡ ನವವಧುವಿನಂತೆ ಶೃಂಗಾರಗೊಂಡಿದೆ.
7 ಕೊಠಡಿ: 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಪರಿಸರ ಸ್ನೇಹಿ ನಾಡ ಕಚೇರಿ ಕಟ್ಟಡ 7 ಕೊಠಡಿಗಳನ್ನು ಹೊಂದಿದ್ದು, ಕೂಲಿ ಕಾರ್ಮಿಕರು ಈ ಕಟ್ಟಡ ನಿರ್ಮಿಸಲು ಶ್ರಮವಹಿಸಿದ್ದಾರೆ. ತಾಲೂಕಿನ ಜಂಗಮಕೋಟೆ ಮತ್ತು ಸಾದಲಿ ಗ್ರಾಮದಲ್ಲಿ ಇದೇ ಮಾದರಿಯಲ್ಲಿ ಪರಿಸರ ಸ್ನೇಹಿ ಕಟ್ಟಡಗಳು ತಲೆಎತ್ತಿದ್ದು, ಪ್ರಥಮ ಹಂತದಲ್ಲಿ ಜಂಗಮಕೋಟೆ ನಾಡ ಕಚೇರಿಗೆ ಉದ್ಘಾಟನೆಗೆ ಭಾಗ್ಯ ಕೂಡಿ ಬಂದಿದೆ. ಮುಂದಿನ ದಿನಗಳಲ್ಲಿ ಸಾದಲಿ ಕಟ್ಟಡ ಪೂರ್ಣಗೊಳ್ಳಲಿದೆ.
ಪ್ಲಾಸ್ಟಿಂಗ್ ರಹಿತ ಕಟ್ಟಡ: ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳ ಕಟ್ಟಡಗಳನ್ನು ನಿರ್ಮಿಸಲು ಇಟ್ಟಿಗೆ ಅಥವಾ ಹಾಲೋಬ್ರಿಕ್ಸ್ ಇಟ್ಟಿಗೆಗಳನ್ನು ಬಳಕೆ ಮಾಡುತ್ತಾರೆ. ಆದರೆ ಈ ಕಟ್ಟಡಕ್ಕೆ ಮಾತ್ರ ಸ್ಥಳದಲ್ಲಿ ಸಿಮೆಂಟ್, ಕೆಮ್ಮಣ್ಣು, ಎಂ.ಸ್ಯಾಂಡ್, ಸುಣ್ಣದ ನೀರು ಬಳಕೆ ಮಾಡಿ ಇಟ್ಟಿಗೆ ತಯಾರಿಸಿ ಸುಮಾರು 22 ದಿನ ಕ್ಯೂರಿಂಗ್ ಮಾಡಿದ ಬಳಿಕ ತಯಾರಾದ ಇಟ್ಟಿಗೆಯನ್ನು ಬಳಕೆ ಮಾಡಿ ಕಟ್ಟಡ ನಿರ್ಮಿಸಲಾಗಿದೆ. ಇದರಿಂದ ಗ್ರಾಮಾಂತರ ಪ್ರದೇಶದಲ್ಲಿ ಸಹ ಆಡಳಿತ ಯಂತ್ರವನ್ನು ಚುರುಕುಗೊಳಿಸಲು ವೇದಿಕೆ ಸಜ್ಜಾಗಿದೆ.
68 ಹಳ್ಳಿಗಳು ಮತ್ತು 13 ಕಂದಾಯ ವೃತ್ತಗಳು: ಹೋಬಳಿ ಕೇಂದ್ರವಾಗಿರುವ ಜಂಗಮಕೋಟೆ ವೇಗವಾಗಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಗತಿ ಸಾಧಿಸಲಿದೆ. ಹೋಬಳಿ ವ್ಯಾಪ್ತಿಯಲ್ಲಿ ಸುಮಾರು 68 ಹಳ್ಳಿಗಳು ಮತ್ತು 13 ಕಂದಾಯ ವೃತ್ತಗಳು ಇದರ ವ್ಯಾಪ್ತಿಗೆ ಬರಲಿದ್ದು, ಜನಸಾಮಾನ್ಯರು ಪ್ರತಿಯೊಂದು ಕೆಲಸಕ್ಕೆ ಶಿಡ್ಲಘಟ್ಟ ನಗರದ ತಾಲೂಕು ಕಚೇರಿಗೆ ಅಲೆದಾಡುವ ಬದಲಿಗೆ ಮುಂದಿನ ದಿನಗಳಲ್ಲಿ ಹೋಬಳಿ ಕೇಂದ್ರದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸೇವೆಗಳು ಲಭಿಸಲಿದೆ.
ಕಚೇರಿಗೆ ಅಗತ್ಯ ಸಿಬ್ಬಂದಿ ದೊರೆಯಲಿ: ಜಂಗಮಕೋಟೆ ಗ್ರಾಮ ಹೋಬಳಿ ಮತ್ತು ಪಂಚಾಯಿತಿ ಕೇಂದ್ರವಾಗಿರುವುದರಿಂದ ವಿವಿಧ ಸರ್ಕಾರಿ ಸೇವೆ ಒದಗಿಸಲು ಈಗಾಗಲೇ ನಾಡ ಕಚೇರಿ ನಡೆಯುತ್ತಿದೆ. ಕಚೇರಿಗೆ ನೂತನ ಕಟ್ಟಡ ಭಾಗ್ಯ ಕೂಡಿಬಂದಿದ್ದು, 13 ಮಂದಿ ಗ್ರಾಮ ಲೆಕ್ಕಾಧಿಕಾರಿಗಳು ಕಾರ್ಯನಿರ್ವಹಿಸಬೇಕಾದ ಜಾಗದಲ್ಲಿ ಕೇವಲ 7 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇನ್ನುಳಿದ ಸಿಬ್ಬಂದಿ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಇಲ್ಲಿ ಒಬ್ಬರು ಉಪ ತಹಶೀಲ್ದಾರ್, ರಾಜಸ್ವ ನಿರೀಕ್ಷಕ ವಿಷಯ ನಿರ್ವಾಹಕರ ಒಬ್ಬರು, ಇಬ್ಬರು ಆಪರೇಟರ್, ಡಿ-ಗ್ರೂಪ್ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ.
ಸೇವೆಗಳು: ಪ್ರಸ್ತುತ ನಾಡ ಕಚೇರಿಯಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಮಾಸಾಶನ, ಆದಾಯ ಮತ್ತು ಜಾತಿ ಪ್ರಮಾಣಪತ್ರ ಸಹಿತ ಎಲ್ಲಾ ವಿಧವಾದ ದೃಢೀಕರಣ ಪತ್ರಗಳು, ರೈತರಿಗೆ ಪಹಣಿ, ಮುಟೇಷನ್, ಸರ್ವೇ ಪ್ರತಿಗಳು ಸೇವೆ ಲಭಿಸುತ್ತಿದೆ.
ಜಂಗಮಕೋಟೆಯಲ್ಲಿಯ ನಾಡ ಕಚೇರಿಯನ್ನು ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ ಉದ್ಘಾಟಿಸಲಿದ್ದಾರೆ. ಕ್ಷೇತ್ರದ ಶಾಸಕ ವಿ.ಮುನಿಯಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನಸಭೆಯ ಉಪಾಸಭಾಧ್ಯಕ್ಷ ಜೆ.ಕೆ.ಕೃಷ್ಣಾರೆಡ್ಡಿ, ಜಿಪಂ ಅಧ್ಯಕ್ಷ ಹೆಚ್.ವಿ.ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಚೌಡರೆಡ್ಡಿ ತೋಪಲ್ಲಿ, ಸಿ.ಆರ್.ಮನೋಹರ್, ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್, ಜಿಪಂ ಸಿಇಒ ಫೌಝೀಯಾ ತರಾನ್ನುಮ್, ಜಿಪಂ ನಿರ್ಮಲಾ, ತಾಪಂ ಅಧ್ಯಕ್ಷ ಜಿ.ವಿ.ನಾರಾಯಣಸ್ವಾಮಿ, ಜಿಪಂ ಸದಸ್ಯೆ ತನುಜಾ, ಜಂಗಮಕೋಟೆ ಗ್ರಾಪಂ ಅಧ್ಯಕ್ಷೆ ರಹಮತ್ಜಾನ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಗ್ರಾಮಾಂತರ ಪ್ರದೇಶದ ಜನರಿಗೆ ಸುಲಭವಾಗಿ ಸರ್ಕಾರಿ ಸೇವೆಗಳು ಲಭಿಸಬೇಕೆಂಬ ಉದ್ದೇಶದೊಂದಿಗೆ ನಿರ್ಮಿಸಿರುವ ಪರಿಸರ ಸ್ನೇಹಿ ಕಟ್ಟಡದಿಂದ ಮುಂದಿನ ದಿನಗಳಲ್ಲಿ ಉತ್ತಮ ಸೇವೆ ಲಭಿಸಲಿದೆ. ಮಾದರಿ ಕಟ್ಟಡವನ್ನು ನಿರ್ಮಿಸಲು ಬೆಂಗಳೂರಿನ ಐಐಎಸ್ಸಿ ಅವರಿಂದ ತಾಂತ್ರಿಕ ಸಲಹೆ ಪಡೆದು ಕಟ್ಟಡ ನಿರ್ಮಿಸಿದ್ದೇವೆ.
-ಅನಿರುದ್ಧ್ ಶ್ರವಣ್, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ