ಹೆಸರು ಕೈಬಿಡುವಾಗ ಸೂಕ್ತ ಕ್ರಮ ಅನುಸರಿಸಿ

ಮತ ದಾರರ ಪಟ್ಟಿ ಪರಿಷ್ಕರಣೆ ತಿದ್ದುಪಡಿ ಕಾರ್ಯಗಳು ಯಶಸ್ವಿಯಾಗಿ ನಡೆಯುತ್ತಿವೆ.

Team Udayavani, Dec 9, 2022, 6:52 PM IST

ಹೆಸರು ಕೈಬಿಡುವಾಗ ಸೂಕ್ತ ಕ್ರಮ ಅನುಸರಿಸಿ

ಚಿಕ್ಕಬಳ್ಳಾಪುರ: ಮತದಾರರ ಪಟ್ಟಿಯಿಂದ ಹೆಸರನ್ನು ಕೈಬಿಡುವಾಗ ಸೂಕ್ತ ದಾಖಲೆಗಳನ್ನು ಪಡೆದು ಕ್ರಮ ವಹಿಸಬೇಕು ಎಂದು ಮತದಾರರ ಪಟ್ಟಿ ವೀಕ್ಷಕರಾದ ಡಾ. ಏಕ್‌ ರೂಪ್‌ ಕೌರ್‌ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಚುನಾವಣಾ ಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಗತಿ ಪರಿಶೀಲನಾ ಸಭೆ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಂವಾದ ಸಭೆಯಲ್ಲಿ ಮಾತನಾಡಿದರು.

ಮತದಾರರ ಪಟ್ಟಿಯಿಂದ ಹೆಸರು ತೆಗೆಯುವಾಗ ನಿಯಮಾನುಸಾರ ಎಲ್ಲಾ ಕ್ರಮಗಳನ್ನು ಅನುಸರಿಸಲಾಗಿದೆಯೇ? ಎಂಬುದನ್ನು ಖಾತರಿ ಪಡಿಸಿಕೊಳ್ಳಬೇಕು. ಆ ನಂತರವೇ ಹೆಸರು ಕೈಬಿಡುವ ಪ್ರಕ್ರಿಯೆಯನ್ನು ಅನುಸರಿಸಬೇಕು. ಹೆಸರನ್ನು ಕೈಬಿಡುವ ಕಾರ್ಯದ ಜತೆ-ಜತೆಗೆ ನವ ಮತದಾರರನ್ನು ಪಟ್ಟಿಗೆ ಸೇರ್ಪಡೆ ಮಾಡುವ ಕಾರ್ಯವನ್ನು ಲೋಪದೋಷವಿಲ್ಲದೆ ನಿರ್ವಹಿಸಬೇಕು. ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿದು ಚುನಾವಣಾ ಪ್ರಕ್ರಿಯೆಯಿಂದ, ಮತದಾನದಿಂದ ವಂಚಿತರಾಗಬಾರದು. ಆ ನಿಟ್ಟಿನಲ್ಲಿ ಹೆಚ್ಚು ಜಾಗೃತಿ ವಹಿಸಿ ಪರಿಷ್ಕರಣೆ ಕಾರ್ಯಗಳನ್ನು ನಿರ್ವಹಿಸುವ ಮೂಲಕ ಡಿ. 26 ರೊಳಗೆ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಿ 2023ರ ಜ. 5ಕ್ಕೆ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲು ಮುಂದಾಗಿ ಎಂದು ಸೂಚನೆಗಳನ್ನು ನೀಡಿದರು.

ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್‌ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಜಿಲ್ಲೆಯಲ್ಲಿ ನ. 9 ರಿಂದ ಡಿ. 7ವರೆಗೆ ಜಿಲ್ಲೆಯಲ್ಲಿ ಕೈಗೊಂಡಿರುವ ಮನೆ ಮನೆ ಸಮೀಕ್ಷೆ, ನವ ಮತದಾರರ ನೋಂದಣಿ, ಹೆಸರು ಅಳಿಸುವಿಕೆ, ಸ್ವೀಪ್‌ ಚಟುವಟಿಕೆಗಳು, ಜಾಗೃತಿ ಜಾಥಾಗಳು, ಅಭಿಯಾನಗಳು ಹಾಗೂ ಮತದಾರರ ವಿವರವನ್ನು ಆಧಾರ್‌ ಸಂಖ್ಯೆಯೊಂದಿಗೆ ಜೋಡಣೆ ಮಾಡಿರುವ ಸಂಪೂರ್ಣವಾದ ವಿವರವನ್ನು ವೀಕ್ಷಕರಿಗೆ ನೀಡಿದರು.

ಜೆಡಿಎಸ್‌ ಪಕ್ಷದ ಪ್ರತಿನಿಧಿ ಮುನೇಗೌಡ, ಸಿಪಿಎಂ ಪಕ್ಷದ ಪ್ರತಿನಿಧಿ ಮುನಿಕೃಷ್ಣಪ್ಪ, ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್‌, ಅಪರ ಜಿಲ್ಲಾಧಿಕಾರಿ ಡಾ. ಎನ್‌.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಡಾ. ಜಿ.ಸಂತೋಷ್‌ ಕುಮಾರ್‌, ಚುನಾವಣಾ ಶಾಖೆಯ ತಹಶೀಲ್ದಾರ್‌ ಮೈಕಲ್‌, ತಹಶೀಲ್ದಾರ್‌ ಶ್ರೀನಿವಾಸ್‌, ಗಣಪತಿಶಾಸ್ತ್ರಿ, ವೈ.ವಿ.ರವಿ ಇತರರಿದ್ದರು.

ಆಕ್ಷೇಪಣೆಗಳಿಗೆ ಮುಕ್ತ ಅವಕಾಶ
ಪರಿಶೀಲನೆಯ ಸಭೆಯ ನಂತರ ಅಧಿಕಾರಿಗಳ ಸಮ್ಮುಖದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ತಮ್ಮ ಆಕ್ಷೇಪಣೆಗಳು, ಅಹವಾಲುಗಳು ಹಾಗೂ ಸಮಸ್ಯೆಗಳು ಏನಾದರೂ ಇದ್ದಲ್ಲಿ ಮುಕ್ತವಾಗಿ ಸಭೆ ಗಮನಕ್ಕೆ ತರಲು ಅವಕಾಶ ನೀಡಿದರು. ಜತೆಗೆ ಮುಂದಿನ ದಿನಗಳಲ್ಲೂ ಆಕ್ಷೇಪಣೆಗಳನ್ನು ನಮ್ಮ ಗಮನಕ್ಕೆ ನೇರವಾಗಿ ಸಲ್ಲಿಸಬಹುದು ಎಂದರು. ಪ್ರತಿಕ್ರಿಯಿಸಿದ ಪ್ರತಿನಿಧಿಗಳು ಮತ
ದಾರರ ಪಟ್ಟಿ ಪರಿಷ್ಕರಣೆ ತಿದ್ದುಪಡಿ ಕಾರ್ಯಗಳು ಯಶಸ್ವಿಯಾಗಿ ನಡೆಯುತ್ತಿವೆ. ಕೆಲವೇ ಕೆಲವು ಪ್ರಕರಣಗಳಲ್ಲಿ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಲು ಬೆರಳೆಣಿಕೆಯ ಅಧಿಕಾರಿಗಳು ಮರಣ ಪ್ರಮಾಣ ಪತ್ರವನ್ನು ಕಡ್ಡಾಯ ಮಾಡುತ್ತಿದ್ದಾರೆ. ಅಂತಹವರಿಗೆ ಪತ್ರ ಲಭ್ಯವಿಲ್ಲದಿದ್ದಲ್ಲಿ ಮಹಜರ್‌ ಮಾಡಿ ಹೆಸರು ಕೈಬಿಡಲು ಸೂಚಿಸಬೇಕು ಎಂದು ಮನವಿ ಮಾಡಿದರು.

ಶೇ.82.32 ಆಧಾರ್‌ ಜತೆಗೆ ಜೋಡಣೆ
ಕರಡು ಮತದಾರರ ಪಟ್ಟಿ ಅನ್ವಯ ಡಿ. 7ವರೆಗೆ ಜಿಲ್ಲೆಯಲ್ಲಿ ಸುಮಾರು 14,01,492 ಜನಸಂಖ್ಯೆಯಿದ್ದು, 10,13,760 ಮತದಾರರಿದ್ದಾರೆ. ಈ ಪೈಕಿ 6 ಪುರುಷರು, 5,10,437 ಮಹಿಳಾ ಮತದಾರರಿದ್ದಾರೆ. ಡಿ. 7ರವರೆಗೆ ನಮೂನೆ- 6ರಡಿ 18903 ಅರ್ಜಿಗಳು, ನಮೂನೆ- 7ರಡಿ 8614 ಅರ್ಜಿಗಳು, ನಮೂನೆ- 8ರಡಿ 17462, ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ವಿಲೇವಾರಿ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆ ಶೇ.82.32 ಮತದಾರರ ವಿವರವನ್ನು ಆಧಾರ್‌ ಸಂಖ್ಯೆಯೊಂದಿಗೆ ಜೋಡಣೆ ಮಾಡಲಾಗಿದ್ದು, ಬಾಕಿ ಮತದಾರರ ವಿವರವನ್ನು ಆಧಾರ್‌ ಸಂಖ್ಯೆಯೊಂದಿಗೆ ಜೋಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.