![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಎಲ್ಲರೂ ದೇಶದ ಸಂಸ್ಕೃತಿ, ಪರಂಪರೆ ಎತ್ತಿ ಹಿಡಿಯಬೇಕು
Team Udayavani, Apr 17, 2018, 12:49 PM IST
![Ashok electrocution victim 7.jpg](https://www.udayavani.com/wp-content/uploads/2018/04/17/Ashok electrocution victim 7.jpg)
ಚಿಕ್ಕಬಳ್ಳಾಪುರ: ಪೋಷಕರು ತಮ್ಮ ಮಕ್ಕಳಿಗೆ ಚಿಕ್ಕಂದಿನಿಂದಲೇ ಸಂಗೀತ, ಸಾಹಿತ್ಯದಂತಹ ಕಲೆ ಕಲಿಯಲು ಪ್ರೋತ್ಸಾಹಿಸಬೇಕು. ಈ ಮೂಲಕ ದೇಸಿ ಸಂಸ್ಕೃತಿ ಹಾಗೂ ಪರಂಪರೆಯನ್ನು ಎತ್ತಿ ಹಿಡಿಯಬೇಕೆಂದು ಆದಿಚುಂಚನಗಿರಿಯ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ತಾಲೂಕಿನ ರಾಮಗಾನಪರ್ತಿಯಲ್ಲಿ ಚಿಕ್ಕಬಳ್ಳಾಪುರದ ಸಪ್ತಸ್ವರ ಗಾನ ಸಭಾ ಮಂಡಳಿ ವತಿಯಿಂದ 12ನೇ ವಾರ್ಷಿಕೋತ್ಸವ ಅಂಗವಾಗಿ ಏರ್ಪಡಿಸಿದ್ದ ಸಂಗೀತೋತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ನಮ್ಮ ನಾಡಿನಲ್ಲಿ ಸಂಗೀತ, ಸಾಹಿತ್ಯದ ಕಲೆ ಪ್ರೀತಿಸಿದ ಅನೇಕ ಮಹನೀಯರು ಸಾಹಿತ್ಯ ಲೋಕದಲ್ಲಿ ಅಪಾರ ಸಾಧನೆ ಮಾಡಿ¨ªಾರೆ. ಅವರ ಆದರ್ಶಗಳು ಇವತ್ತಿನ ಸಂಗೀತ ಪ್ರಿಯರಲ್ಲಿ ಕಾಣಬೇಕು. ಪ್ರತಿಯೊಬ್ಬರೂ ಸಂಗೀತ, ಸಾಹಿತ್ಯ ಕಲಿಯಲು ಉತ್ಸುಕರಾಗಿರಬೇಕು. ಇದರಿಂದ ಮನುಷ್ಯನಲ್ಲಿರುವ ಅನೇಕ ಮಾನಿಕ ಕಾಯಿಲೆಗಳು ದೂರವಾಗುತ್ತವೆ ಎಂದರು.
ರಾಮನ ಸ್ಮರಿಸಿ: ರಾಮಾಯಣ ಪರಿಶುದ್ಧ ಕಾವ್ಯ. ರಾಮ ಜಪ ನಿರಂತರ ಚೇತನವಾಗಿದೆ. ಅಕ್ಷರ ಕಲಿಯುವ ಮುನ್ನವೇ ರಾಮನನ್ನು ಅರಿಯುವುದು ಭಾರತೀಯ ಸಂಪ್ರದಾಯದಲ್ಲಿದೆ. ಸಮಾಜದ ಪ್ರತಿಯೊಬ್ಬ ನಾಗರಿಕರು ಯಾವತ್ತೂ ಯಾರಿಗೂ ಕೆಟ್ಟದ್ದನ್ನು ಬಯಸಬಾರದು. ಇನ್ನೊಬ್ಬರಿಗೆ ಸಹಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ತಮ್ಮ ನಿತ್ಯ ಜೀವನದಲ್ಲಿ ರಾಮನನ್ನು ಭಕ್ತಿಯಿಂದ ಸ್ಮರಿಸಿಬೇಕು ಎಂದರು.
ಭಕ್ತಿ, ಧ್ಯಾನ ಪಾಲಿಸಿ: ಚುಟುಕು ಸಾಹಿತ್ಯ ಜಿಲ್ಲಾ ಘಟಕದ ಅಧ್ಯಕ್ಷ ಚಲಪತಿಗೌಡ ಮಾತನಾಡಿ, ಮಹಾಕಾವ್ಯಗಳು ಇಲ್ಲದೇ ಭಾಷೆ ಶ್ರೀಮಂತ ಪರಂಪರೆ ಹೊಂದಲು ಸಾಧ್ಯವಿಲ್ಲ. ಪ್ರತಿಯೊಬ್ಬರು ಭಕ್ತಿ, ಧ್ಯಾನವನ್ನು ನಿತ್ಯ ಜೀವನದ ಒಂದು ಭಾಗವಾಗಿ ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ನೆಮ್ಮದಿಯಿಂದ ಇರಬಹುದು ಎಂದರು.
ಮುಖಂಡ ಪುರದಗಡ್ಡೆ ಕೃಷ್ಣಪ್ಪ ಮಾತನಾಡಿ, ದೇಶದ ಸಂಸ್ಕೃತಿ, ಪರಂಪರೆಯನ್ನು ಬೆಳೆಸಲು ಸಂಗೀತ ಕಲಿಕೆ ಬಹು ಮುಖ್ಯ. ದಶಕಗಳ ತಾಳ್ಮೆ ಹಾಗೂ ಸಾಧನೆಯ ಫಲವಾಗಿ ಹೊರಬಂದ ಶ್ರೀರಾಮಚರಿತ ಗ್ರಂಥ ಸಾಹಿತ್ಯವೂ ಸಾರ್ವಕಾಲಿಕ ಇತಿಹಾಸ ನಿರ್ಮಾಣವಾಗಿದೆ. ಎಲ್ಲರೂ ಭಕ್ತಿಯಿಂದ ರಾಮನ ಸ್ಮರಣೆ ಮಾಡಬೇಕು. ಇದರಿಂದ ಮಾನಸಿಕವಾಗಿ ಆತ್ಮ ಸ್ಥೈರ್ಯ ಹೆಚ್ಚುತ್ತದೆ. ಬದುಕು ಕೂಡ ಉಜ್ವಲಗೊಳ್ಳುತ್ತದೆ ಎಂದರು.
ಸಂಗೀತ ಕಲಾವಿದ ಮಹಾಲಿಂಗಯ್ಯ ಮಠದ, ಪತ್ರಕರ್ತ ಶೇಖರ್, ರಾಮಕೃಷ್ಣಾಚಾರಿ, ಲಕ್ಷ್ಮಣಾಚಾರ್, ಚಿಕ್ಕಣ್ಣ, ವೆಂಕಟರಮಣಪ್ಪ, ಶ್ರೀನಿವಾಸ್ ನಾಯ್ಡು ಇದ್ದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![2-gudibande](https://www.udayavani.com/wp-content/uploads/2024/07/2-gudibande-150x90.jpg)
Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು
![Chikkaballapura: ಇದು ರಾಜಕೀಯ ಬಜೆಟ್ ಅಲ್ಲ, ರಾಷ್ಟ್ರೀಯ ಬಜೆಟ್: ಸಂಸದ ಡಾ.ಕೆ.ಸುಧಾಕರ್](https://www.udayavani.com/wp-content/uploads/2024/07/sudhakar-1-150x108.jpg)
Chikkaballapura: ಇದು ರಾಜಕೀಯ ಬಜೆಟ್ ಅಲ್ಲ, ರಾಷ್ಟ್ರೀಯ ಬಜೆಟ್: ಸಂಸದ ಡಾ.ಕೆ.ಸುಧಾಕರ್
![Chikkaballapur: Siddaramaiah should resign if there is morality: MP Dr K Sudhakar](https://www.udayavani.com/wp-content/uploads/2024/07/sudhakr-150x83.jpg)
Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್
![Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ: ನಟ ಚೇತನ್ ಆರೋಪ](https://www.udayavani.com/wp-content/uploads/2024/07/chethan-150x105.jpg)
MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್
![4-gudibande](https://www.udayavani.com/wp-content/uploads/2024/07/4-gudibande-150x90.jpg)
Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.