Chikkaballapur: ಬರಕ್ಕೆ 1.70 ಲಕ್ಷ ಮೆ.ಟನ್‌ ಆಹಾರ ಧಾನ್ಯ ಉತ್ಪಾದನೆ ಕುಸಿತ!


Team Udayavani, Oct 7, 2023, 4:45 PM IST

tdy-17

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಈ ಬಾರಿ ತೀವ್ರ ಮಳೆ ಕೊರತೆಯಿಂದ ಅಪ್ಪಳಿಸಿರುವ ಬರದ ಪರಿಣಾಮ ಜಿಲ್ಲಾದ್ಯಂತ 75, 208 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಗಳು ಶೇ.50 ಕ್ಕಿಂತ ಹೆಚ್ಚು ಹಾನಿಯಾಗಿರುವ ಕಾರಣ ಜಿಲ್ಲೆಯಲ್ಲಿ ಬರೋಬ್ಬರಿ 1.70 ಲಕ್ಷ ಮೆಟ್ರಿಕ್‌ ಟನ್‌ನಷ್ಟು ಕೃಷಿ ಉತ್ಪನ್ನಗಳ ಉತ್ಪಾದನೆ ಕುಸಿಯಲಿದೆ.

ಹೌದು, ಹಲವು ದಶಕಗಳ ಕಾಲ ಬರಗಾಲವನ್ನು ಬೆನ್ನಿಗೇರಿಸಿಕೊಂಡಿದ್ದ ಜಿಲ್ಲೆಯು ಹಿಂದಿನ 3 ವರ್ಷದಿಂದ ಸಮೃದ್ಧ ಮಳೆಗೆ ಸಾಕ್ಷಿಯಾಗಿತ್ತು. ಆದರೆ ಈಗ ಮಳೆಯ ಅವಕೃಪೆ ಪರಿಣಾಮ ಈ ವರ್ಷ ಜಿಲ್ಲೆಗೆ ಬರ ಖಾಯಂ ಆಗಿದ್ದು, 6 ತಾಲೂಕುಗಳನ್ನು ತೀವ್ರ ಬರಗಾಲ ಪೀಡಿತ ಎಂದು ರಾಜ್ಯ ಸರ್ಕಾರ ಮಳೆ ಪ್ರಮಾಣ ಆಧಾರಿಸಿ ಪ್ರಕಟಿಸಿದೆ.

1.70 ಲಕ್ಷ ಮೆಟ್ರಿಕ್‌ ಟನ್‌ ಉತ್ಪಾದನೆ ಕುಸಿತ: ಇಡೀ ರಾಜ್ಯಕ್ಕೆ ಹಾಲು, ತರಕಾರಿ, ಹಣ್ಣು ಹಂಪಲು, ಹೂ ಬೆಳೆದುಕೊಡುವಲ್ಲಿ ಮುಂಚೂಣಿಯಲ್ಲಿರುವ ಜಿಲ್ಲೆಯು ಯಾವುದೇ ಶಾಶ್ವತ ನದಿ ನಾಲೆಗಳ ಕೊರತೆ ನಡುವೆಯು ಮಳೆಯನ್ನೆ ನಂಬಿ ಪ್ರತಿ ವರ್ಷ ಲಕ್ಷಾಂತರ ಮೆಟ್ರಿಕ್‌ ಟನ್‌ನಷ್ಟು ಆಹಾರ ಧಾನ್ಯಗಳನ್ನು ಉತ್ಪಾದನೆ ಮಾಡಿ ಕೊಡುತ್ತಿತ್ತು. ಆದರೆ, ಈ ಬಾರಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಜಿಲ್ಲಾದ್ಯಂತ ಬರೋಬ್ಬರಿ 1.70 ಲಕ್ಷ ಮೆಟ್ರಿಕ್‌ ಟನ್‌ಷ್ಟು ಆಹಾರ ಧಾನ್ಯಗಳ ಉತ್ಪಾದನೆ ಕುಸಿಯಲಿದೆಯೆಂದು ಕೃಷಿ ಇಲಾಖೆ ಅಂದಾಜಿಸಿರುವುದು ಜಿಲ್ಲೆಯ ಪಾಲಿಗೆ ತೀವ್ರ ಅಘಾತಕಾರಿ ಅಂಶವಾಗಿದೆ. ಬರದ ಪರಿಣಾಮ ಜಿಲ್ಲೆಯು ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳ ತೀವ್ರ ಕೊರತೆ ಎದುರಿಸುವ ಆತಂಕ ಎದುರಾಗಿದೆ.

ರಾಗಿ ಮಾರಿದ ರೈತರಲ್ಲಿ ಆತಂಕ!: ಉತ್ತಮ ಮಳೆ ಬೆಳೆ ನಿರೀಕ್ಷಿಸಿದ್ದ ಜಿಲ್ಲೆಯ ರೈತರು ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಣೆ ಮಾಡಿದ ಬಳಿಕ ವ್ಯಾಪಕ ಪ್ರಮಾಣದಲ್ಲಿ ರಾಗಿ ಬೆಳೆಗಾರರು ತಮ್ಮಲ್ಲಿ ಇದ್ದ ರಾಗಿಯನ್ನು ಬೆಂಬಲ ಬೆಲೆಗೆ ಖರೀದಿ ಕೇಂದ್ರಗಳಿಗೆ ಮಾರಾಟ ಮಾಡಿದ್ದು ಇದೀಗ ಮಳೆ ಕೈ ಕೊಟ್ಟು ರಾಗಿ, ಶೇಂಗಾ, ತೊಗರಿ, ಅವರೆ, ಮುಸುಕಿನ ಜೋಳ ಮತ್ತಿತರ ಕೃಷಿ ಉತ್ಪನ್ನಗಳ ಉತ್ಪಾದನೆ ಕುಸಿತ ಕಂಡಿರುವುದರಿಂದ ಜಿಲ್ಲೆಯ ರೈತರು ಕಂಗಾಲಾಗಿದ್ದು ಬೆಳೆಗಾರರೇ ರಾಗಿ ಖರೀದಿಸುವ ಪರಿಸ್ಥಿತಿ ಎದುರಾಗಲಿದೆ.

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.