Fireworks: ಜಿಲ್ಲೆಯಲ್ಲಿ ಈ ಬಾರಿ ಪಟಾಕಿ ಸದ್ದು ಜೋರು!  


Team Udayavani, Nov 18, 2023, 3:13 PM IST

Fireworks: ಜಿಲ್ಲೆಯಲ್ಲಿ ಈ ಬಾರಿ ಪಟಾಕಿ ಸದ್ದು ಜೋರು!  

ಚಿಕ್ಕಬಳ್ಳಾಪುರ: ಪರಿಸರ ಸ್ನೇಹಿ ದೀಪಾವಳಿ ಆಚರಣೆ ಬಗ್ಗೆ ಹಲವು ಸಂಘ, ಸಂಸ್ಥೆಗಳು ಜನ ಜಾಗೃತಿ ಮೂಡಿಸುವುದರ ಜೊತೆಗೆ ಢಂಢಂ ಪಟಾಕಿ ಮಾರಾಟಕ್ಕೆ ಸರ್ಕಾರ ಹಲವು ಬಿಗಿ ಕ್ರಮಗಳನ್ನು ಕೈಗೊಂ ಡರೂ ಜಿಲ್ಲೆಯಲ್ಲಿ ಈ ಬಾರಿಯ ದೀಪಾವಳಿಯಂದು ನೆರೆಯ ಕೋಲಾರ ಬಿಟ್ಟರೆ ಚಿಕ್ಕ ಬಳ್ಳಾಪುರ ಅತ್ಯಧಿಕ ಶಬ್ದ ಮಾಲಿನ್ಯ ದಾಖ ಲಿಸಿದ ಅಪಕೀರ್ತಿಗೆ ಪಾತ್ರವಾಗಿದೆ.

ಹೌದು, ದೀಪಾವಳಿ ಹಬ್ಬದ ಆಸತತ ಮೂರು ದಿನಗಳ ಡೆಸಿಬಲ್‌ ಲೆಕ್ಕಚಾರದಲ್ಲಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಸಿ ಕ್ರೋಢೀಕರಿಸಿರುವ ಅಂಕಿ, ಅಂಶಗಳು ಉದಯವಾಣಿಗೆ ಲಭ್ಯವಾಗಿದು, ಜಿಲ್ಲೆಯಲ್ಲಿ ಕಳೆದ ವರ್ಷಕ್ಕಿಂತ ಜಿಲ್ಲೆಯಲ್ಲಿ ಹೆಚ್ಚು ಶಬ್ದಮಾಲಿನ್ಯ ದಾಖಲಾಗಿರುವುದು ದೃಢಪಟ್ಟಿದೆ. ನ.13 ರಂದು ದೀಪಾವಳಿ ಹಬ್ಬದ ವೇಳೆ ಸಿಡಿಸಿದ ಪಟಾಕಿಗಳ ಶಬ್ದ ಮಾಲಿನ್ಯದಲ್ಲಿ ಇಡೀ ರಾಜ್ಯಕ್ಕೆ ನೆರೆಯ ಕೋಲಾರ ಪ್ರಥಮ ಸ್ಥಾನದಲ್ಲಿದ್ದರೆ ಚಿಕ್ಕಬಳ್ಳಾಪುರ ಜಿಲ್ಲೆಯು ನ.13 ರಂದು ಎರಡನೇ ಸ್ಥಾನದಲ್ಲಿದೆ. ಇನ್ನೂ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ಜಿಲ್ಲೆಯ ಜನ ವಸತಿ ಪ್ರದೇಶಗಳಲ್ಲಿ ದೀಪಾವಳಿ ಹಬ್ಬದಂದು ಉಂಟಾದ ಶಬ್ದವನ್ನು ಅಳತೆ ಮಾಡುವ ನಿಟ್ಟಿನಲ್ಲಿ ತನ್ನ ಶಬ್ದ ಮಾಪನ ಘಟಕದಲ್ಲಿ ದಾಖಲಾಗಿರುವ ಪ್ರಕಾರ 45 ರಿಂದ 55 ರಷ್ಟು ಇರಬೇಕಿದ್ದ ಡೆಸಿಬಲ್‌ ದೀಪಾವಳಿ ಹಬ್ಬದ ಆಚರಿಸಿದ ನ.11 ರಿಂದ 13ರ ವರೆಗೂ ಮೂರು ದಿನಗಳ ಕಾಲ ಸರಾಸರಿ ಬರೋಬ್ಬರಿ 74.8ರಷ್ಟು ಡೆಸಿಬಲ್‌ ದಾಖಲಾಗಿದೆ.

ಕಳೆದ ವರ್ಷದ (2022) ದೀಪಾವಳಿ ಹಬ್ಬದಂದು ಡೆಸಿಬಲ್‌ ಕೇವಲ 56.8 ರಷ್ಟು ಇತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ.18 ರಷ್ಟು ಶಬ್ದ ಮಾಲಿನ್ಯ ಹೆಚ್ಚಳ ಕಂಡಿದೆ. ಠುಸ್‌ ಆದ ಹಸಿರು ಪಟಾಕಿ: ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ವಾಯು ಮಾಲಿನ್ಯದಲ್ಲಿ ತುಸು ಕಡಿಮೆಯಾದರೂ ಶಬ್ದ ಮಾಲಿನ್ಯದಲ್ಲಿ ಗಣನೀಯವಾಗಿ ಏರಿಕೆ ಕಂಡಿದೆ. ಆದರೆ ಜಿಲ್ಲೆಯಲ್ಲಿ ಪರಿಸರ ಸ್ನೇಹಿ ದೀಪಾವಳಿ ಆಚರಿಸುವ ದಿಕ್ಕಿನಲ್ಲಿ ಹಲವು ಸಂಘ, ಸಂಸ್ಥಗಳು, ಜಿಲ್ಲಾಡಳಿತ ಹಲವು ಕ್ರಮಗಳನ್ನು ವಹಿಸುವು ದರ ಜೊತೆಗೆ ಹಸಿರು ಪಟಾಕಿಗಳ ಮಾರಾಟಕ್ಕೆ ಆದೇಶಿಸಿ ದರೂ, ಜಿಲ್ಲೆಯಲ್ಲಿ ಮಾರ್ಗಸೂಚಿಗಳು ಸಮರ್ಪ ಕವಾಗಿ ಅನುಷ್ಠಾಗೊಳಿಸದಿರುವುದು ಎದ್ದು ಕಾಣುತ್ತಿದೆ.

ದೀಪಾವಳಿ ಆಚರಿಸಿದ 3 ದಿನಗಳ ಡೆಸಿಬಲ್‌ ವಿವರ: ಕಳೆದ ವರ್ಷ ನ.12 ರಂದು 54.3 ರಷ್ಟಿದ್ದ ಡೆಸಿಬಲ್‌ 2023 ರ ನ,12 ರಂದು 68.0 ರಷ್ಟು ದಾಖಲಾದರೆ 2022 ರ ನ.13 ರಂದು 54.9 ರಷ್ಟು ದಾಖಲಾಗಿದ್ದ ಡೆಸಿಬಲ್‌ 2023ರ ನ.13 ರಂದು 77.1ರಷ್ಟು ದಾಖಲಾಗಿದೆ. 2022 ರ ನ.14 ರಂದು 59.3 ರಷ್ಟಿದ್ದ ಡೆಸಿಬಲ್‌ 2023ರ ನ.14 ರಂದು 75.2 ರಷ್ಟು ದಾಖಲಾಗೊಂಡಿದೆಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದೀಪಾವಳಿ ಹಬ್ಬದ ಮೂರು ದಿನಗಳ ಸಂದರ್ಭದಲ್ಲಿ ತನ್ನ ಶಬ್ದ ಮಾಲಿನ್ಯ ಮಾಪನ ಘಟಕದಲ್ಲಿ ದಾಖಲಾಗಿರುವ ಶಬ್ದಮಾಲಿನ್ಯ ಡೆಸಿಬಲ್‌ ವಿವರಗಳನ್ನು ಕ್ರೋಢೀಕರಿಸಿ ಪ್ರಕಟಿಸಿರುವ ವಿವರದಲ್ಲಿ ಸ್ಪಷ್ಟಪಡಿಸಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ದೀಪಾವಳಿ ಹಬ್ಬದಂದು ವಾಯು ಮಾಲಿನ್ಯ ಈ ವರ್ಷ ಸ್ವಲ್ಪ ಕಡಿಮೆ ಆಗಿದೆ. ಆದರೆ ಶಬ್ದ ಮಾಲಿನ್ಯದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಶಬ್ದ ಮಾಲಿನ್ಯ ಹಬ್ಬದ ಮೂರು ದಿನಗಳಂದು ದಾಖಲಾಗಿದೆ. – ಸಿದ್ದೇಶ್ವರ್‌, ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ, ಪ್ರಾದೇಶಿಕ ಕಚೇರಿ ಚಿಕ್ಕಬಳ್ಳಾಪುರ. 

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.