ಶಿಡ್ಲಘಟ್ಟ ನಗರದಲ್ಲಿ ಪರಿಸರ ಸ್ನೇಹಿ ವಿದ್ಯಾರ್ಥಿನಿಲಯ
Team Udayavani, Dec 7, 2019, 12:39 PM IST
ಶಿಡ್ಲಘಟ್ಟ: ಸಾಮಾನ್ಯವಾಗಿ ಸರ್ಕಾರಿ ಶಾಲೆಗಳು ಮತ್ತು ವಿದ್ಯಾರ್ಥಿನಿಲಯ ಗಳೆಂದರೇ, ಅಲ್ಲಿ ಮೂಲ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತದೆ. ಅವ್ಯವಸ್ಥೆಗಳ ವಿರುದ್ಧ ಪ್ರತಿಭಟಿಸು ವುದು ಸಾಮಾನ್ಯ.
ಆದರೆ ನಗರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯಿಂದ ನಡೆಯುತ್ತಿರುವ ವಿದ್ಯಾರ್ಥಿ ನಿಲಯದಲ್ಲಿ ವ್ಯವಸ್ಥೆಗಳು ಸುಧಾರಣೆ ಕಂಡಿದೆ. ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಗೆ ಬರುವ 2ನೇ ಟಿಎಂಸಿ ಬಡಾವಣೆಯಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿಇಲಾಖೆ ಮತ್ತು ಸರ್ಕಾರದಿಂದ ಜಾರಿ ಗೊಳಿಸುವ ಆದೇಶಗಳು ಮತ್ತು ಸುತ್ತೋಲೆಗಳನ್ವಯ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ.
ಪ್ರವೇಶ ಮಾಡುತ್ತಿದ್ದಂತೆಯೇ ಪರಿಸರ ಸ್ನೇಹಿ ವಾತಾವರಣ ಕಂಡು ಬರುತ್ತದೆ. ಮೇಲ್ವಿ ಚಾರಕಿ ಪೂರ್ಣಿಮಾ ಎಂಬುವರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿ ನಿಲಯವನ್ನು ಮಿನಿ ಉದ್ಯಾನವನವಾಗಿ ಪರಿವರ್ತಿಸಿದ್ದಾರೆ. ಬಗೆ ಬಗೆಯ ಹೂವು ಇನ್ನಿತರೆ ಗಿಡಗಳನ್ನು ನಾಟಿ ಮಾಡಿ ಪೋಷಣೆ ಮಾಡಿದ್ದಾರೆ.
ಸ್ವಚ್ಛತೆಗೆ ಆದ್ಯತೆ: ನಿಲಯದಲ್ಲಿ ಸ್ವತ್ಛತೆ ಕಾಪಾಡಲಾಗಿದೆ. ಶುದ್ಧ ನೀರು ಪೂರೈಕೆ ಮಾಡಲಾಗುತ್ತದೆ. ಕೆಲವೊಮ್ಮೆ ನಗರ ಸಭೆಯಿಂದ ಸರಬರಾಜು ಆಗುವ ನೀರು ಸಾಕಾಗುವುದಿಲ್ಲ. ಟ್ಯಾಂಕರ್ ಮೂಲಕ ನೀರು ತರಿಸಲಾಗುತ್ತದೆ. ಹೈಟೆಕ್ ಮಾದರಿಯಲ್ಲಿ ಪ್ರಾಜೆಕ್ಟರ್ನಲ್ಲಿ ಸಿಲೆಬಸ್ (ಪಠ್ಯಕ್ರಮ ಆಧಾರಿತ) ಮೂಲಕ ಬೋಧನೆ ಮಾಡಲಾಗುತ್ತಿದೆ.
ಸೋಲಾರ್, –ಯುಪಿಎಸ್: ವಿದ್ಯಾರ್ಥಿಗಳಿಗೆ ಸ್ನಾನಕ್ಕೆ ಬಿಸಿನೀರಿಗಾಗಿ ಸೋಲಾರ್ ವಾಟರ್ ಹೀಟರ್, ವಾಟರ್ ಫಿಲ್ಟರ್ ಅಳವಡಿಸಲಾಗಿದೆ. ವಿದ್ಯುತ್ ಕೈಕೊಟ್ಟರೇ ಯುಪಿಎಸ್ ಸೌಲಭ್ಯ ಮತ್ತು ಭದ್ರತೆಗಾಗಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಮಹಿಳಾ ಭದ್ರತಾ ಸಿಬ್ಬಂದಿ ನಿಯೋಜಿಸ ಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆ ಖಾತ್ರಿ ಮಾಡಲು ಬಯೋಮೆಟ್ರಿಕ್ ವ್ಯವಸ್ಥೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ