ಬಿಸಿಯೂಟ ನೌಕರರಿಗೆ ನಾಲ್ಕು ತಿಂಗಳಿಂದ ವೇತನ ಇಲ್ಲ
ಸಾಲ ಮಾಡಿ ಜೀವನ ಸಾಗಿಸುತ್ತಿರುವ ನೌಕರರು ; ಇತ್ತ ಉದ್ಯೋಗ ಇಲ್ಲ, ವೇತನವೂ ಇಲ್ಲದೆ ಪರದಾಟ
Team Udayavani, Aug 11, 2021, 4:40 PM IST
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಿಸಿಯೂಟ ನೌಕರರು ಸೇವಾ ಭದ್ರತೆ, ಸಕಾಲದಲ್ಲಿ ವೇತನ ಪಾವತಿಸಲು ಪ್ರತಿಭಟನೆ ನಡೆಸಿದ್ದರು.(ಸಂಗ್ರಹ ಚಿತ್ರ).
ಚಿಕ್ಕಬಳ್ಳಾಪುರ: ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಬಂದ್ ಮಾಡಿದ್ದರಿಂದ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಂಡಿದೆ. ಅಡುಗೆ ಸಿಬ್ಬಂದಿಗೆ
ಕಳೆದ 4 ತಿಂಗಳಿಂದ ವೇತನ ಇಲ್ಲದೆ ಬದುಕಿನ ಬಂಡಿ ನೂಕಲು ಪರದಾಡುವಂತಾಗಿದೆ. ಜಿಲ್ಲೆಯ ಶಿಡ್ಲಘಟ್ಟ, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಚಿಂತಾಮಣಿ, ಗೌರಿಬಿದನೂರು, ಗುಡಿಬಂಡೆ ತಾಲೂಕುಗಳಲ್ಲಿ 2735 ಅಡುಗೆ ಮಾಡುವ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಕಳೆದ ಏಪ್ರಿಲ್ ತಿಂಗಳಿಂದ ಅವರಿಗೆ ವೇತನ ಭಾಗ್ಯವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಾಲ ಮಾಡುವ ಪರಿಸ್ಥಿತಿ: ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಂಡರೂ ಶಾಲೆಯಲ್ಲಿ ದಾಖಲಾದ ಮಕ್ಕಳಿಗೆ ಆಹಾರ ಧಾನ್ಯ ಪೂರೈಕೆ ಮಾಡುವ ಕಾರ್ಯದಲ್ಲಿ ಶಿಕ್ಷಕರೊಂದಿಗೆ ಅಡುಗೆ ಮಾಡುವ ಸಿಬ್ಬಂದಿಯೂ ಕೈಜೋಡಿಸಿದ್ದಾರೆ. ವಿದ್ಯಾರ್ಥಿಗಳ ಮನೆಯ ಬಾಗಿಲಿಗೆ ಸೌಲಭ್ಯವನ್ನು ತಲುಪಿಸುವ ಕಾರ್ಯ ಮಾಡಬೇಕು. ಆದರೂ, ಸರ್ಕಾರ ಕಳೆದ ಏಪ್ರಿಲ್ ತಿಂಗಳಿಂದ ಅವರಿಗೆ ವೇತನ ಪಾವತಿಸಿಲ್ಲ. ಇದರಿಂದ ಅಡುಗೆ ಮಾಡುವ ಸಿಬ್ಬಂದಿಯವರು ಕುಟುಂಬ ನಿರ್ವಹಣೆಗಾಗಿ ಸಾಲ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ:ಆನಂದ ಸಿಂಗ್ ಭೇಟಿ ವಿಚಾರದಲ್ಲಿ ಮಾಹಿತಿ ಬಿಟ್ಟು ಕೊಡದ ಸ್ಪೀಕರ್
ಮಧ್ಯಾಹ್ನದ ಬಿಸಿಯೂಟದ ಯೋಜನೆ ಯಾವುದೇ ರೀತಿಯ ಲೋಪವಿಲ್ಲದೆ ಅನುಷ್ಠಾನ ಮಾಡಲು ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ
ನೌಕರರು ತಮ್ಮ ವಿವಿಧ ಬೇಡಿಕೆ ಈಡೇರಿಸಲು ಈ ಹಿಂದೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಸೇವಾ ಭದ್ರತೆ, ವೇತನವನ್ನು ನಿಗ ದಿತ ಅವಧಿಯಲ್ಲಿ ಪಾವತಿಸಲು ಮನವಿ ಸಹ ಸಲ್ಲಿಸಿದ್ದಾರೆ. ಆದರೆ, ಸರ್ಕಾರ ತನ್ನ ಯೋಜನೆಗಳನ್ನು ಪರಿಣಾಮಕಾರಿಯಾಗಿ
ಅನುಷ್ಠಾನಗೊಳಿಸಲು ಬಿಸಿಯೂಟ ನೌಕರರನ್ನು ಬಳಸಿಕೊಂಡಿದೆಯೇ ವಿನಃ, ಅವರಿಗೆ ಸಕಾಲದಲ್ಲಿ ವೇತನ ಪಾವತಿಸಲು ವಿಳಂಬ ನೀತಿ ಅನುಸರಿಸುತ್ತಿದೆ ಎಂಬ ಅಸಮಾಧಾನ ಕೇಳಿ ಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2735 ಬಿಸಿಯೂಟ ನೌಕರರು ಇದ್ದಾರೆ. ಮಾರ್ಚ್ವರೆಗೆ ವೇತನ ಪಾವತಿಯಾಗಿಲ್ಲ. ಸರ್ಕಾರದಿಂದ ಮಂಜೂರಾದ ತಕ್ಷಣ ವಿತರಣೆಗೆ ಕ್ರಮಕೈಗೊಳ್ಳುತ್ತೇವೆ.
-ಶೈಲಾ, ಶಿಕ್ಷಣಾಧಿಕಾರಿ, ಅಕ್ಷರ ದಾಸೋಹ
ಬಿಸಿಯೂಟ ಯೋಜನೆ
ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ನೌಕರರಿಗೆ ಕಳೆದ ನಾಲ್ಕು ತಿಂಗಳಿಂದ ವೇತನವಿಲ್ಲ. ಕುಟುಂಬ ನಿರ್ವಹಣೆಕಷ್ಟ ವಾಗಿದೆ.ಕಳೆದ ಸಾಲಿನಲ್ಲಿ ಶಾಲೆಗಳು ಸ್ಥಗಿತಗೊಂಡರೂ ಮಾರ್ಚ್ವರೆಗೆ ವೇತನ ಪಾವತಿಸಲಾಗಿದೆ. ನಂತರ ವೇತನ ಪಾವತಿಯಾಗಿಲ್ಲ, ಸರ್ಕಾರ ಕೂಡಲೇ ವೇತನ ಪಾವತಿಸಲು ಕ್ರಮಕೈಗೊಳ್ಳಬೇಕು.
-ಕೆ.ಎಸ್.ಮಂಜುಳಾ, ಕಾರ್ಯದರ್ಶಿ,
ಬಿಸಿಯೂಟ ನೌಕರರ ಸಂಘ
-ಎಂ.ಎ.ತಮೀಮ್ ಪಾಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ