ಅಭಿವೃದ್ಧಿಗೆ ಶಿಕ್ಷಣವೇ ಮಾನದಂಡ


Team Udayavani, Jan 29, 2020, 3:00 AM IST

abhivruddige

ಚಿಕ್ಕಬಳ್ಳಾಪುರ: ಕೇವಲ ಶಸ್ತ್ರಾಸಗಳ ಸಂಗ್ರಹ, ಗಗನಚುಂಬಿ ಕಟ್ಟಡಗಳು ಮತ್ತು ಬೆಲೆಬಾಳುವ ಕಾರುಗಳು ಅಭಿವೃದ್ಧಿಯ ನಿಜವಾದ ಮಾನದಂಡಗಳಲ್ಲ. ಅಭಿವೃದ್ಧಿಯು ಆ ದೇಶದ ಜನತೆಯ ಬುದ್ಧಿ ಮತ್ತು ಭಾವನೆಗಳನ್ನು ಅವಲಂಬಿಸಿದ್ದು, ಜನೆತೆಗೆ ಎಂತಹ ಶಿಕ್ಷಣ ನೀಡಲಾಗುತ್ತಿದೆ ಎಂಬುದರ ಮೇಲೆ ದೇಶದ ಅಭಿವೃದ್ಧಿ ಆಧಾರ ಪಡುತ್ತದೆ ಎಂದು ತುಮಕೂರಿನ ರಾಮಕೃಷ್ಣ-ವಿವೇಕಾನಂದ ಆಶ್ರಮದ ಸಂಸ್ಥಾಪಕ ಅಧ್ಯಕ್ಷ ವೀರೇಶಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ತಾಲೂಕಿನ ಪೆರೇಸಂದ್ರದ ಶಾಂತ ಸಮೂಹ ಶಿಕ್ಷಣ ಸಂಸ್ಥೆಯ 9 ನೇ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ಆವಿಷ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಜಪಾನ್‌ ದೇಶವು ಪ್ರತಿಯೊಬ್ಬ ವ್ಯಕ್ತಿಗೂ ಉತ್ತಮ ಶಿಕ್ಷಣ ನೀಡುತ್ತಿರುವುದರಿಂದ ಆ ದೇಶದ ಪ್ರತಿಯೊಬ್ಬ ಪ್ರಜೆಯು ದೇಶದ ಅಭಿವೃದ್ಧಿಗೆ ವೈಯಕ್ತಿಕ ಕೊಡುಗೆ ನೀಡುತ್ತಾನೆ. ಅಲ್ಲಿನ ಶಿಕ್ಷಣ ಅವನನ್ನು ದೇಶದ ಅಭಿವೃದ್ಧಿಯ ನೇರ ಹೊಣೆಗಾರನ್ನನಾಗಿ ರೂಪಿಸುತ್ತದೆ. ಹೀಗಾಗಿಯೇ ಎರಡನೇ ವåಹಾಯುದ್ಧದಲ್ಲಿ ಬಾಂಬುಗಳ ದಾಳಿಗೆ ಸಿಕ್ಕಿ ಛಿದ್ರವಾಗಿದ್ದ ಜಪಾನ್‌ ಕೆಲವೇ ದಶಕಗಳಲ್ಲಿ ಅಭಿವೃದ್ಧಿಯ ಮುಂಚೂಣಿಗೆ ಬಂದಿದೆ ಎಂದರು.

ಮಾಹಿತಿ ಸಂಗ್ರಹ ಶಿಕ್ಷಣವಲ್ಲ: ಆವಿಷ್ಕಾರ್‌ ಎಂದರೆ ಸೃಜನಶೀಲತೆಯಿಂದ ಹೊಸದನ್ನು ಹುಡುಕುವುದು, ಅನ್ವೇಷಕ ಮನಸ್ಸಿನಿಂದ ಜಗತ್ತನು ನೋಡುವ ಮನಸ್ಸು ಮತ್ತು ಕಣ್ಣುಗಳು. ಬರೀ ಮಾಹಿತಿ ಸಂಗ್ರಹ ಶಿಕ್ಷಣವಲ್ಲ, ಏಕಾಗ್ರತೆ ಮತ್ತು ಮನಸ್ಸಿನ ವಿಕಾಸ ನಿಜವಾದ ಶಿಕ್ಷಣವಾಗಿದ್ದು ಅಂತಹ ಮಾನವ ನಿರ್ಮಾಣ ಮತು ರಾಷ್ಟ್ರ ನಿರ್ಮಾಣ ಶಿಕ್ಷಣವನ್ನು ವಿವೇಕಾನಂದರು ಪ್ರತಿಪಾದಿಸಿದ್ದಾರೆ. ಎಲ್ಲಾ ಶಾಲೆಗಳು ಮತ್ತು ಶಿಕ್ಷಕರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು. ಶಿಕ್ಷಣವು ಕೇವಲ ಮನುಷ್ಯನ ಶರೀರ ವಿಕಾಸಕ್ಕೆ ಸೀಮಿತವಲ್ಲ, ಮನುಷ್ಯ ಕೇವಲ ಜೈವಿಕ ಅಂಶವಲ್ಲ, ಅವನು ಮನೋ ಸಾಮಾಜಿಕ ವಿಷಯಗಳಲ್ಲಿ ವಿಕಾಸವಾಗಿ ಅಭಿವೃದ್ಧಿ ಸಾಧಿಸುತ್ತಾನೆ. ಆದ್ದರಿಂದ ಜೀವನವು ಅರ್ಧ ಸತ್ಯದಿಂದ ಪೂರ್ಣ ಸತ್ಯದ ಕಡೆಗೆ ವಿಕಾಸವಾಗಬೇಕು ಎಂದರು.

ಪೋಷಕರೇ ನಿಜವಾದ ಹೀರೋಗಳು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶೆ ಕೆ.ಎನ್‌.ರೂಪಾ, ಮಕ್ಕಳಿಗೆ ತಂದೆ ತಾಯಿಯೇ ಹಿರೋಗಳು. ಪೋಷಕರಿಗೆ ಮಕ್ಕಳ ಉತ್ತಮ ಭವಿಷ್ಯವೇ ಜೀವನದ ಸರ್ವಸ್ವ, ಅವರು ಮಕ್ಕಳಿಗೆ ತಮ್ಮ ಕಷ್ಟಗಳನ್ನು ಹೇಳುವುದಿಲ್ಲ. ಬದಲಾಗಿ ಮಕ್ಕಳಿಗೆ ಉತ್ತಮ ಭವಿಷ್ಯಕಟ್ಟಿ ಕೊಡುವ ಕನಸು ಹೊಂದಿರುತ್ತಾರೆ ಎಂದರು.

ಮಿಸ್‌ ಕರ್ನಾಟಕ-2016 ಶುಭ ಶ್ರೀರಾಮ ಮಾತನಾಡಿ, ಹಣ ಸಂಪಾದನೆ ಹಾಗೂ ಹೆಸರು ಗಳಿಕೆಯೇ ಜೀವನವಲ್ಲ. ಬದಲಾಗಿ ಸಹ ಮಾನವರ ಬಗ್ಗೆ ಪ್ರೀತಿ, ಕಾರುಣ್ಯ ಅನುಭೂತಿ ಹೊಂದಬೇಕು. ನಮ್ಮಲ್ಲಿರುವ ಪ್ರೀತಿ, ಕರುಣೆ ಮತ್ತು ಬುದ್ಧಿವಂತಿಕೆಯನ್ನು ಸಹ ಹಂಚಿಕೊಂಡರೆ ಅವು ಹಿಮ್ಮಡಿಸುತ್ತವೆ ಮತ್ತು ಇಡೀ ಸಮಾಜಕ್ಕೆ ತಲುಪುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಡಾ.ಕೆ.ಸುಧಾಕರ್‌, ಉಪ ವಿಭಾಗಾಧಿಕಾರಿ ಎ.ಎನ್‌.ಘುನಂದನ್‌ ಮತ್ತು ಮಿಸ್‌ ಕರ್ನಾಟಕ ಗೌರವ ಹೊಂದಿರುವ ಗಾಯತ್ರಿ ಸಂದೀಪ್‌, ಮಕ್ಕಳಿಗೆ ಅಧ್ಯಯನಶೀಲತೆ ಬಗ್ಗೆ ಹೇಳಿ ನೆನಪಿನ ಕಾಣಿಕೆಗಳನ್ನು ವಿತರಿಸಿದರು. ಡಾ.ಪ್ರೀತಿ ಸುಧಾಕರ್‌ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ.ಕೋಡಿರಂಗಪ್ಪ, ಪೆರೇಸಂದ್ರ ಗ್ರಾಪಂ ಅಧ್ಯಕ್ಷ ಚನ್ನಕೃಷ್ಣಾರೆಡ್ಡಿ, ಪ್ರಾಧ್ಯಾಪಕರಾದ ಅಜೀಷ್‌, ಪೊ›.ಹನುಮಂತರೆಡ್ಡಿ, ದೀಪಕ್‌ ಮ್ಯಾಥ್ಯೂ, ನಸರೀನ್‌ತಾಜ್‌, ಮಮತಾ ಮತ್ತಿತರರು ಇದ್ದರು.

ರಾಷ್ಟ್ರವು ಕೇವಲ ಭೌಗೋಳಿಕ ಪರಿಕಲ್ಪನೆಯಲ್ಲ. ರಾಷ್ಟ್ರವನ್ನು ಭಾವನಾತ್ಮಕ ನೆಲೆಯಿಂದ ಗುರುತಿಸಬೇಕು. ಭಾರತದಲ್ಲಿ ಪ್ರಸ್ತುತ ಪೌರತ್ವ ಕಾನೂನು ಬಗ್ಗೆ ವಿರೋಧ ಮತ್ತ ಪರ ಪ್ರತಿಭಟನೆಗಳು ನಡೆದಿವೆ. ಜನತೆಯು ನಿಜ ಪೌರತ್ವವನ್ನು ಅರ್ಥ ಮಾಡಿಕೊಂಡು ಬಾಳಿದರೆ ದೇಶಕ್ಕೆ ಘನತೆ ಬರುತ್ತದೆ.
-ವೀರೇಶಾನಂದ ಸರಸ್ವತಿ ಸ್ವಾಮೀಜಿ, ತುಮಕೂರಿನ ರಾಮಕೃಷ್ಣ-ವಿವೇಕಾನಂದ ಆಶ್ರಮದ ಸಂಸ್ಥಾಪಕ ಅಧ್ಯಕ್ಷ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.