ರಸೆ ಜಾಗ ಒತ್ತುವರಿ ತೆರವಿಗೆ ಒತ್ತಾಯ
Team Udayavani, Aug 10, 2017, 5:30 PM IST
ಗುಡಿಬಂಡೆ: ತಾಲೂಕಿನ ಸೋಮೇನಹಳ್ಳಿ ಗ್ರಾಮದಲ್ಲಿ ನೂರಾರು ವರ್ಷಗಳಿಂದ ಗ್ರಾಮಸ್ಥರು ಓಡಾಡುತ್ತಿದ್ದ ಸರ್ಕಾರಿ
ರಸ್ತೆಯನ್ನು ಬೀರೇಶ್ವರ ದೇವಸ್ಥಾನದ ಧರ್ಮದರ್ಶಿ ಶ್ರೀನಿವಾಸ್ ಒತ್ತುವರಿ ಮಾಡಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ “ಉದಯವಾಣಿ’ ಜತೆ ಮಾತನಾಡಿದ ಗ್ರಾಮಸ್ಥರಾದ ನಾರಾಯಣ
ಸ್ವಾಮಿ, ನಸಿಂಹಮೂರ್ತಿ, ಗೌರಮ್ಮ, ಸುಬ್ರಹ್ಮಣ್ಯ, ಗಂಗರತ್ನ, ರಾಜಮ್ಮ, ರಮ್ಯಾ, ನಾಗಮ್ಮ, ಭಾಗ್ಯಾ ಮುಂತಾದವರು,
ಸೋಮೇನಹಳ್ಳಿ ಗ್ರಾಮದ ರಸ್ತೆಯನ್ನು ಬೆಂಗಳೂರು ನಿವಾಸಿಯಾದ ಬೀರೇಶ್ವರ ದೇವಸ್ಥಾನದ ಧರ್ಮದರ್ಶಿ ಶ್ರೀನಿವಾಸ್
ತನ್ನ ಸ್ವಾರ್ಥಕ್ಕಾಗಿ ಯಾರ ಅನುವತಿಯನ್ನು ಪಡೆಯದೇ ದೇವಸ್ಥಾನದ ಹೆಸರಿನಲ್ಲಿ ಒತ್ತುವರಿ ಮಾಡಿಕೊಂಡು ಕಟ್ಟಡ
ಕಟ್ಟಲು ಮುಂದಾಗಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಒ ಅಧಿಕಾರಿಗೆ
ದೂರು ನೀಡಿದ್ದರೂ ಇದುವರಿಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಡೀಸಿ ಕ್ರಮ ಕೈಗೊಂಡಿಲ್ಲ: ಗ್ರಾಮಸ್ಥ ನಾರಾಯಣಸ್ವಾಮಿ ಮಾತನಾಡಿ, ನೂರಾರು ವರ್ಷಗಳಿಂದ ಸೋಮೇನಹಳ್ಳಿ ಗ್ರಾಮದ ಬೀರೇಶ್ವರ ದೇವಸ್ಥಾನದ ಮುಂಭಾಗ 8 ಅಡಿ ಜಾಗದಲ್ಲಿ ಸರ್ಕಾರಿ ರಸ್ತೆ ಇದೆ. ಈ ರಸ್ತೆಯಲ್ಲಿಯೇ ಗ್ರಾಮಸ್ಥರು ದಿನ ನಿತ್ಯ ಓಡಾಡುತ್ತಾರೆ. ಇದೀಗ ಬೆಂಗಳೂರಿನ ಶ್ರೀನಿವಾಸ್ ಸೋಮೇನಹಳ್ಳಿ ಗ್ರಾಮದಲ್ಲಿ ಒಂದು ಎಸ್ಟೇಟ್ ಮತ್ತು ಕಾಲೇಜು ನಿರ್ಮಾಣ ಮಾಡಿಕೊಂಡಿದ್ದಾರೆ. ಬೀರೇಶ್ವರ ದೇವಸ್ಥಾನದ ಮುಂಭಾಗ ಮಂಟಪ ನಿರ್ಮಾಣ ಮಾಡುವ ಉದ್ದೇಶದಿಂದ ಓಡಾಡುವ ಸರ್ಕಾರಿ ರಸ್ತೆ ಜಾಗದಲ್ಲಿ ಯಾರ ಗಮನಕ್ಕು ಬಾರದೆ ದೊಡ್ಡ ಗುಂಡಿಗಳನ್ನು ಅಗೆದು ಕಲ್ಯಾಣ ಮಂಟಪ ನಿರ್ಮಾಣ ಮಾಡಲು ಮುಂದಾಗಿದ್ದಾರೆ.
ಈ ಬಗ್ಗೆ ಜಿಲ್ಲಾಧಿಕಾರಿಗಳು, ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ದೂರು ನೀಡಿ ತಿಂಗಳು ಕಳೆದರೂ ಯಾವುದೇ ಕ್ರಮ
ಕೈಗೊಂಡಿಲ್ಲ. ರಸ್ತೆಯಲ್ಲಿ ಗುಂಡಿಗಳನ್ನು ಅಗೆದಿರುವುದರಿಂದ ಮಕ್ಕಳು, ವೃದ್ಧರು ಓಡಾಡಲು ತೊಂದರೆಯಾಗಿದೆ ಎಂದರು.
ರಸ್ತೆ ತೆರವುಗೊಳಿಸಿ: ಸುಮಾರು ನಮ್ಮ ತಾತಂದಿರ ಕಾಲದಿಂದಲೂ ಶ್ರೀ ಬೀರೇಶ್ವರ ದೇವಸ್ಥಾನದ ಮುಂಭಾಗ ಸಾರ್ವಜನಿಕರು
ಓಡಾಡಲು ಸರ್ಕಾರಿ ರಸ್ತೆ ಇದೆ. ಈಗ ಶ್ರೀನಿವಾಸ ಅವರು ಈಗಿನ ರಸ್ತೆ ಜಾಗದಲ್ಲಿ ಕಲ್ಯಾಣ ಮಂಟಪ ನಿರ್ಮಾಣ
ಮಾಡಬೇಕಾಗಿದೆ. ಆದ್ದರಿಂದ, ನಿಮಗೆ ಬೇರೆ ಕಡೆ ರಸ್ತೆಗೆ ಜಾಗ ನೀಡುವುದಾಗಿ ಹೇಳುತ್ತಿದ್ದಾರೆ. ಆದರೆ, ನಮಗೆ ಇದೇ
ರಸ್ತೆ ಬೇಕಾಗಿರುವುದರಿಂದ ಈ ಬಗ್ಗೆ ಸಂಬಂಧಪಟ್ಟವರಿಗೆ ದೂರು ನೀಡಲಾಗಿದೆ ಎಂದು ಗ್ರಾಮದ ಮಹಿಳೆ ಗೌರಮ್ಮ
ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ