ಆಧುನಿಕತೆಯಿಂದ ಜನಪದ ಕಣ್ಮರೆ
Team Udayavani, Mar 9, 2020, 3:00 AM IST
ಚಿಕ್ಕಬಳ್ಳಾಪುರ: ಜಾಗತೀಕರಣದ ಪರಿಣಾಮ ಟಿವಿ, ಮೊಬೈಲ್ ವ್ಯಾಮೋಹಕ್ಕೊಳಗಾಗಿ ವಿದ್ಯಾರ್ಥಿ, ಯುವ ಸಮೂಹ ಇಂಟರ್ನೆಟ್, ಟ್ವಿಟರ್, ಫೇಸ್ಬುಕ್, ವಾಟ್ಸ್ಆಪ್ಗ್ಳಲ್ಲಿ ಸಕ್ರಿಯರಾಗಿದ್ದು, ನಮ್ಮ ಮೂಲ ಜಾನಪದ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಜನಪದ ಕಲಾವಿದ ನಾರಮಾಕಲಹಳ್ಳಿ ಮುನಿರೆಡ್ಡಿ ಕಳವಳ ವ್ಯಕ್ತಪಡಿಸಿದರು.
ನಗರದ ವಿಶ್ವ ವಿವೇಕ ಪದವಿ ಕಾಲೇಜಿನಲ್ಲಿ ಭಾನುಲ್ಲಾ ಚುಟುಕು ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ನಮ್ಮ ಮೂಲ ಸಂಸ್ಕೃತಿಯ ಕಲೆಗಳಾದ ಯಕ್ಷಗಾನ, ವೀರಗಾಸೆ, ಡೊಳ್ಳುಕುಣಿತ, ಪಂಡರಿಭಜನೆ, ಬಯಲುನಾಟಕ ಮುಂತಾದ ಕಲೆಗಳು ಹಳ್ಳಿಹಳ್ಳಿಗಳಲ್ಲಿ ಪ್ರದರ್ಶನಗೊಳ್ಳುತ್ತಿದ್ದವು. ಇತ್ತೀಚಿಗೆ ಜಾಗತೀಕರಣದ ಸೆಳೆತಕ್ಕೆ ಸಿಲುಕಿ ಎಲ್ಲವೂ ಮಾಯವಾಗುತ್ತಿವೆ ಎಂದರು.
ಉಳಿಸಿ ಬೆಳೆಸಬೇಕಾದ ಅನಿವಾರ್ಯತೆ: ಮುಂದಿನ ಪೀಳಿಗೆಗೆ ದೇಶಿಯ ಸಂಸ್ಕೃತಿ, ಕಲೆ, ಸಂಪ್ರದಾಯಗಳನ್ನು ಉಳಿಸುವ ಹೊಣೆ ಪ್ರತಿಯೊಬ್ಬರ ಮೇಲಿದೆ. ಸಂಘ ಸಂಸ್ಥೆಗಳು, ಜಾನಪದ ಕಲಾವಿದರು ಇವನ್ನು ಉಳಿಸಿ ಬೆಳೆಸಬೇಕಾದ ಅನಿವಾರ್ಯತೆ ಒದಗಿಬಂದಿದೆ. ಅವುಗಳ ಬಗ್ಗೆ ಇಂದಿನ ಯುವ ಸಮೂಹದಲ್ಲಿ ಜಾಗೃತಿ ಮೂಡಿಸಬೇಕಾದ ಅವಶ್ಯಕತೆ ಇದೆ. ಈ ಕಲೆಗಳ ಮೂಲಕ ನಮ್ಮಲ್ಲಿ ಮಾನವೀಯ ಮೌಲ್ಯಗಳು ಬೆಳೆಸಲು ಸಹಾಯಕವಾಗಿದೆ ಎಂದು ತಿಳಿಸಿದರು.
ವಿದೇಶಿ ಸಂಸ್ಕೃತಿಗೆ ಆಕರ್ಷಿತ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಚುಸಾಪ ಅಧ್ಯಕ್ಷ ಪಾತಮುತ್ತಕಹಳ್ಳಿ ಎಂ.ಚಲಪತಿಗೌಡ, ಇತ್ತೀಚೆಗೆ ಯುವಜನತೆ ಕಲೆ, ಸಾಹಿತ್ಯ, ಸಂಸ್ಕೃತಿ ನಮ್ಮ ಪರಂಪರೆಗಳನ್ನು ಮರೆತು ವಿದೇಶಿ ಸಂಸ್ಕೃತಿಯ ಕಡೆ ಆಕರ್ಷಿತರಾಗುತ್ತಿರುವುದು ಭಯವನ್ನುಂಟು ಮಾಡಿದೆ. ಈಗಾಗಲೇ ಅನೇಕ ವೃದ್ಧಾಶ್ರಮ ಸ್ಥಾಪನೆಯಾಗಿದ್ದು, ಇದೇ ರೀತಿ ಮುಂದುವರಿದರೆ ಸಮಾಜ ಆತಂಕದ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದರು.
ಕಲಾ ಸೇವೆಗೆ ಸಿಕ್ಕ ಗೌರವ: ನಮ್ಮ ಸಾಹಿತ್ಯ, ಸಂಸ್ಕೃತಿಯ ಪರಂಪರೆ ಇಂದಿನ ಯುವಸಮೂಹಕ್ಕೆ ತಲುಪಿಸಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಸುಮಾರು 2 ದಶಕಗಳಿಂದ ಜಾನಪದ ಕಲೆ, ಸಂಸ್ಕೃತಿಯನ್ನು ಪಸರಿಸುತ್ತಿರುವ ಮುನಿರೆಡ್ಡಿರವರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ ದೊರೆತಿರುವುದು ಅವರ ಕಲಾ ಸೇವೆಗೆ ಸಿಕ್ಕ ಗೌರವ ಎಂದು ಅವರನ್ನು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ರೆಡ್ಡಿ, ನಿರ್ದೇಶಕ ಸದಾಶಿವ, ಚುಸಾಪ ಪದಾಧಿಕಾರಿಗಳಾದ ಅಶ್ವತ್ಥ ನಾರಾಯಣ, ರಮಣ್ಅಕೇಶ್, ಸಾಹಿತಿಗಳಾದ ಸರಸಮ್ಮ, ಲತಾ ರಾಮಮೋಹನ್ ಉಪಸ್ಥಿತರಿದ್ದರು.
ಜನಪದ ಕಲೆಗಳು ಗ್ರಾಮೀಣ ಭಾಗದ ಜನರಲ್ಲಿ ಸೌಹಾರ್ದತೆ ಹಾಗೂ ಸಾಮರಸ್ಯದ ಜೀವನಕ್ಕೆ ಬುನಾದಿ ಕಲ್ಪಿಸಿವೆ. ಉಳಿಸಿ ಬೆಳೆಸುವ ಕೆಲಸ ನಾಗರಿಕ ಸಮಾಜ ಮಾಡಬೇಕು. ಸತತ ಮೂವತ್ತು ಜನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಕ್ಕೆ ಅಕಾಡೆಮಿ ಗುರುತಿಸಿ ವಾರ್ಷಿಕ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ.
-ಜಿ.ಮುನಿರೆಡ್ಡಿ, ಹಿರಿಯ ಜನಪದ ಕಲಾವಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು