26ರಂದು ಕೇಂದ್ರ ಸರ್ಕಾರದ ವಿರುದ್ಧ ರೈತರ ರ್ಯಾಲಿ
Team Udayavani, Jan 22, 2021, 7:33 PM IST
ಚೇಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಜ.26 ರಂದು ಬೆಂಗಳೂರಿನಲ್ಲಿ ಟ್ಟ್ರ್ಯಾಕ್ಟರ್, ಎತ್ತಿನಬಂಡಿ, ಟ್ಯಾಕ್ಸಿ, ಟೆಂಪೋ, ಜೀಪು, ಕಾರು, ಮೋಟಾರ್ ಬೈಕ್ಗಳ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಪೊ›.ನಂಜುಂಡಸ್ವಾಮಿ ಬಣ) ಚೇಳೂರು ಹೋಬಳಿ ಅಧ್ಯಕ್ಷ ಆರ್.ಶಿವಾರೆಡ್ಡಿ ತಿಳಿಸಿದರು.
ದೆಹಲಿಯಲ್ಲಿ ರೈತರ ಧರಣಿ ನಡೆಸುತ್ತಿದ್ದಾರೆ. 50ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದರೂ ಪ್ರಧಾನಿ ಮೋದಿ ಅವರು ಸ್ಪಂದಿಸಿಲ್ಲ. ಕೇಂದ್ರ ಸರ್ಕಾರ ರೈತರಿಗೆ ಮಾರಕವಾಗಿರುವ ಕಾಯ್ದೆಗಳನ್ನು ವಾಪಸ್ ಪಡೆಯುವವರೆಗೂ ಪ್ರತಿಭಟನೆ ವಾಪಸ್ ಪಡೆಯುವುದಿಲ್ಲ ಎಂದರು.
ಇದನ್ನೂ ಓದಿ:ಮಾಸಾಂತ್ಯಕ್ಕೆ 12 ಕೆರೆ ಭರ್ತಿ: ನಿರಂಜನ್
ಕಾರ್ಪೊರೇಟ್ ಕಂಪನಿಗಳ ಕೈಗೆ ರೈತರ ಜುಟ್ಟು ನೀಡಲು ಕೇಂದ್ರ ಸರ್ಕಾರ ಹವಣಿಸುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಾಡಿರುವುದು ಖಂಡನೀಯ. ಈ ಕಾಯ್ದೆಗಳಿಂದ ಹೈನುಗಾರಿಕೆ ಮೇಲೆ ಕರಿನೆರಳು ಬೀಳಲಿದೆ ಎಂದರು. ಚೇಳೂರು ಗ್ರಾಪಂನ ಕೆ.ಎನ್. ಸೋಮಶೇಖರ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ಹೊಸ ಕಾಯ್ದೆಗಳನ್ನು ಜಾರಿಗೆ ತಂದು ರೈತರನ್ನು ಬೀದಿಪಾಲು ಮಾಡಲು ಹೊರಟಿವೆ. ಅನ್ನದಾತರ ವಿರೋಧ ಕಟ್ಟಿಕೊಳ್ಳುವಸರ್ಕಾರಗಳು ಉಳಿಯಲು ಸಾಧ್ಯವಿಲ್ಲ ಎಂದರು.
ಮುಖಂಡರಾದ ಪುಲಗಂಟಿ ಶ್ರೀನಿವಾಸ, ಅಪ್ಪನ್ನ,ಗುರುಗುಟ್ಲು ಸೀನಪ್ಪ, ಪುಲಗಲ್ ಗೆಜ್ಜಿ ವೆಂಕಟರಾಯಪ್ಪ, ಬಿ.ಎಸ್.ಬಿ.ಎಸ್.ಮರಿಯಪ್ಪ, ಚೇಳೂರಿನ ಆಂಜಿನೇಯರೆಡ್ಡಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ