ಒತ್ತುವರಿಯಾಗಿದ್ದ ಕೆರೆ ಪ್ರದೇಶ ತೆರವು


Team Udayavani, Jun 26, 2019, 3:00 AM IST

ottuvari

ಚಿಂತಾಮಣಿ: ಕಂದಾಯ ಇಲಾಖೆಯಲ್ಲಿನ ದಾಖಲೆಗಳ ಅನುಸಾರ ಕೆರೆ ಒತ್ತುವರಿ ಮಾಡಿಕೊಂಡಿದ್ದು, ಒತ್ತುವರಿದಾರರಿಗೆ ತೆರವು ಮಾಡುವಂತೆ ಎಚ್ಚರಿಕೆ ನೀಡಿ ನೋಟಿಸ್‌ ನೀಡಿದ್ದರೂ ತೆರವು ಮಾಡದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್‌ ಅಧಿಕಾರಿಗಳು ಕೆರೆ ಪ್ರದೇಶ ಒತ್ತುವರಿ ತೆರವು ಮಾಡಿದ ಪ್ರಸಂಗ ನಡೆಯಿತು.

ಕಸಬಾ ಹೋಬಳಿ ಬುಕ್ಕನಹಳ್ಳಿ ಸರ್ವೇ ನಂ.54 ರಲ್ಲಿ 13.3 ಎಕರೆ ಪ್ರದೇಶದಲ್ಲಿ ಕೆರೆ ಇದ್ದು ಅದರಲ್ಲಿ ಬುಕ್ಕನಹಳ್ಳಿಯ ರಾಮರೆಡ್ಡಿ ಎಂಬುವವರು 10 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡು ವ್ಯವಸಾಯ ಮಾಡಿಕೊಂಡಿದ್ದರು.

ಕೃಷಿಹೊಂಡ ಮುಚ್ಚಿದ ಅಧಿಕಾರಿಗಳು: ಒತ್ತುವರಿ ಪ್ರದೇಶದಲ್ಲಿ ಕೃಷಿ ಹೊಂಡ ನಿರ್ಮಿಸಿಕೊಂಡಿದ್ದರು. ಒತ್ತುವರಿ ಆಗಿರುವುದನ್ನು ಕಂದಾಯ, ಸರ್ವೆ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ಕೆಲ ದಿನಗಳ ಹಿಂದೆ ತೆರವು ಮಾಡಲು ಹೋದಾಗ ರಾಮರೆಡ್ಡಿ ಸಮವಾಯಕಾಶ ನೀಡಿ, ನಾವೇ ಸ್ವಯಂ ಪ್ರೇರಿತವಾಗಿ ತೆರವುಗೊಳಿಸುತ್ತವೆ ಎಂದು ಹೇಳಿದ್ದರು. ಆದರೆ ಸಮಯವಾಕಾಶ ಮುಗಿದಿದ್ದರೂ ತೆರವು ಮಾಡದ ಪರಿಣಾಮ ಅಧಿಕಾರಿಗಳು ಮತ್ತು ಪೊಲೀಸರೊಂದಿಗೆ ತೆರಳಿ ಜೆಸಿಬಿಯಿಂದ ಕೃಷಿಹೊಂಡ ಮುಚ್ಚಿಸಿದರು.

ಕ್ರಮ ಕೈಗೊಳ್ಳಲಿ: ಸದರಿ ಕೆರೆ ಪ್ರದೇಶದ ಸರ್ವೆ ನಂ 54 ಪಹಣಿಯಲ್ಲಿ ಸರ್ಕಾರಿ ಜಮೀನೆಂದು ದಾಖಲಾಗಿದ್ದರೂ ಕೃಷಿ ಇಲಾಖೆ ಅಧಿಕಾರಿಗಳು ಸದರಿ ಜಾಗದಲ್ಲಿ ಕೃಷಿಹೊಂಡ ನಿರ್ಮಿಸಿರುವ ಪರಿಯನ್ನು ಗಮನಿಸಿದರೆ ಅಧಿಕಾರಿಗಳು ಎಷ್ಟರ ಮಟ್ಟಿಗೆ ದಾಖಲೆ ಪರಿಶೀಲನೆ ಮಾಡಿದ್ದಾರೆ ಎಂಬುದಕ್ಕೆ ಹಿಡಿದ ಕೈಗನ್ನಡಿ.

ಕೃಷಿಹೊಂಡ ನಿರ್ಮಾಣ ಮಾಡಿದರೆ ರೈತರಿಗೆ ಸರ್ಕಾರದ ವತಿಯಿಂದ ದೊರೆಯುವ ಹಣ ಒತ್ತುವರಿದಾರನ ಜೇಬು ಸೇರಿದೆಯೋ ಅಥವಾ ಅಧಿಕಾರಿಗಳ ಜೇಬು ಸೇರಿದೆಯೋ ಎಂಬುದು ಹಿರಿಯ ಅಧಿಕಾರಿಗಳ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಒತ್ತುವರಿ ಜಾಗದಲ್ಲಿ 2 ಕೊಳವೆ ಬಾವಿ: ಒತ್ತುವರಿಯಾಗಿರುವ ಬುಕ್ಕನಹಳ್ಳಿ ಕೆರೆ ಅಂಗಳ ಪ್ರದೇಶದಲ್ಲಿ 2 ಕೊಳವೆ ಬಾವಿಗಳನ್ನು ಕೊರೆದಿದ್ದು, ಕೊರೆಯಬೇಕಾದರೆ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸದಿರುವುದು ಅಧಿಕಾರಿಗಳ ಮತ್ತೂಂದು ಬೇಜಾವಬ್ದಾರಿಗೆ ಹಿಡಿದ ಕನ್ನಡಿಯಾಗಿದೆ.

ರಾಜಕೀಯ ಮುಖಂಡರಿಂದ ಒತ್ತುವರಿ: ಒತ್ತುವರಿ ಮಾಡಿಕೊಂಡಿರುವ ರಾಮರೆಡ್ಡಿ ಮಾತನಾಡಿ, ಕೆರೆಯ ಪಕ್ಕದಲ್ಲಿನ ಸರ್ವೆ ನಂ 51,57, ಮತ್ತು 58ರ ಖಾಸಗಿ ಜಮೀನಿನವರಿಗೆ ತಮ್ಮ ಜಮೀನಿಗೆ ಹಾದು ಹೋಗಲು ಸೂಕ್ತ ದಾರಿ ಇಲ್ಲದಾಗಿದ್ದು, ನಮ್ಮ ಜಮೀನುಗಳಿಗೆ ದಾರಿ ಮಾಡಿಕೊಡಿ ಎಂದು ಕಳೆದ ಒಂದು ವರ್ಷದಿಂದ ತಹಶೀಲ್ದಾರ್‌ ಮತ್ತು ಜಿಲ್ಲಾಧಿಕಾರಿಗಳಿಗೆ ಪತ್ರದ ಮೂಲಕ ವಿನಂತಿಸಿಕೊಂಡಿದ್ದರೂ ಕ್ರಮ ಕೈಗೊಂಡಿಲ್ಲ.

ಬುಕ್ಕನಹಳ್ಳಿ ವ್ಯಾಪ್ತಿಯಲ್ಲಿ ಮತ್ತೂಂದು ಕೆರೆ ಪ್ರದೇಶವಿದ್ದು, ಅದರಲ್ಲಿ ಹಿರಿಯ ರಾಜಕೀಯ ಮುಖಂಡರೊಬ್ಬರು ಇದೇ ರೀತಿ ಕೆರೆ ಒತ್ತುವರಿ ಮಾಡಿಕೊಂಡು ಕೃಷಿಹೊಂಡ ಮತ್ತು ಕೊಳವೆ ಬಾವಿ ಕೊರೆಸಿಕೊಂಡು ದರ್ಬಾರ್‌ ಮಾಡುತ್ತಿದ್ದಾರೆ. ಅವರ ಬಗ್ಗೆಯೂ ಸಹ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ. ಆದರೆ ಅಧಿಕಾರಿಗಳು ಮಾತ್ರ ನಮ್ಮಂತಹವರ ಮೇಲೆ ತಮ್ಮ ದರ್ಪ ತೋರುತ್ತಾರೆ ಎಂದು ದೂರಿದರು.

ಒತ್ತುವರಿ ತೆರವು ಕಾರ್ಯದಲ್ಲಿ ಪಂಚಾಯತ್‌ ರಾಜ್‌ ಇಲಾಖೆ ಅಭಿಯಂತರರ ರವೀಂದ್ರ, ಸಹಾಯಕ ಕಿರಿಯ ಇಂಜಿನಿಯರ್‌ ವೆಂಕಟೇಶ್‌ ಮೂರ್ತಿ ಮತ್ತು ಕಸಬಾ ಹೋಬಳಿ ಕಂದಾಯ ವೃತ್ತ ನೀರಿಕ್ಷಕರು ಹಾಜರಿದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.