ರೈತರ ಬೆಳೆಗೆ ಕಾನೂನು ಚೌಕಟ್ಟಿನಲ್ಲಿ ಬೆಲೆ ಸಿಗಲಿ
Team Udayavani, Dec 24, 2019, 3:00 AM IST
ಚಿಕ್ಕಬಳ್ಳಾಪುರ: ದೇಶ ಕಾಯುವ ಸೈನಿಕರಿಗೆ ಸಿಗುವ ಗೌರವ, ಸೌಲಭ್ಯಗಳು ಇಂದು ದೇಶಕ್ಕೆ ಅನ್ನ ಕೊಡುವ ರೈತರಿಗೆ ಸಿಗುತ್ತಿಲ್ಲ. ರೈತರು ಉದ್ಧಾರ ಆಗಬೇಕಾದರೆ ರೈತರು ಬೆಳೆಯುವ ಬೆಳೆಗಳಿಗೆ ಕಾನೂನು ಚೌಕಟ್ಟಿನಲ್ಲಿ ಮಾರುಕಟ್ಟೆಯಲ್ಲಿ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕೆಂದು ತಾಲೂಕಿನ ಬಲಜಿಗ ಪಡೆ ಕೃಷಿ ಸಂಶೋಧನಾ ಕೇಂದ್ರದ ಕೃಷಿ ವಿಜ್ಞಾನಿ ಮಂಜುಳಾ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಜಿಪಂ, ತಾಪಂ ಹಾಗೂ ಕೃಷಿ ಇಲಾಖೆ ಹಾಗೂ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ರೈತರ ದಿನಾಚರಣೆ ಹಾಗೂ ಕಿಸಾನ್ಗೋಷ್ಠಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ರೈತರ ಹೆಸರಿನಲ್ಲಿ ಕಂಪನಿಗಳು ಉದ್ಧಾರ ಆಗುವುದು ಬಿಟ್ಟರೆ ರೈತರ ಬೆವರಿಗೆ ಫಲ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಭದ್ರತೆ ಇಲ್ಲ: ಸಮಾಜದಲ್ಲಿ ಕೆಲಸ ಮಾಡುವ ಕಾರ್ಮಿಕರಿಂದ ಹಿಡಿದು ಸರ್ಕಾರಿ ನೌಕರರಿಗೆ ಕೆಲಸ ಸ್ಥಳದಲ್ಲಿ ಭದ್ರತೆ ಇರುತ್ತದೆ. ಆದರೆ ರೈತರಿಗೆ ಯಾವುದೇ ಭದ್ರತೆ ಇರುವುದಿಲ್ಲ. ದಿನದ 24 ಗಂಟೆ ಕಾಲ ಮಳೆ, ಗಾಳಿ, ಬಿಸಿಲು, ಚಳಿ ಎನ್ನದೇ ಕೆಲಸ ಮಾಡುವ ಸ್ಥಿತಿ ರೈತರದ್ದಾಗಿದೆ ಎಂದರು. ರೈತರಿಗೆ ಕನಿಷ್ಠ ದಿನ ಬಳಕೆ ವಸ್ತುಗಳನ್ನು ತೆರಿಗೆ ಮುಕ್ತ ಮಾಡಬಹುದಾಗಿತ್ತು. ಸರ್ಕಾರಗಳಿಂದ ಸೂಕ್ತ ಬೆಂಬಲ, ಸಹಕಾರ ನಿರೀಕ್ಷಿತ ಮಟ್ಟದಲ್ಲಿ ಸಿಗುತ್ತಿಲ್ಲ.
ರೈತರನ್ನು ಬಲಗೊಳಿಸುವ ಕಾನೂನುಗಳು ಜಾರಿಗೆ ತರುವುದು ಅಗತ್ಯ ಎಂದರು. ರೈತರ ಕಷ್ಟಸುಖಗಳ ಬಗ್ಗೆ ನಾಗರಿಕ ಸಮಾಜ ಚಿಂತನ, ಮಂಥನ ಮಾಡಬೇಕು. ರೈತರ ದಿನಾಚರಣೆಯನ್ನು ಕೇವಲ ರೈತರನ್ನು ಸೇರಿಸಿ ಆಚರಿಸುವುದರ ಬದಲು ರೈತರ ಹೊರತಾಗಿ ಸಾರ್ವಜನಿಕರನ್ನು, ವಿದ್ಯಾವಂತ ಯುವಕರನ್ನು ಸೇರಿಸಿ ಮಾಡಿದಾಗ ರೈತರ ಸಮಸ್ಯೆ, ಸವಾಲುಗಳ ಸಮಾಜಕ್ಕೆ ಅರ್ಥವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಉಪ ಕೃಷಿ ನಿರ್ದೇಶಕಿ ಡಾ.ಅನುರೂಪ, ತಾಲೂಕು ಸಹಾಯಕ ಕೃಷಿ ನಿರ್ದೇಶಕಿ ಜ್ಯೋತಿ, ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಕೆಂಪಣ್ಣ, ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ಎಚ್.ನರಸಿಂಹಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನಿರಾಜು, ತಾಲೂಕು ರೈತ ಸಂಘದ ಅಧ್ಯಕ್ಷ ರಾಮಾಂಜನಪ್ಪ, ಶಿಡ್ಲಘಟ್ಟ ತಾಲೂಕು ರೈತ ಸಂಘದ ಅಧ್ಯಕ್ಷ ಪಿ.ಎನ್.ಮಂಜುನಾಥ, ಆತ್ಮ ಯೋಜನೆಯ ಸಿಬ್ಬಂದಿ ಅರುಣಾ ಸೇರಿದಂತೆ ತಾಲೂಕಿನ ಪ್ರಗತಿಪರ ರೈತರು, ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ರೈತರಿಗೆ ಕೃಷಿ ವಸ್ತು ಪ್ರದರ್ಶನ: ರಾಷ್ಟ್ರೀಯ ರೈತ ದಿನಾಚರಣೆ ಹಾಗೂ ಕಿಸಾನ್ ಗೋಷ್ಠಿ ಪ್ರಯುಕ್ತ ರೈತರಿಗೆ ಸಮಗ್ರ ಕೃಷಿ ಬೇಸಾಯ ಪದ್ಧತಿಗಳ ಬಗ್ಗೆ ಹಾಗೂ ಸಾವಯುವ ಹಾಗೂ ಸಿರಿಧಾನ್ಯಗಳ ಮಹತ್ವದ ಕುರಿತು ಅರಿವು ಮೂಡಿಸುವ ಕೃಷಿ ವಸ್ತು ಪ್ರದರ್ಶನ ಆಯೋಜಿಸಲಾಗಿತ್ತು. ವಿಶೇಷವಾಗಿ ಸಿರಿಧಾನ್ಯಗಳ ಮಾರಾಟ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಕೆಲ ಪ್ರಗತಿಪರ ರೈತರನ್ನು ಕೃಷಿ ಇಲಾಖೆ ಗುರುತಿಸಿ ಸನ್ಮಾನಿಸಿತು.
ವಿದ್ಯಾವಂತರಿಂದ ಭೂಮಿಗೆ ಹಾನಿ
ಚಿಕ್ಕಬಳ್ಳಾಪುರ: ಅನಕ್ಷರಸ್ಥರಿಗಿಂತ ವಿದ್ಯಾವಂತರಿಂದಲೇ ಇಂದು ಭೂಮಿಗೆ ಹೆಚ್ಚು ತೊಂದರೆ ಆಗುತ್ತಿದೆ ಎಂದು ಜಿಲ್ಲೆಯ ಖ್ಯಾತ ಸಾವಯುವ ಕೃಷಿಕ ಮಹಿಳೆ ಗೌರವಮ್ಮ ತಿಳಿಸಿದರು. ರಾಷ್ಟ್ರೀಯ ರೈತ ದಿನಾಚರಣೆಯಲ್ಲಿ ಆಯೋಜಿಸಿದ್ದ ಕಿಸಾನ್ಗೋಷ್ಠಿಯಲ್ಲಿ ಸಾವಯುವ ಕೃಷಿಯ ಮಹತ್ವದ ಕುರಿತು ಮಾತನಾಡಿದ ಅವರು, ಔಷದಿ ಮಾರುವ ಕಂಪನಿಗಳ ಕಟ್ಟಡಗಳು ವರ್ಷದಿಂದ ವರ್ಷಕ್ಕ ಬೆಳೆಯುತ್ತಲೇ ಇರುತ್ತವೆ. ಆದರೆ ಕೃಷಿ ಮಾರುವ ರೈತರ ಕಟ್ಟಡಗಳು ವರ್ಷದಿಂದ ವರ್ಷಕ್ಕೆ ಬೆಳೆಯುತ್ತಿವೆಯೇ? ಎಂದು ಗೌರಮ್ಮ ಪ್ರಶ್ನಿಸಿದರು.
ಕೃಷಿ ಕ್ಷೇತ್ರ ಉದ್ಧಾರ ಆಗಬೇಕಾದರೆ ಪುರುಷರಿಗಿಂತ ಮಹಿಳೆಯರು ಹೆಚ್ಚು ಶ್ರಮ ವಹಿಸಬೇಕೆಂದರು. ರಸಾಯನಿಕ ಗೊಬ್ಬರಗಳನ್ನು ಆದಷ್ಟು ಕಡಿಮೆ ಮಾಡಬೇಕು. ಹೆಚ್ಚು ಹೆಚ್ಚು ಸಾವಯುವ ಗೊಬ್ಬರ ಬಳಕೆಯಿಂದ ಇಳುವರಿ ಅಧಿಕಗೊಳ್ಳುವುದರ ಜೊತೆಗೆ ಆರೋಗ್ಯವಂತ ಬೆಳೆಗಳನ್ನು ಬೆಳೆಯಬಹುದು ಎಂದರು. ರೈತ ಮಹಿಳೆಯರು ದನಕುರುಗಳ ಸಾಕಾಣೆಗೆ ಪ್ರಾಮುಖ್ಯತೆ ಕೊಡಬೇಕು. ಇದರಿಂದ ಸಾವಯುವ ಗೊಬ್ಬರ ಸಿಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ