ಅನಕ್ಷರಸ್ಥರಿಗೂ ವಿದ್ಯಾಭ್ಯಾಸ ಅತ್ಯಗತ್ಯ; ಜಿಲ್ಲಾಧಿಕಾರಿ ನಾಗರಾಜ್‌

ಮುಂದಿನ ದಿನಗಳಲ್ಲಿ ಚಿಕ್ಕಬಳ್ಳಾಪುರವನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯನ್ನಾಗಿಸಬೇಕು

Team Udayavani, Sep 20, 2022, 6:19 PM IST

Udayavani Kannada Newspaper

ಚಿಕ್ಕಬಳ್ಳಾಪುರ: 2022ನೇ ಸಾಲಿಗೆ ಜಿಲ್ಲೆಯಲ್ಲಿ ಸಾಕ್ಷರತೆ ಪ್ರಮಾಣವು ಶೇ.. 83ರಷ್ಟಿದೆ. ಉಳಿದ ಶೇ. 17 ಅನಕ್ಷರಸ್ಥರಿಗೂ ವಿದ್ಯೆ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವ ಗುರಿಯನ್ನು ಜಿಲ್ಲಾಡಳಿತವು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಎನ್‌.ಎಮ್‌.ನಾಗರಾಜ್‌ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಲೋಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನದ ಅಂಗವಾಗಿ ಸೋಮವಾರ ಆಯೋಜಿಸಲಾಗಿದ್ದ ಸಾಕ್ಷರತಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 2022-23 ನೇ ಸಾಲಿನ ಲೋಕ ಶಿಕ್ಷಣ ನಿರ್ದೇಶನಾಲಯವು ಹಮ್ಮಿಕೊಂಡಿರುವ ಸಾಕ್ಷರತಾ ಕಾರ್ಯಕ್ರಮಗಳನ್ನು ಶಿಕ್ಷಣ ಇಲಾಖೆಯು ನಿರ್ವಹಿಸುತ್ತಿದೆ. ಮುಂದಿನ 2 ವರ್ಷಗಳಲ್ಲಿ ಸಾವಿರ
ಗ್ರಾಪಂಗಳನ್ನು ಸಂಪೂರ್ಣ ಸಾಕ್ಷರತಾ ಗ್ರಾಪಂಗಳನ್ನಾಗಿ ಮಾಡಲಾಗುವುದು. ಈ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ 14 ಗ್ರಾಪಂಗಳಲ್ಲಿನ ಅನಕ್ಷರಸ್ಥರಿಗೆ ಸಾಕ್ಷರತೆ
ನೀಡಿ ಸಂಪೂರ್ಣ ಸಾಕ್ಷರತಾ ಗ್ರಾಮಗಳನ್ನಾಗಿಸಲು ಯೋಜಿಸಲಾಗಿದೆ ಎಂದರು.

ಔಪಚಾರಿಕ ಶಿಕ್ಷಣವನ್ನು ಪಡೆಯದ, 15 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳನ್ನು ಗುರುತಿಸಿ ನವಸಾಕ್ಷರರನ್ನಾಗಿ ಮಾಡುವುದೇ ಈ ದಿನಾಚರಣೆ ಉದ್ದೇಶವಾಗಿದೆ. ಎಲ್ಲರನ್ನೂ ಸಾಕ್ಷರರನ್ನಾಗಿ ಅವರ ಜೀವನಮಟ್ಟವನ್ನು ಸುಧಾರಿಸುವ ಹಾಗೂ ಸಾಕ್ಷರತೆಯ ಕುರಿತು ಪ್ರತಿಯೊಂದು ಗ್ರಾಮ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಶಿಕ್ಷಣದ ಮಹತ್ವವನ್ನು ಅರಿವು ಮೂಡಿಸಬೇಕು. ಮುಂದಿನ ದಿನಗಳಲ್ಲಿ ಚಿಕ್ಕಬಳ್ಳಾಪುರವನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯನ್ನಾಗಿಸಬೇಕು ಎಂದು ಕೋರಿದರು.

ಜಿಲ್ಲಾ ಕಸಾಪ ಅಧ್ಯಕ್ಷರಾದ ಕೋಡಿರಂಗಪ್ಪ ಮಾತನಾಡಿದರು. ಸಾಕ್ಷರತಾ ದಿನಾಚರಣೆಯ ಸಾಕ್ಷರತೆಯ ಕಲಿಕೆಯ ಸ್ಥಳಗಳನ್ನು ಪರಿವರ್ತಿಸುವುದು ಎಂಬ ಈ ವರ್ಷದ ಘೋಷವಾಕ್ಯವಾಗಿದೆ. ಕಲಿಕೆ ಬಲಗೊಳಿಸಿ ಉಳಿಸಬೇಕಾಗಿದೆ ಎಂಬ ಆಶಯದೊಂದಿಗೆ ಸಾಕ್ಷರತೆ ದಿನಾಚರಣೆಯನ್ನು
ಆಚರಿಸಲಾಗುತ್ತಿದೆ ಎಂದರು.

ಭಾರತ ರತ್ನ ಪುರಸ್ಕೃತರಾದ ಸರ್‌ ಎಂ.ವಿಶ್ವೇಶ್ವರಯ್ಯ, ಸಿ.ಎನ್‌.ರಾವ್‌ ಹಾಗೂ ಶಿಕ್ಷಣ ತಜ್ಞ ಎಚ್‌.ನರಸಿಂಹಯ್ಯ ಇವರುಗಳು ಶಿಕ್ಷಣದಿಂದ ಅಪಾರ ಸಾಧನೆಗೈದಿದ್ದಾರೆ. ಇವರ ಮಾರ್ಗದರ್ಶನದಲ್ಲಿ ತಾವೆಲ್ಲರೂ ನಡೆಯಬೇಕು. ಸಾಕ್ಷರತೆಯನ್ನು ಹೆಚ್ಚಿಸಲು ಜಿಲ್ಲಾಡಳಿತವು ಉತ್ತಮ ಸಹಕಾರ ನೀಡುತ್ತಿದೆ. ಪ್ರತಿಯೊಬ್ಬರು ಪುಸ್ತಕ ಹಾಗೂ ದಿನಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು ಸಾಕ್ಷರತಾ ಪ್ರತಿಜ್ಞಾವಿಧಿ ಬೋಧಿಸಿ ಪ್ರತಿಜ್ಞೆ ಮಾಡಿದರು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಮುನಿಕೆಂಚೇಗೌಡ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಆಂಜನೇಯ ಇತರರಿದ್ದರು.

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕರೆತನ್ನಿ
ಆಧುನಿಕ ಕಾಲದಲ್ಲಿಯೂ ನಾನಾ ರೀತಿ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಯಾವುದೇ ಮಕ್ಕಳು ಶಾಲೆಯಿಂದ ಹೊರಗುಳಿಯಬಾರದು. ಪ್ರತಿಯೊಬ್ಬರಿಗೂ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯ ದೊರೆಯಬೇಕಾಗಿದೆ. ಗ್ರಾಪಂ ಹಾಗೂ ನಗರದ ವಾರ್ಡ್‌ಗಳ ಮಟ್ಟದಲ್ಲಿ ಘಟಕಗಳನ್ನಾಗಿ ವಿಭಜಿಸಿಕೊಂಡು ಸಣ್ಣ ಗುರಿಗಳ ಮೂಲಕ ಶಿಕ್ಷಣದಿಂದ ಹೊರಗುಳಿದವರನ್ನು ಗುರ್ತಿಸಿ ಶಾಲೆಗೆ ಕರೆತರುವ ಕೆಲಸ ಸಂಬಂಧಪಟ್ಟ ಅಧಿಕಾರಿಗಳು ಮಾಡಬೇಕು ಎಂದು ಜಿಲ್ಲಾಧಿಕಾರಿ ನಾಗರಾಜ್‌ ಸೂಚಿಸಿದರು.

ಟಾಪ್ ನ್ಯೂಸ್

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.