ಜಿಲ್ಲೆಯಲ್ಲಿಂದು ಎಫ್ಡಿಎ ಪರೀಕ್ಷೆ
Team Udayavani, Jun 9, 2019, 3:00 AM IST
ಚಿಕ್ಕಬಳ್ಳಾಪುರ: ಕರ್ನಾಟಕ ಲೋಕಸಭಾ ಸೇವಾ ಆಯೋಗ ನಡೆಸುತ್ತಿರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇರ ನೇಮಕಾತಿಗಾಗಿ ಜೂ.9 ರಂದು ಜಿಲ್ಲಾ ಕೇಂದ್ರದಲ್ಲಿ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ಒಟ್ಟು 3,679 ಅಭ್ಯರ್ಥಿಗಳು ಪರೀಕ್ಷೆಗೆ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ.
ಅಗತ್ಯ ಸಿದ್ಧತೆ: ಎಫ್ಡಿಎ ಪರೀಕ್ಷೆ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಿದ್ದು, ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಜಿಲ್ಲಾಡಳಿತ ಆದೇಶಿಸಿದೆ. ಪರೀಕ್ಷೆಯನ್ನು ಪಾರದರ್ಶಕ ಹಾಗೂ ಸುಗಮವಾಗಿ ನಡೆಸಲು ಜಿಲ್ಲಾಡಳಿತದ ಮಾರ್ಗದರ್ಶನದೊಂದಿಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಜಿ.ನಾಗೇಶ್ ಶನಿವಾರ ಉದಯವಾಣಿಗೆ ಮಾಹಿತಿ ನೀಡಿದರು.
ಜಿಲ್ಲಾ ಕೇಂದ್ರದ ಖಜಾನೆಯಲ್ಲಿ ಪ್ರಶ್ನೆಪತ್ರಿಕೆ: ಬೆಳಗ್ಗೆ 10 ಗಂಟೆಗೆ ಆರಂಭಗೊಳ್ಳಲಿರುವ ಪರೀಕ್ಷೆ 11:30ರ ವೆರೆಗೂ ನಡೆಯಲಿದ್ದು, ಬೆಳಗ್ಗೆ ಸಾಮಾನ್ಯ ಜ್ಞಾನ ವಿಷಯದ ಪ್ರಶ್ನೆ ಪತ್ರಿಕೆಯ ಪರೀಕ್ಷೆ, ಮಧ್ಯಾಹ್ನ 2 ಗಂಟೆಯಿಂದ 3:30ರ ವರೆಗೂ ಸಾಮಾನ್ಯ ಕನ್ನಡ ಹಾಗೂ ಆಂಗ್ಲ ಪತ್ರಿಕೆಯ ವಿಷಯದ ಪರೀಕ್ಷೆ ನಡೆಯಲಿದೆ. ಈಗಾಗಲೇ ಪ್ರಶ್ನೆ ಪತ್ರಿಕೆಗಳು ಜಿಲ್ಲಾ ಕೇಂದ್ರದ ಖಜಾನೆಯಲ್ಲಿ ಬಿಗಿ ಭದ್ರತೆಯಲ್ಲಿ ದಾಸ್ತಾನು ಮಾಡಲಾಗಿದೆ.
8 ಕೇಂದ್ರ, 3769 ಅಭ್ಯರ್ಥಿಗಳು: ಜಿಲ್ಲಾ ಕೇಂದ್ರದಲ್ಲಿ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ನಗರದ ಸೆಂಟ್ ಜೋಸೆಫ್ ಕಾನ್ವೆಂಟ್ ಶಾಲೆಯಲ್ಲಿ 655, ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 600, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 400, ನಗರದ ಬಿಬಿ ರಸ್ತೆಯ್ಲಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ 480.
ಅಗಲಗುರ್ಕಿಯ ಬಿಜಿಎಸ್ ಪಿಯು ಕಾಲೇಜಿನಲ್ಲಿ 480, ಶಿಡ್ಲಘಟ್ಟ ರಸ್ತೆಯಲ್ಲಿರುವ ಸರ್.ಎಂ.ವಿಶ್ವೇಶ್ವರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ 360, ಅಗಲಗುರ್ಕಿಯ ಬಿಜಿಎಸ್ ಪ್ರೌಢ ಶಾಲೆಯಲ್ಲಿ 360 ಹಾಗೂ ವಾಪಸಂದ್ರದ ಡಾ.ಶ್ರೀ ಜಚನಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಒಟ್ಟು 264 ಮಂದಿ ಸೇರಿ ಒಟ್ಟು 3,679 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪ್ರತಿ ಕೇಂದ್ರಕ್ಕೆ ವೀಕ್ಷಕರ ನೇಮಕ: ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯನ್ನು ಜಿಲ್ಲಾಡಳಿತ ಪಾರದರ್ಶಕವಾಗಿ ನಡೆಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪುರುಷ ಹಾಗೂ ಮಹಿಳಾ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಮೂರು ಮಂದಿ ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದ್ದು, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ನೇತೃತ್ವದಲ್ಲಿ ಜಾಗೃತ ದಳವನ್ನು ರಚಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಬಿಗಿ ಪೊಲೀಸ್ ಭದ್ರತೆ ಆಯೋಜಿಸಲಾಗಿದೆ.
ಕನ್ನಡ ಪರೀಕ್ಷೆಗೆ 292 ಮಂದಿ ಗೈರು: ಎಫ್ಡಿಎ ಹಾಗೂ ಎಸ್ಡಿಎ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ಲೋಕಸಭಾ ಸೇವಾ ಆಯೋಗ ಶನಿವಾರ ಜಿಲ್ಲಾ ಕೇಂದ್ರದಲ್ಲಿ ನಡೆಸಿದ ಕನ್ನಡ ಕಡ್ಡಾಯ ಪರೀಕ್ಷೆಗೆ ಬರೋಬ್ಬರಿ 292 ಮಂದಿ ಅಭ್ಯರ್ಥಿಗಳು ಗೈರಾಗಿದ್ದರು. ಪರೀಕ್ಷೆಗೆ ಒಟ್ಟು 448 ಮಂದಿ ನೋಂದಾಯಿಸಿಕೊಂಡಿದ್ದು, ಆ ಪೈಕಿ ಪರೀಕ್ಷೆಗೆ ಕೇವಲ 156 ಮಂದಿ ಮಾತ್ರ ಹಾಜರಾಗಿದ್ದು, ಉಳಿದ 292 ಮಂದಿ ಕನ್ನಡ ಕಡ್ಡಾಯ ಪರೀಕ್ಷೆಯಿಂದ ದೂರ ಉಳಿದಿದ್ದರೆಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಜಿ.ನಾಗೇಶ್ ಉದಯವಾಣಿಗೆ ತಿಳಿಸಿದರು.
ಜೂ.9 ರಂದು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಒಟ್ಟು 8 ಕೇಂದ್ರಗಳಲ್ಲಿ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇರ ನೇಮಕಾತಿಗೆ ಪ್ರವೇಶ ಪರೀಕ್ಷೆ ನಡೆಯಲಿದ್ದು, ಒಟ್ಟು 3,679 ಮಂದಿ ಅಭ್ಯರ್ಥಿಗಳು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಸುಗಮ ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
-ಎಸ್.ಜಿ.ನಾಗೇಶ್, ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ