2 ವರ್ಷ ಕೋವಿಡ್ ನಿಯಮ ಪಾಲಿಸಿ
Team Udayavani, Jun 1, 2021, 1:23 PM IST
ಚಿಂತಾಮಣಿ: ಎರಡು ವರ್ಷ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಮಾಡಿದ್ರೆ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಬಹುದು ಎಂದು ವಿಶ್ವ ಹಿಂದೂ ಪರಿಷತ್ನ ಅವಳಿ ಜಿಲ್ಲೆಯ ಅಧ್ಯಕ್ಷ ಡಾ.ಸಿ.ಕೆ.ಶಿವಣ್ಣ ನುಡಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 7 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ, ವಿಶ್ವ ಹಿಂದೂ ಪರಿಷತ್, ಪಂಡಿತ್ದೀನದಯಾಳ್ ಗ್ರಾಮೀಣಾಭಿ ವೃದ್ಧಿ ಸೇವಾ ಸಂಸ್ಥೆ ಸಹಕಾರದಿಂದ ತಾಲೂಕಿನ ಬಟ್ಲಹಳ್ಳಿ ಗ್ರಾಮದಲ್ಲಿ ನಿರ್ಗ ತಿಕರಿಗೆ, ಆಹಾರ, ಮಾಸ್ಕ್, ಸ್ಯಾನಿಟೈಸರ್ ನೀಡುವ ಕಾರ್ಯಕ್ಕೆ ಚಾಲನೆ ಮಾತನಾಡಿದರು.
ಬಡವ, ಶ್ರೀಮಂತ ಎನ್ನದೇ, ಎಲ್ಲರಿಗೂ ಸೋಂಕು ಹರಡುತ್ತದೆ. ಅದನ್ನು ತಡೆಯಬೇಕಾದರೆ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಜೊತೆಗೆ ಅಂತರ ಕಾಯ್ದುಕೊಳ್ಳುಬೇಕು. ಸಾಬೂನಿಂದ ಕೈ ತೊಳೆದುಕೊಳ್ಳಬೇಕು ಎಂದರು.
ಕೈಲಾದ ಸೇವೆ: ಬಿಜೆಪಿ ತಾಲೂಕು ಅಧ್ಯಕ್ಷ ಶಿವಾರೆಡ್ಡಿ ಮಾತನಾಡಿ, ದೇಶ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದೆ. ಜನರನ್ನು ಜಾಗೃತಿ ಮೂಡಿಸುವ ಜೊತೆಗೆ ಸಂಕಷ್ಟದಲ್ಲಿರುವವರಿಗೆ ನಮ್ಮ ಕೈಲಾದ ಸಹಾಯ ಮಾಡುತ್ತಿದ್ದೇವೆ ಎಂದು ಹೇಳಿದರು.
ಬಟ್ಲಹಳ್ಳಿ ಗ್ರಾಮದಲ್ಲಿ ಆಶಾ, ಅಂಗನ ವಾಡಿ, ಆರೋಗ್ಯ ಕಾರ್ಯಕರ್ತರು ಸೇರಿ ಬಡವರಿಗೆ ಊಟದ ವ್ಯವಸ್ಥೆ ಮಾಡಿದರು. ಡಾ.ಶಿವಣ್ಣ ಅವರು ಗುಡಿಸಲಿನಲ್ಲಿಇರುವವರಿಗೆಊಟದಜೊತೆಗೆಮಾಸ್ಕ್,ಸ್ಯಾನಿಟೈಸರ್ ಆಹಾರ ಜೊತೆಗೆ ಹಣ ನೀಡುವ ಮೂಲಕ ಮಾನವೀಯತೆ ಮೆರೆದರು.
ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆಭಾಗ್ಯಮ್ಮ,ಮುಖಂಡಪಾರ್ಥನ್ನ, ಅಸಂಘಟಿತಕಾರ್ಮಿಕರ ಸಹಸಂಚಾಲಕ ವೆಂಕಟೇಶ, ಯುವ ಮುಖಂಡ ಎ.ಬಿ. ಮನೋಹರ್, ರಘು, ಬಿ.ಸಿ.ಮನೋಹರ್,ರಘುಸ್ವಾಮಿ,ಆಶಾ,ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು