ಚಿಕ್ಕಬಳ್ಳಾಪುರ ಸಮಗ್ರ ಅಭಿವೃದ್ಧಿಗೆ ಒತ್ತು; ಸಚಿವ ಡಾ.ಕೆ.ಸುಧಾಕರ್‌

ರಾಜ್ಯದಲ್ಲಿ 40 ಸಾವಿರ ಕೈ ಮಗ್ಗ ಹಾಗೂ 1.20 ಲಕ್ಷ ವಿದ್ಯುತ್‌ ಮಗ್ಗಗಳಿವೆ

Team Udayavani, May 20, 2022, 6:19 PM IST

ಚಿಕ್ಕಬಳ್ಳಾಪುರ ಸಮಗ್ರ ಅಭಿವೃದ್ಧಿಗೆ ಒತ್ತು; ಸಚಿವ ಡಾ.ಕೆ.ಸುಧಾಕರ್‌

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ಪರಿಕಲ್ಪನೆಗೆ ಪೂರಕವಾಗಿ, ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ಯಲ್ಲಿ ವಿಶ್ವದರ್ಜೆಯ ಜವಳಿ ಪಾರ್ಕ್‌ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಮನವಿ ಸಲ್ಲಿಸಿದ್ದಾರೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್‌ ಗೋಯಲ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಚಿವರು ಕರ್ನಾಟಕವು, ದೇಶದ ಒಟ್ಟು ಕಚ್ಚಾ ರೇಷ್ಮೆ ಉತ್ಪಾದನೆಯಲ್ಲಿ ಶೇ.65, ಉಣ್ಣೆ ಉತ್ಪಾದನೆಯಲ್ಲಿ ಶೇ.12, ಹತ್ತಿಯಲ್ಲಿ ಶೇ.6 ರಷ್ಟು ಪಾಲು ಹೊಂದಿದೆ. ರಾಜ್ಯದಲ್ಲಿ 40 ಸಾವಿರ ಕೈ ಮಗ್ಗ ಹಾಗೂ 1.20 ಲಕ್ಷ ವಿದ್ಯುತ್‌ ಮಗ್ಗಗಳಿವೆ. ವಸ್ತ್ರೋದ್ಯಮದಲ್ಲಿ ರಾಜ್ಯವು ಮುಂಚೂಣಿಯಲ್ಲಿದ್ದು, ಭಾರತದ ಗಾರ್ಮೆಂಟ್‌ ರಾಜಧಾನಿ ಎಂಬ ಖ್ಯಾತಿ ಹೊಂದಿದೆ. ಈ
ಉದ್ಯಮವನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ‘ನೂತನ ಟೆಕ್ಸ್‌ ಟೈಲ್‌ ಮತ್ತು ಗಾರ್ಮೆಂಟ್‌ ನೀತಿ 2019-24’ ಜಾರಿ ಮಾಡಿದೆ. ಮುಂದಿನ 5 ವರ್ಷಗಳಲ್ಲಿ 10,000 ಕೋಟಿ ರೂ. ಹೂಡಿಕೆಯೊಂದಿಗೆ 5 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿಯನ್ನು ಈ ನೀತಿ ಹೊಂದಿದೆ ಎಂದು ಸಚಿವರು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯು ರೇಷ್ಮೆ ಉತ್ಪಾದನೆಯಲ್ಲಿ ಪ್ರಮುಖ ಸ್ಥಾನ ಹೊಂದಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಹಾಗೂ ರಾಷ್ಟ್ರೀಯ ಹೆದ್ದಾರಿ ಹೊಂದಿರುವ ಜಿಲ್ಲೆಯು, ರೇಷ್ಮೆ ಕೃಷಿ ಕಾಲೇಜನ್ನೂ ಒಳಗೊಂಡಿದೆ. ಜತೆಗೆ ವಸ್ತ್ರೋದ್ಯಮದ ಕೌಶಲ್ಯ ಹೊಂದಿ ದವರೂ ಇಲ್ಲಿದ್ದಾರೆ. ಈ ಎಲ್ಲ ಕಾರಣಗಳಿಂದ ಜಿಲ್ಲೆಯ ಮಂಚೇನ ಹಳ್ಳಿಯು ಜವಳಿ ಪಾರ್ಕ್‌ ಸ್ಥಾಪಿಸಲು ಸೂಕ್ತವಾದ ತಾಣವಾಗಿದೆ. ಈ ಕುರಿತು ಕ್ರಮ ವಹಿಸಬೇಕೆಂದು ಸಚಿವರು ಕೋರಿದ್ದಾರೆ.

ಹತ್ತಿ ಹಾಗೂ ರೇಷ್ಮೆಯಿಂದ ನೂಲು, ನೂಲಿನಿಂದ ವಸ್ತ್ರೋದ್ಯಮ ಹಾಗೂ ಫ್ಯಾಶನ್‌ ಕ್ಷೇತ್ರದ ಬೆಳವಣಿಗೆ ಹಾಗೂ ಈ ಮೂಲಕ ರಫ್ತು ವಹಿವಾಟು ನಡೆಸುವ ಮಟ್ಟಿಗೆ ಕೈಗಾರಿಕಾ ವಲಯ ಬೆಳೆಸಲು ಈ ಪಾರ್ಕ್‌ ಸ್ಥಾಪನೆ ನಾಂದಿ ಹಾಡಲಿದೆ. ಕೃಷಿ ಭೂಮಿಯಿಂದ ಆರಂಭವಾಗಿ ಮಾರುಕಟ್ಟೆಯವರೆಗೆ ಮೌಲ್ಯವರ್ಧನೆಯ ಎಲ್ಲಾ ಹಂತಗಳನ್ನು ಒಂದೆಡೆ ತರುವ ಜವಳಿ ಪಾರ್ಕ್‌ ಇದಾಗಲಿದೆ ಎಂದು ಸಚಿವರು ತಿಳಿಸಿದರು.

ಸ್ಮಾರ್ಟ್‌ ಸ್ಯಾಟ್ಲೆ ಟ್‌ ಟೌನ್‌: ಬೆಂಗಳೂರು ನಗರದ ಉಪನಗರವಾಗಿ ಚಿಕ್ಕಬಳ್ಳಾಪುರ ಅಭಿವೃದ್ಧಿಪಡಿಸಲು ‘ಸ್ಮಾರ್ಟ್‌ ಸ್ಯಾಟ್ಲೆ ಟ್‌ ಟೌನ್‌’ ಪ್ರಾಯೋಗಿಕ ಯೋಜನೆಯನ್ನು ಜಾರಿ ಮಾಡಲು ಸಚಿವ ಡಾ.ಕೆ. ಸುಧಾಕರ್‌ ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿದ್ದಾರೆ. ಕೇಂದ್ರ ನಗರ ವ್ಯವಹಾರಗಳ ಸಚಿವ ಹದೀìಪ್‌ ಸಿಂಗ್‌ ಪುರಿ ಅವರನ್ನು ಭೇಟಿ ಮಾಡಿದ ಸಚಿವ ಡಾ.ಕೆ.ಸುಧಾಕರ್‌, ಈ ಕುರಿತು ಚರ್ಚೆ ನಡೆಸಿದರು. ಚಿಕ್ಕಬಳ್ಳಾಪುರ ಬೆಂಗಳೂರು ನಗರಕ್ಕೆ ಸಮೀಪದಲ್ಲಿದ್ದು, ಇದನ್ನು ಸ್ಯಾಟ್ಲೆಟ್‌ ಟೌನ್‌ ಆಗಿ ಅಭಿವೃದ್ಧಿಪಡಿಸಬಹುದು. ಇದಕ್ಕಾಗಿ ಪ್ರಾಯೋಗಿಕ ಯೋಜನೆ ಮಾಡಬಹುದು ಎಂದು ಸಚಿವ ಡಾ.ಕೆ. ಸುಧಾಕರ್‌, ಕೇಂದ್ರ ಸಚಿವರಿಗೆ ತಿಳಿಸಿದರು.ಇದೇ ವೇಳೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಅವರನ್ನು ಸಚಿವ ಡಾ.ಕೆ.ಸುಧಾಕರ್‌ ಭೇಟಿ ಮಾಡಿ ಮಾತುಕತೆ ನಡೆಸಿದರು.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.