ಪ್ರಧಾನಿ ನಿರ್ಧಾರಕ್ಕೆ ರೈತರು ನಿರಾಳ


Team Udayavani, Nov 6, 2019, 3:00 AM IST

pradhani

ಚಿಕ್ಕಬಳ್ಳಾಪುರ: ದೇಶದ ಹಾಲು ಉತ್ಪಾದಕರಲ್ಲಿ ತೀವ್ರ ಆತಂಕ ಮೂಡಿಸಿದ್ದ ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ (ಆರ್‌ಸಿಇಪಿ) ಒಪ್ಪಂದಕ್ಕೆ ಕಡೆಗೂ ಪ್ರಧಾನಿ ನರೇಂದ್ರ ಮೋದಿ ಅವರು ಸಹಿ ಹಾಕದಿರುವುದು ರಾಷ್ಟ್ರದ ಹೈನುಗಾರಿಕೆಯಲ್ಲಿ ತೊಡಗಿರುವ ಕೋಟ್ಯಂತರ ರೈತ ಸಮುದಾಯಕ್ಕಿದ್ದ ಆತಂಕ ದೂರವಾಗಿದ್ದು, ಮೋದಿ ರವರ ರೈತಪರ ನಿರ್ಧಾರಕ್ಕೆ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಕೃತಜ್ಞತೆ ಸಲ್ಲಿಸುತ್ತದೆ ಎಂದು ಕೋಚಿಮುಲ್‌ ಚಿಕ್ಕಬಳ್ಳಾಪುರ ನಿರ್ದೇಶಕ ಎನ್‌.ಸಿ.ವೆಂಕಟೇಶ್‌ ತಿಳಿಸಿದರು.

ನಗರದ ಕೋಚಿಮುಲ್‌ ಉಪ ಶಿಬಿರ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಥೈಲಾಂಡ್‌ನ‌ಲ್ಲಿ ನಡೆದ 15 ರಾಷ್ಟ್ರಗಳ ಸಮಾವೇಶದಲ್ಲಿ ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ (ಆರ್‌ಸಿಇಪಿ) ಒಪ್ಪಂದದಿಂದ ಭಾರತ ಕೊನೆ ಕ್ಷಣದಲ್ಲಿ ಹಿಂದೆ ಸರಿದಿರುವುದು ದೇಶದ ರೈತ ಸಮುದಾಯದ ಹೋರಾಟಕ್ಕೆ ಸಿಕ್ಕಿ ದೊಡ್ಡ ಗೆಲುವು ಎಂದರು.

ಉತ್ತಮ ನಿರ್ಧಾರ: ಆರ್‌ಸಿಇಪಿ ಒಪ್ಪಂದದಿಂದ ದೇಶಕ್ಕೆ ಕೃಷಿ ಉತ್ಪನ್ನಗಳು ಸೇರಿದಂತೆ ಬಹುವಾಗಿ ಹಾಲು ಹಾಗೂ ಹಾಲಿನ ಉತ್ಪನ್ನಗಳು ಯಾವುದೇ ಸುಂಕ ಇಲ್ಲದೇ ದೇಶದ ಮುಕ್ತ ಮಾರುಕಟ್ಟೆ ಪ್ರವೇಶಿಸಿ ದೇಶದ ಹೈನೋದ್ಯಮಕ್ಕೆ ದೊಡ್ಡ ಪೆಟ್ಟು ಬೀಳುತ್ತಿತ್ತು. ಆದರೆ ರಾಷ್ಟ್ರದಲ್ಲಿ ಆರ್‌ಸಿಇಪಿ ಒಪ್ಪಂದಕ್ಕೆ ವ್ಯಕ್ತವಾದ ವಿರೋಧ ಮನಗಂಡು ಮೋದಿರವರು ಒಪ್ಪಂದಕ್ಕೆ ಸಹಿ ಹಾಕದಿರುವುದು ಸಂತಸ ತಂದಿದೆ. ಆದರೂ 2020 ರೊಳಗೆ ಸಹಿ ಹಾಕಬೇಕೆಂದು ಇತರೆ ರಾಷ್ಟ್ರಗಳು ಭಾರತದ ಮೇಲೆ ಒತ್ತಡ ಹೇರಿವೆ.

ಸಹಿ ಮಾಡದೆ ಹೋದರೆ ಆಮದು ಮಾಡಿಕೊಳ್ಳುತ್ತಿರುವ ವಸ್ತುಗಳನ್ನು ನಿಲ್ಲಿಸುವುದರ ಜೊತೆಗೆ ದೇಶದಿಂದ ರಪು¤ ಮಾಡಿಕೊಳ್ಳುತ್ತಿರುವ ವಸ್ತುಗಳನ್ನು ತಡೆಯುವುದಾಗಿ ಬೆದರಿಕೆ ಹಾಕಿವೆ. ಆದರೆ ದೇಶದ ರೈತರ ಹಿತದೃಷ್ಟಿಯಿಂದ ಭಾರತಕ್ಕೆ ಎಷ್ಟೇ ನಷ್ಟವಾದರೂ ಒಪ್ಪಂದದಿಂದ ದೂರ ಸರಿದಿರುವುದು ಒಳ್ಳೆಯ ನಿರ್ಧಾರ ಎಂದರು.

ರೈತ ವಿರೋಧಿ: ನಾಯನಹಳ್ಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಬಿ.ಎನ್‌.ಮುನಿಕೃಷ್ಣಪ್ಪ ಮಾತನಾಡಿ, ಆರ್‌ಸಿಇಪಿ ಒಪ್ಪಂದದಿಂದ ವಿದೇಶಿ ಕಂಪನಿಗಳಿಂದ ದೇಶಕ್ಕೆ ಆಮದು ಆಗುವ ಸಾಮಗ್ರಿಗಳು ಸ್ಥಳೀಯ ಮಾರುಕಟ್ಟೆಗಳನ್ನು ಅಳಿಸಿ, ಹೆಚ್ಚಿನ ಶಕ್ತಿಯನ್ನು ಪಡೆಯುತ್ತವೆ. ಆರ್‌ಸಿಇಪಿ ಒಪ್ಪಂದ ರೈತ ವಿರೋಧಿಯಾಗಿದೆ ಎಂದು ಆರೋಪಿಸಿದರು.

ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 195 ಹಾಲು ಉತ್ಪಾದಕ ಸಂಘಗಳು ಕಾರ್ಯಚರಣೆಯಲ್ಲಿದ್ದು, 9128 ಮಂದಿ ಹಾಲು ಸರಬರಾಜು ಮಾಡುತ್ತಿರುವ ಸದಸ್ಯರಿದ್ದಾರೆ. ದಿನಕ್ಕೆ 1.01 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದ್ದು, ಸರಾಸರಿ ದಿನದ ವಹಿವಾಟು 23.42 ಲಕ್ಷ ಲಕ್ಷ ರೂ. ನಡೆಯುತ್ತಿದೆ. ತಿಂಗಳಿಗೆ 7.27 ಕೋಟಿ ರೂ. ವಹಿವಾಟು ಆಗುತ್ತಿದೆ ಎಂದು ಮಾಹಿತಿ ನೀಡಿದ ಅವರು, ಕೇಂದ್ರದ ನಿರ್ಧಾರ ಸರಿಯಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹರಿಸ್ಥಳ ಡೇರಿ ಅಧ್ಯಕ್ಷ ಚಿಕ್ಕಗೆರಿಗರೆಡ್ಡಿ, ನೌಕರರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎಂ.ರಾಮಕೃಷ್ಣರೆಡ್ಡಿ, ಶಿಬಿರ ಕಚೇರಿಯ ಉಪ ವ್ಯವಸ್ಥಾಪಕ ಪಾಪೇಗೌಡ, ಕೊತ್ತೂರು ಡೇರಿ ಅಧ್ಯಕ್ಷ ಎ.ವೆಂಕಟರೆಡ್ಡಿ, ಡಿ.ಹೊಸುರು ಡೇರಿ ಅಧ್ಯಕ್ಷ ರಾಮಚಂದ್ರಪ್ಪ, ಗಿಡ್ನಹಳ್ಳಿ ಜಿ.ಬಿ.ನಾರಾಯಣಸ್ವಾಮಿ, ದೊಡ್ಡೇಗೌಡ, ಒಕ್ಕೂಟದ ವಿಸ್ತರಣಾಧಿಕಾರಿಗಳಾದ ರಮೇಶ್‌ಬಾಬು, ಸದಾಶಿವ ಉಪಸ್ಥಿತರಿದ್ದರು.

7ಕ್ಕೆ ಹಮ್ಮಿಕೊಂಡಿದ್ದ ಹೋರಾಟ ಮುಂದೂಡಿಕೆ: ಆರ್‌ಸಿಇಪಿ ಒಪ್ಪಂದ ವಿರೋಧಿಸಿ ಒಪ್ಪಂದಕ್ಕೆ ಭಾರತ ಸಹಿ ಹಾಕಬಾರದೆಂದು ಆಗ್ರಹಿಸಿ ಇದೇ ತಿಂಗಳ ನ.7 ರಂದು ಜಿಲ್ಲಾಡಳಿತ ಭವನದ ಎದುರು ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಆಯೋಜಿಸಿದ್ದ ಬೃಹತ್‌ ಮಟ್ಟದ ಹೋರಾಟವನ್ನು ಭಾರತ ಒಪ್ಪಂದದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಹೋರಾಟ ಮುಂದೂಡಲಾಗಿದೆ. 2020ರಲ್ಲಿ ಇತರೆ ರಾಷ್ಟ್ರಗಳ ಒತ್ತಡಕ್ಕೆ ಮಣಿದು ಭಾರತ ಸಹಿ ಹಾಕಿದರೆ ಆಗಲೂ ದೊಡ್ಡ ಮಟ್ಟದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಕೋಚಿಮುಲ್‌ ನಿರ್ದೇಶಕ ಎನ್‌.ಸಿ.ವೆಂಕಟೇಶ್‌ ತಿಳಿಸಿದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.