ಮನುಕುಲ ರಕ್ಷಣೆಗೆ ಪರಿಸರ ಸಂರಕ್ಷಣೆ ಅಗತ್ಯ
Team Udayavani, Oct 12, 2020, 3:33 PM IST
ಗೌರಿಬಿದನೂರು: ಸಮಾಜಸೇವೆ ಜತೆಗೆ ಸುತ್ತಲಿನ ಪರಿಸರ ಸ್ವಚ್ಛವಾಗಿಸಿ ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗುವಂತೆ ಗಿಡನೆಟ್ಟು, ನೀರುಣಿಸಿ ಪೋಷಿಸುವ ಕಾರ್ಯ ಬದುಕಿಗೆ ನೆಮ್ಮದಿ ನೀಡುತ್ತದೆಎಂದು ಲಯನ್ಸ್ ಸಂಸ್ಥೆ ಜಿಲ್ಲಾ
ಗರ್ವನರ್ ಎಂ.ಬಿ. ದೀಪಕ್ ಸುಮನ್ ತಿಳಿಸಿದರು. ತಾಲೂಕಿನ ಆರ್ಕುಂದ ಗ್ರಾಮದಲ್ಲಿ ಲಯನ್ ಸಂಸ್ಥೆ ವತಿಯಿಂದ ಆಯೋಜಿಸಿದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,ಗ್ರಾಮೀಣಭಾಗದಲ್ಲಿ ಕೃಷಿ ಚಟುವಟಿಕೆ ಜೊತೆಯಲ್ಲಿ ರೈತರ ಜಮೀನು ಹಾಗೂ ಸರ್ಕಾರಿ ಭೂಮಿಯಲ್ಲಿ ಹೆಚ್ಚಿನ ಗಿಡಗಳನ್ನು ನೆಟ್ಟು ಪೋಷಿಸುವುದರಿಂದ ಮುಂದಿನ ಪೀಳಿಗೆ ಉಳಿವಿಗೆ ಕೈ ಜೋಡಿಸಿದಂತಾಗುತ್ತದೆ. ಮನುಕುಲಕ್ಕೆ ಅತ್ಯವಶ್ಯವಾಗಿರುವ ಗಾಳಿ ಮತ್ತುನೀರನ್ನು ಉಳಿಸಿ ಸ್ವಚ್ಛವಾಗಿಸುವ ಪ್ರಯತ್ನ ನಿಜಕ್ಕೂ ಉತ್ತಮವಾಗಿದೆ. ಪ್ರಾಣಿ ಮತ್ತು ಸಸ್ಯ ಸಂಕುಲವನ್ನು ಅವನತಿಯ ಅಂಚಿನಿಂದ ಉಳಿಸಬೇಕಾದರೆ ಅಂತರ್ಜಲ ಮಟ್ಟ ವೃದ್ಧಿಸಿ ಮಾಲಿನ್ಯ ತಪ್ಪಿಸಬೇಕಾಗಿದೆ ಎಂದರು.
ಸಾಮಾಜಿಕ ಅರಣ್ಯ ಇಲಾಖೆ ವಲಯ ಅಧಿಕಾರಿ ಎನ್.ಪದ್ಮಶ್ರೀ ಮಾತನಾಡಿ, ಸ್ಥಳೀಯ ನಾಗರಿಕರ ಜೊತೆಗೆ ವಿವಿಧ ಸಂಘ-ಸಂಸ್ಥೆಗಳು ಸೇರಿ ಗಿಡ ನೆಟ್ಟು ಪೋಷಿಸುವ ಕಾರ್ಯ ನಡೆದಲ್ಲಿ ಎಲ್ಲಡೆ ಉತ್ತಮ ಪರಿಸರ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಹೇಳಿದರು.
ತಾಲೂಕು ಲಯನ್ ಸಂಸ್ಥೆಯ ಅಧ್ಯಕ್ಷ ಆರ್. ಜೆ.ಶ್ರೇಣಿಕ್ ಮಾತನಾಡಿದರು. ಇದೇ ವೇಳೆ ಸಾಮಾಜಿಕ ಅರಣ್ಯ ಇಲಾಖೆ ವಲಯ ಅಧಿಕಾರಿ ಎನ್.ಪದ್ಮಶ್ರೀ ಹಾಗೂ ಗ್ರಾಪಂ ಆಡಳಿತಾಧಿಕಾರಿ ಮುರಳೀಧರ್ ಅವರನ್ನು ಸನ್ಮಾನಿಸಲಾಯಿತು.
ಲಯನ್ ಸಂಸ್ಥೆಯ ಪದಾಧಿಕಾರಿಗಳಾದ ರಾಜಶೇಖರಯ್ಯ, ಮನೋಹರನ್ ನಂಬಿಯಾರ್, ಪ್ರಭುಸ್ವಾಮಿ, ಶ್ರೀನಿವಾಸ್, ಜಿ.ಎನ್. ಸೂರಜ್, ಶ್ರೀಧರ್, ಜಗನ್ನಾಥ್ ರೆಡ್ಡಿ, ಇ.ಎಸ್. ಸತೀಶ್ ಕುಮಾರ್, ವಿ.ರವೀಂದ್ರನಾಥ್, ವೈ.ಎನ್. ಅಂಬಿಕಾ, ಲಕ್ಷ್ಮೀ, ಸಂಕೇತ್ ಶ್ರೀರಾಮ…, ನರಸಿಂಹ ಮೂರ್ತಿ, ರವಿಶಂಕರ್, ಡಿ. ಅಶ್ವತ್ಥ ರೆಡ್ಡಿ, ಪ್ರೊ.ಕೆ. ರಾಮಾಂಜ ನೇಯಲು, ಮುಖಂಡರಾದ ಕೆ.ಆರ್. ಸಪ್ತಗಿರಿ, ಎಸ್.ವಿ. ಕೃಷ್ಣಕುಮಾರಿ, ಶೈಲಜಾ, ಶಾಂತಿ ಸೂರಜ್, ಆನಂದ್, ದೇವರಾಜ್, ರವಿಕುಮಾರ್, ಪದ್ಮರಾಜ್, ಮುರಳೀಧರ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
MUST WATCH
ಹೊಸ ಸೇರ್ಪಡೆ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ