4 ಗ್ರಾಪಂ ಸೇರಿ 54 ಸಾನಗಳಿಗೆ ಚುನಾವಣೆ


Team Udayavani, Dec 13, 2018, 3:54 PM IST

chikk-2.jpg

ಚಿಕ್ಕಬಳ್ಳಾಪುರ: ಐದು ವರ್ಷಗಳ ಅಧಿಕಾರ ಅವಧಿ ಮುಕ್ತಾಯಗೊಂಡಿರುವ ಜಿಲ್ಲೆಯ 4 ಗ್ರಾಪಂಗಳ ಒಟ್ಟು 48 ಸದಸ್ಯ ಸ್ಥಾನಗಳಿಗೆ ಹಾಗು ವಿವಿಧ ಕಾರಣಗಳಿಗೆ ತೆರವಾಗಿರುವ ವಿವಿಧ ಗ್ರಪಂಗಳ 6 ಸದಸ್ಯ ಸ್ಥಾನಗಳಿಗೆ ಉಪ ಚುನಾವಣಾ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾ ಪಟ್ಟಿ ಪ್ರಕಟಿಸಿದ್ದು, ಮುಂದಿನ ತಿಂಗಳ ಹೊಸ ವರ್ಷದ ಜನವರಿ 2 ರಂದು ಒಟ್ಟು 54 ಗ್ರಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

4 ಗ್ರಾಪಂ ಎಲ್ಲಲ್ಲಿ? ಅವಧಿ ಮುಗಿದ ಗ್ರಾಪಂಗಳ ಪೈಕಿ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಭಕ್ತರಹಳ್ಳಿ ಗ್ರಾಪಂನಲ್ಲಿ ಒಟ್ಟು 10 ಸದಸ್ಯ ಕ್ಷೇತ್ರಗಳು, ಮಳಮಾಚನಹಳ್ಳಿ ಗ್ರಾಪಂ (14), ಹೊಸಪೇಟೆ ಗ್ರಾಪಂ (17) ಹಾಗೂ ನಾಗಮಂಗಲ ಗ್ರಾಪಂ (7) ಸದಸ್ಯ ಸ್ಥಾನಗಳು ಸೇರಿ ಒಟ್ಟು 48 ಗ್ರಾಪಂ ಸದಸ್ಯ ಸ್ಥಾನಗಳಿಗೆ ಜನವರಿ 2 ರಂದು ಚುನಾವಣೆ ನಡೆಯಲಿದೆಯೆಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಅನಿರುದ್ದ ಶ್ರವಣ್‌ ತಿಳಿಸಿದ್ದಾರೆ.

6 ಕ್ಷೇತ್ರಗಳಿಗೆ ಉಪ ಚುನಾವಣೆ: ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ತೆರವಾಗಿರುವ ಒಟ್ಟು 6 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಆ ಪೈಕಿ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲಕಾಪುರ ಗ್ರಾಪಂನ ನಂದಿಗಾನಹಳ್ಳಿ ಕ್ಷೇತ್ರ, ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿ ಗ್ರಾಪಂ ಗೊಲ್ಲಹಳ್ಳಿ ಕ್ಷೇತ್ರ, ಚಿಂತಾಮಣಿ ತಾಲೂಕಿನ ಊಲವಾಡಿ ಗ್ರಾಪಂಯ ಬೂರಗಮಾಕಲಹಳ್ಳಿ ಕ್ಷೇತ್ರ, ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿ ಗ್ರಾಪಂನ ಜಂಬಿಗೇಮರದಹಳ್ಳಿ ಮತ್ತು ಸೋಮೇಶ್ವರ ಕ್ಷೇತ್ರಗಳಿಗೆ ಹಾಗೂ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೇವರಗುಡಿಪಲ್ಲಿ ಕ್ಷೇತ್ರ ಸೇರಿ ಒಟ್ಟು 06 ಸದಸ್ಯ ಸ್ಥಾನಗಳನ್ನು ತುಂಬುವ ಸಲುವಾಗಿ ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.
 
ಚುನಾವಣಾ ವೇಳಾ ಪಟ್ಟಿ ಹೀಗಿದೆ: ಡಿ.17 ರಿಂದ 20ರ ಮದ್ಯಾಹ್ನ 3 ಗಂಟೆಯವರೊ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಬಹುದಾಗಿದೆ. ಡಿ.21 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ಡಿ.24 ರಂದು ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ, ಅವಶ್ಯಕತೆ ಇದ್ದಲ್ಲಿ ಜನವರಿ 2 ರಂದು ಬೆಳಗ್ಗೆ 7.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಮತದಾನ ನಡೆಯಲಿದೆಯೆಂದು ಡೀಸಿ ಅನಿರುದ್‌ಶ್ರವಣ್‌ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಜ. 2 ರಂದು ನಡೆಯುವ ವಿವಿಧ ಗ್ರಾಪಂಗಳ ಚುನಾವಣೆಯ ಮತ ಎಣಿಕೆಯನ್ನು ಆಯಾ ತಾಲೂಕು ಕೇಂದ್ರಗಳಲ್ಲಿ ಜನವರಿ 4 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ನಡೆಸಿ ಎಣಿಕೆ ಬಳಿಕ ಫ‌ಲಿತಾಂಶ ಪ್ರಕಟಗೊಳ್ಳಲಿದೆ.

ಜಿಲ್ಲೆಯಲ್ಲಿ ಅವಧಿ ಮುಗಿಯಲಿರುವ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿ, ಮಳಮಾಚನಹಳ್ಳಿ, ಹೊಸಪೇಟೆ ಮತ್ತು ನಾಗಮಂಗಲ ಒಟ್ಟು 48 ಸದಸ್ಯ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆ ಹಾಗು ವಿವಿಧ ಕಾರಣಗಳಿಂದ ತೆರವಾಗಿರುವ 6 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ಜನವರಿ 2 ರಂದು ನಿಗಧಿಪಡಿಸಲಾಗಿದೆ. ಜ.4ಕ್ಕೆ ಚುನಾವಣಾ ಫ‌ಲಿತಾಂಶ ಹೊರ ಬರಲಿದೆ. ಈ ಬಾರಿ ಅವಧಿ ಮುಗಿದ ಗ್ರಾಪಂಗಳಲ್ಲಿ ಮಲ್ಟಿಚಾಯ್ಸ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಿ ಚುನಾವಣೆ ನಡೆಸಲಾಗುತ್ತಿದೆ. 
ಅನಿರುದ್ಧ ಶ್ರವಣ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.