ಶಿವಶಂಕರರೆಡ್ಡಿಗೆ ಹತಾಶೆ, ರಾಜಕೀಯ ಭವಿಷ್ಯ ಚಿಂತೆ
Team Udayavani, Oct 23, 2019, 3:00 AM IST
ಚಿಕ್ಕಬಳ್ಳಾಪುರ: ಮುಂದಿನ ತಮ್ಮ ರಾಜಕೀಯ ಭವಿಷ್ಯ ಏನಾಗುತ್ತದೆಯೋ ಎಂಬ ಹತಾಶೆ, ಆತಂಕದಿಂದ ಮಾಜಿ ಸಚಿವ ಎನ್.ಹೆಚ್.ಶಿವಶಂಕರರೆಡ್ಡಿ, ಮಂಚೇನಹಳ್ಳಿ ಹೋಬಳಿಯನ್ನು ತಾಲೂಕು ರಚಿಸುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ ಬೆಂಬಲಿಗರು ಟೀಕಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸುಧಾಕರ್ ಬೆಂಬಲಿಗರರಾದ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್, ತಾಪಂ ಮಾಜಿ ಅಧ್ಯಕ್ಷ ವೆಂಕಟನರಾಯಣಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಗೋವಿಂದಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷರಾದ ಅಪ್ಪಾಲು ಮಂಜು, ಲೀಲಾವತಿ ಶ್ರೀನಿವಾಸ್, ಕೆ.ವಿ.ಮಂಜುನಾಥ ಮತ್ತಿತರರು ಮಾಜಿ ಸಚಿವ ಶಿವಶಂಕರರೆಡ್ಡಿ ನೀಡಿರುವ ಕೈ ಕತ್ತರಿಸುವ ಹೇಳಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿ ತಮ್ಮ ಹೇಳಿಕೆ ವಾಪಸ್ ಪಡೆದು ಬಹಿರಂಗ ಕ್ಷಮೆ ಕೋರಬೇಕೆಂದು ಆಗ್ರಹಿಸಿದರು.
ಅಡ್ಡಿಪಡಿಸುವುದು ಸರಿಯಲ್ಲ: ಮಂಚೇನಹಳ್ಳಿ ಹೋಬಳಿ ತಾಲೂಕು ಆಗಬೇಕೆಂಬುದು ಜನತೆಯ ಬಹುದಿನಗಳ ಬೇಡಿಕೆ. ಶಿವಶಂಕರರೆಡ್ಡಿಗೂ ಕೂಡ ಮಂಚೇನಹಳ್ಳಿ ಹೋಬಳಿ ಜನ ಮತ ಕೊಟ್ಟು ಶಾಸಕರನ್ನು ಮಾಡಿದ್ದಾರೆ. ಆದರೆ ಹೋಬಳಿ ಜನರ ಋಣ ತೀರಿಸುವುದರ ಬದಲು ತಾಲೂಕು ರಚನೆಗೆ ಅಡ್ಡಿಪಡಿಸುವುದು ಸರಿಯಲ್ಲ ಎಂದರು. ಹೋಬಳಿಗೆ ಸೇರಿಸಬೇಕೆಂದಿರುವ ತೊಂಡೇಬಾವಿ, ಡಿ.ಪಾಳ್ಯ ಶಿವಶಂಕರರೆಡ್ಡಿ ಮನೆ ಆಸ್ತಿಯೇ ಎಂದು ಸುಧಾಕರ್ ಬೆಂಬಲಿಗರು ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.
ಕೈ ಕತ್ತರಿಸುತ್ತೇನೆಂದು ಹೇಳುವ ಶಿವಶಂಕರರೆಡ್ಡಿಗೆ ಈಗಾಗಲೇ ಬಹಳ ದಿನಗಳ ಹಿಂದೆ ಮರಳು ಗಲಾಟೆಯಲ್ಲಿ ಕೆಲವರು ಕೈ ಕತ್ತರಿಸಿದ್ದಾರೆ ಎಂದು ಸುಧಾಕರ್ ಬೆಂಬಲಿಗರು ಲೇವಡಿ ಮಾಡಿದರು. ಹಿರಿಯ ರಾಜಕಾರಣಿಯಾಗಿ ಮಂಚೇಹಳ್ಳಿ ತಾಲೂಕು ರಚನೆಗೆ ಬೆಂಬಲ, ಸಹಕಾರ ನೀಡುವುದರ ಬದಲು ತಮ್ಮ ರಾಜಕೀಯ ಭವಿಷ್ಯ ಏನಾಗುತ್ತದೆಯೋ ಎಂಬ ಆತಂಕ, ಹತಾಶೆಯಿಂದ ಸುಧಾಕರ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದರು.
ಹತಾಶೆ ಮನೋಭಾವ: ಮಂಚೇನಹಳ್ಳಿ ಹೋಬಳಿಯನ್ನು ತಾಲೂಕು ಮಾಡುವುದರ ಬಗ್ಗೆ ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ. ಹೊಸ ತಾಲೂಕಿಗೆ ಯಾವ ಹೋಬಳಿ ಸೇರಿಸಬೇಕು, ಬಿಡಬೇಕೆಂಬುದು ಸರ್ಕಾರ ನಿರ್ಧಾರ ಮಾಡುತ್ತದೆ. ಆದರೆ ರಾಜಕೀಯ ದುರುದ್ದೇಶದಿಂದ ಶಿವಶಂಕರರೆಡ್ಡಿ ಕ್ಷೇತ್ರದಲ್ಲಿ ಕೈ ಹಾಕಿದರೆ ಕೈ ಕತ್ತರಿಸುತ್ತೇನೆಂದು ಹೇಳಿಕೆ ನೀಡಿರುವುದು ಹತಾಶೆ ಮನೋಭಾವವನ್ನು ತೋರಿಸುತ್ತದೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇರುವವರು ಈ ರೀತಿ ಹೇಳಿಕೆ ನೀಡುವುದಿಲ್ಲ. ಐದು ಬಾರಿ ಶಾಸಕರಾಗಿರುವ ಶಿವಶಂಕರರೆಡ್ಡಿ ಅಭಿವೃದ್ಧಿ ಪರ ನಿಲ್ಲದೇ ತಮ್ಮ ಸ್ವಾರ್ಥ ರಾಜಕಾರಣದಲ್ಲಿ ಮುಳುಗಿದ್ದಾರೆ ಎಂದು ಸುಧಾಕರ್ ಬೆಂಬಲಿಗರು, ಮಾಜಿ ಸಚಿವರನ್ನು ತರಾಟೆಗೆ ತೆಗೆದುಕೊಂಡರು. ಸುದ್ದಿಗೋಷ್ಠಿಯಲ್ಲಿ ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಜಿ.ಆರ್.ಶ್ರೀನಿವಾಸ್, ರಾಮಕುಮಾರ್, ವಿಜಯಕುಮಾರ್, ಆನಂದಪ್ಪ, ಗಜೇಂದ್ರ ಉಪಸ್ಥಿತರಿದ್ದರು.
ಶಿವಶಂಕರರೆಡ್ಡಿಗೆ ಸೋಲಿನ ಭಯ: ಶಿವಶಂಕರರೆಡ್ಡಿಗೆ ಮುಂದಿನ ಚುನಾವಣೆಗಳಲ್ಲಿ ಸೋಲುವ ಭೀತಿ ಕಾಡುತ್ತಿದೆ. ಆ ಕಾರಣಕ್ಕಾಗಿಯೇ ಅವರು ಮಂಚೇನಹಳ್ಳಿ ಹೋಬಳಿ ತಾಲೂಕು ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಸುಧಾಕರ್ ಬೆಂಬಲಿಗರು ಆರೋಪಿಸಿದರು.
ಇದೇ ರೀತಿ ವರ್ತನೆ ಮುಂದುವರಿದರೆ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಅವರೇ ಹೊಣೆ ಆಗುತ್ತಾರೆ. ಮಂಚೇನಹಳ್ಳಿ ತಾಲೂಕು ರಚನೆ ಅವರ ಮೊದಲ ಆಧ್ಯತೆ ಆಗಬೇಕಿತ್ತು. ಸುಧಾಕರ್ ಬಗ್ಗೆ ನೀಡಿರುವ ಹೇಳಿಕೆ ಕುರಿತು ಅವರು ಬಹಿರಂಗ ಕ್ಷೇಮೆ ಕೋರದಿದ್ದರೆ ಶಿವಶಂಕರರೆಡ್ಡಿ ಚಿಕ್ಕಬಳ್ಳಾಪುರಕ್ಕೆ ಬಂದರೆ ಘೇರಾವ್ ಹಾಕುತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
MUST WATCH
ಹೊಸ ಸೇರ್ಪಡೆ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?