ಗಾಂಧಿ ಬದುಕು ಅನಾವರಣಗೊಳಿಸಿದ ಛಾಯಾಚಿತ್ರ ಪ್ರದರ್ಶನ


Team Udayavani, Oct 31, 2019, 3:00 AM IST

gandhi-baduku

ಚಿಕ್ಕಬಳ್ಳಾಪುರ: ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ, ಸತ್ಯ ಎಂಬ ಅಂಶಗಳನ್ನು ಅಸ್ತ್ರಗಳನ್ನಾಗಿ ಪ್ರಯೋಗಿಸಿ ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ಯಶಸ್ವಿಯಾದ ಗಾಂಧಿ ಅವರ ಸಂದೇಶ ಸಾರ್ವಕಾಲಿಕ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 150ನೇ ಜನ್ಮ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಪಂ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಮೂರು ದಿನಗಳ ವಿಶೇಷ ಛಾಯಾಚಿತ್ರ ಪ್ರದರ್ಶನವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.

ಗಾಂಧಿ ಪ್ರತಿಮೆಗೆ ನಮನ: ಗಾಂಧೀಜಿ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ನಡೆಸಿದ ಹೋರಾಟ, ಅವರ ವಿಚಾರ ಧಾರೆಗಳ ಬಗ್ಗೆ ಇಂದಿನ ವಿದ್ಯಾರ್ಥಿ, ಯುವ ಪೀಳಿಗೆಯಲ್ಲಿ ಅರಿವು ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆ ಕಾರ್ಯ ಶ್ಲಾಘನೀಯ ಎಂದರು.

ಸ್ವಾತಂತ್ರ್ಯ ನಂತರ ರಾಮರಾಜ್ಯದ ಬಗ್ಗೆ ಕನಸು ಕಂಡಿದ್ದ ಗಾಂಧೀಜಿ ಅವರು ಜೀವನದುದ್ದಕ್ಕೂ ಶಾಂತಿ ಪ್ರತಿಪಾದಿಸಿದ್ದರು. ಗಾಂಧೀಜಿಯವರ ದೃಷ್ಟಿಯಲ್ಲಿ ರಾಮರಾಜ್ಯ ಎಂದರೆ ಸರ್ವ ಧರ್ಮಗಳನ್ನು ಸಮಾನವಾಗಿ ಕಾಣುವ ಹಾಗೂ ಸಮಾನತೆ ಸಾರುವ ಸಮಾಜವಾಗಿತ್ತು.

ಗಾಂಧೀಜಿ ಅವರ ಹೋರಾಟದ ದಿನಗಳು, ಅವರ ವಿಚಾರಧಾರೆಗಳನ್ನು ಇಂದಿನ ವಿದ್ಯಾರ್ಥಿ, ಯುವ ಸಮುದಾಯಕ್ಕೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಈ ಛಾಯಾಚಿತ್ರ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ, ಬಾಪು ಅವರ ತತ್ವಾದರ್ಶ ಮೈಗೂಡಿಸಿಕೊಳ್ಳಬೇಕು ಎಂದರು.

ಸರಳವಾದ ಬದುಕು: ಜಿಪಂ ಸಿಇಒ ಬಿ.ಫೌಜಿಯಾ ತರನ್ನುಮ್‌, ಪ್ರದರ್ಶನಕ್ಕೆ ಭೇಟಿ ನೀಡಿ ಗಾಂಧೀಜಿಯವರ ಛಾಯಾಚಿತ್ರ ವೀಕ್ಷಿಸಿದರು. ಸರಳವಾಗಿ ಬದುಕಿನ ಅಗಾಧ ಸಾಧನೆಗೈದ ಮಹಾತ್ಮ ಗಾಂಧೀಜಿ ಅವರ ಚಿಂತನೆಗಳು, ಬದುಕು, ಬರಹ ಹಾಗೂ ಹೋರಾಟ ಕುರಿತ ಸಂಗ್ರಹಿಸಲಾಗಿರುವ ಅಪರೂಪದ ಛಾಯಾಚಿತ್ರ ಪ್ರದರ್ಶನ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಸೇರಿ ನಾಗರಿಕನ್ನು ಆಕರ್ಷಿಸುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೂರು ದಿನ ಆಯೋಜನೆ: ಜಿಲ್ಲಾ ವಾರ್ತಾ ಅಧಿಕಾರಿ ಎಂ.ಜುಂಜಣ್ಣ ಮಾತನಾಡಿ, ಗಾಂಧೀಜಿ ಬ್ರಿಟಿಷರ ವಿರುದ್ಧ ನಡೆಸಿದ ಸ್ವಾತಂತ್ರ್ಯ ಚಳವಳಿ, ಅವರ ವಿಚಾರಧಾರೆ ಬಗ್ಗೆ ಬೆಳಕು ಚೆಲ್ಲುವ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಇಂದಿನ ವಿದ್ಯಾರ್ಥಿ, ಯುವ ಸಮಯದಾಯಕ್ಕೆ ಅರಿವು ಮೂಡಿಸುವ ದಿಸೆಯಲ್ಲಿ ಗಾಂಧೀಜಿ ಅವರ ಅಪರೂಪದ ಛಾಯಾಚಿತ್ರ ಪ್ರದರ್ಶಿಸಲಾಗಿದೆ. ಶುಕ್ರವಾರದವರೆಗೂ ಪ್ರದರ್ಶನ ನಡೆಯಲಿದೆ ಎಂದರು.

ಈ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣ ಅಧಿಕಾರಿ ವಿ.ಬಸವರಾಜ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್‌.ಜಿ.ನಾಗೇಶ್‌, ಜಿಲ್ಲಾ ಕೈಮಗ್ಗ ಹಾಗೂ ಜವಳಿ ಇಲಾಖೆ ಉಪ ನಿರ್ದೇಶಕ ಶಿವಕುಮಾರ್‌, ಚಿಂತಕ ಡಾ.ಕೋಡಿರಂಗಪ್ಪ, ವಾರ್ತಾ ಇಲಾಖೆ ಮೈನಾಶ್ರೀ ಉಪಸ್ಥಿತರಿದ್ದರು.

ಛಾಯಾಚಿತ್ರಗಳ ಜೊತೆಗೆ ಸಾಕ್ಷ್ಯಚಿತ್ರ ಪ್ರದರ್ಶನ: ಛಾಯಾಚಿತ್ರ ಪ್ರದರ್ಶನದ ಮುಂಭಾಗದಲ್ಲಿ ವಿಶ್ರಾಂತ ಸ್ಥಿತಿಯಲ್ಲಿ ಹಾಗೂ ಶಾಂತಿ ಚಳವಳಿಯಲ್ಲಿ ಹೆಜ್ಜೆ ಹಾಕುವ ಗಾಂಧೀಜಿ ಅವರ ಪ್ರತಿಮೆ ಹಾಗೂ ಬಾಪು ಉಪಯೋಗಿಸುತ್ತಿದ್ದ ಮರದಿಂದ ತಯಾರಿಸಿದ ಚರಕ ನೋಡಗರನ್ನು ಸೆಳೆಯುತ್ತಿದೆ.

ಗಾಂಧೀಜಿ ಅವರು ಛಾಯಾಚಿತ್ರ ಪ್ರದರ್ಶನವನ್ನು ಹೆಚ್ಚು ಆಕರ್ಷಿತಗೊಳಿಸುವ ನಿಟ್ಟಿನಲ್ಲಿ ಪಾರಂಪರಿಕ ಕಂಬಗಳನ್ನು ಆಕರ್ಷಕವಾಗಿ ವಿನ್ಯಾಸಗೊಳಿಸಲಾಗಿದೆ. ಚಿನ್ನದ ಬಣ್ಣದಿಂದ ಅಲಂಕೃತಗೊಂಡಿರುವ ಕಂಬಗಳ ಮಧ್ಯಭಾಗದ ಛಾಯಾಚಿತ್ರದ ಫ್ರೆಮ್‌ನಲ್ಲಿ ಗಾಂಧೀಜಿ ಅವರ ಜೀವನ, ವಕ್ತಿತ್ವ, ಹೋರಾಟ ಮತ್ತು ಕಾರ್ಯ ಪ್ರತಿಬಿಂಬಿಸುವಂತೆ ಕಪ್ಪು ಬಿಳುಪಿನ ಚಿತ್ರ ಪ್ರದರ್ಶಿಸಲಾಗಿದೆ.

ಛಾಯಾಚಿತ್ರ ಪ್ರದರ್ಶನದೊಳಗೆ ಗಾಂಧೀಜಿಯವರ ಬದುಕು ಮತ್ತು ಹೋರಾಟ ಕುರಿತು ರೂಪಿಸಿರುವ ಸಾಕ್ಷ್ಯಚಿತ್ರ ಪ್ರದರ್ಶಿಸಲಾಗುತ್ತಿದೆ. ಗಾಂಧೀಜಿಯವರ ಹತ್ತು ಸಾವಿರಕ್ಕೂ ಹೆಚ್ಚು ಛಾಯಾಚಿತ್ರಗಳಲ್ಲಿ ಒಂದು ನೂರು ಛಾಯಾಚಿತ್ರಗಳನ್ನು ಆಯ್ಕೆ ಮಾಡಿ ಗಾಂಧೀಜಿ ಅವರ ಜೀವನ ವ್ಯಕ್ತಿತ್ವ ಮತ್ತು ಕಾರ್ಯ ಪ್ರತಿಬಿಂಬಿಸುವಂತೆ ಪ್ರದರ್ಶಿಸಲಾಗಿದೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.