ರೈತರಿಗೆ ಕಿಸಾನ್ ಕ್ರೆಡಿಟ್ಕಾರ್ಡ್ ತಲುಪಲಿ
Team Udayavani, Oct 18, 2020, 5:55 PM IST
ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ರೈತರಿಗೆ ಶೇ.100 ರಷ್ಟು ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಬೇಕು ಹಾಗೂ ಪ್ರತಿ 15 ದಿನಗಳಿಗೊಮ್ಮೆ ಯಾವ ಕಿಸಾನ್ ಕ್ರೆಡಿಟ್ ಕಾರ್ಡ್ನಿಂದ ಯಾವ ರೀತಿ ರೈತರಿಗೆ ಉಪಯೋಗವಾಗುತ್ತಿದೆ ಎಂಬುದರ ಬಗ್ಗೆ ಸಮರ್ಪಕ ಮಾಹಿತಿ ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಕಿಸಾನ್ಕ್ರೆಡಿಟ್ಕಾರ್ಡ್ ಸರಿಯಾದ ಸಮಯಕ್ಕೆ ರೈತರಿಗೆ ಸಿಕ್ಕಾಗ ಮಾತ್ರ ಬ್ಯಾಂಕ್ಗಳಲ್ಲಿ ಸಾಲ ಸಿಗಲು ಸಾಧ್ಯವಾಗುತ್ತದೆ. ಇದರಿಂದ ರೈತರು ಇನ್ನಷ್ಟು ಕೃಷಿ ಕಾರ್ಯಗಳನ್ನು ಮಾಡಲು ಸಹಕಾರಿಯಾಗುತ್ತದೆ. ಆದ್ದರಿಂದ ತ್ವರಿತಗತಿಯಲ್ಲಿ ಕಿಸಾನ್ ಕಾರ್ಡ್ ನೀಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಶೇ.70ರಷ್ಟು ಸಾಲ: ಇದುವರೆಗೆ 80 ಸಾವಿರ ಕಿಸಾನ್ ಕ್ರೆಡಿಟ್ ಕಾರ್ಡ್ಗಳಿಗೆ ಶೇ.70 ರಷ್ಟುಸಾಲ ವಿತರಿಸಲಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಸಹಕಾರ ಆದೇಶದಂತೆ12 ಸಾವಿರ ಅರ್ಜಿ ಸ್ವೀಕರಿಸಲಾಗಿದ್ದು,2800 ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಮಂಜೂರು ಮಾಡಲಾಗಿದೆ ಎಂದು ಹೇಳಿದರು.
ವರದಿ ನಿರ್ವಹಣೆ: 2019-20ನೇ ಸಾಲಿನಲ್ಲಿ ರೈತರಿಗೆ ಬೆಳೆಯಲ್ಲಿ ಉಂಟಾದ ನಷ್ಟಕ್ಕೆ ಪರಿಹಾರವಾಗಿ ವಿಮೆಯನ್ನು ಆದಷ್ಟು ಬೇಗ ರೈತರಿಗೆ ನೀಡಿ, ಅವರಿಗೆ ಕೃಷಿ ಚಟುವಟಿಕೆಗಳಿಗೆ ನೈತಿಕ ಬೆಂಬಲ ನೀಡಬೇಕೆಂದರು. ರೈತರ ಅನುಕೂಲಕ್ಕಾಗಿ ಪ್ರತಿ 15 ದಿನಗಳಿಗೊಮ್ಮೆ ಯಾವ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ವರದಿಯ ನಿರ್ವಹಣೆ ಮಾಡಬೇಕೆಂದರು.
ವೈದ್ಯರು,ನರ್ಸ್ಗಳು.ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ಪ್ರತಿ 15 ದಿನಗಳಿಗೊಮ್ಮೆ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳುವುದರ ಮೂಲಕ ತಮ್ಮ ಆರೋಗ್ಯಕಾಪಾಡಿಕೊಳ್ಳಿ ಎಂದು ಹೇಳಿದರು. ಜಿಲ್ಲೆಯಲ್ಲಿ ರೈತರಿಗೆ ರಸಗೊಬ್ಬರಗಳ ಕೊರತೆ ಇಲ್ಲ ಮತ್ತು ಶೇ.90ಕ್ಕಿಂತ ಹೆಚ್ಚಿನ ಬಿತ್ತನೆ ಕಾರ್ಯಗಳು ಈಗಾಗಲೇ ಮುಗಿದಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಸಿಇಒ ಪಿ.ಶಿವಶಂಕರ್, ಉಪ ವಿಭಾಗಾಧಿಕಾರಿ ರಘುನಂದನ್, ಜಿಪಂ ಉಪ ಕಾರ್ಯದರ್ಶಿ ನೋಮೇಶ್, ಜಿಪಂಯೋಜನಾ ನಿರ್ದೇಶಕ ಗಿರಿಜಾ ಶಂಕರ್,ಲೀಡ್ ಬ್ಯಾಂಕ್ ಮ್ಯಾನೇಜರ್ ಬಸವರಾಜ್, ನಗರಾಭಿವೃದ್ಧಿ ಕೋಶದ ಜಿಲ್ಲಾ ಯೋಜನಾ ನಿರ್ದೇಶಕ ರೇಣುಕಾ, ಆಹಾರ ಇಲಾಖೆಯ ಉಪನಿರ್ದೇಶಕಿ ಸವಿತಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯದರ್ಶಿ ಮನೋಜ್ಕುಮಾರ್ ಮೀನಾಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕೋವಿಡ್-19 ತುರ್ತು ಪರಿಸ್ಥಿಯಲ್ಲಿ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ವರ್ಗದವರು ಉತ್ತಮ ಗುಣಮಟ್ಟದ ಮಾಸ್ಕ್ಗಳನ್ನು ಬಳಸಿ ಆರೋಗ್ಯಕಾಪಾಡಿಕೊಳ್ಳಬೇಕು.ಕಚೇರಿ ಸಿಬ್ಬಂದಿಗೆ ಏನಾದರೂ ಕೋವಿಡ್ ಲಕ್ಷಣಗಳುಕಂಡುಬಂದಲ್ಲಿ ಕೂಡಲೇ ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡು ಗುಣಮುಖಆಗುವವರಿಗೂ ಮನೆಯಿಂದಲೇಕಾರ್ಯ ನಿರ್ವಹಿಸಿ. –ಮನೋಜ್ ಕುಮಾರ್ ಮೀನಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್