ತುಂಬಿದ ಗಂಜಿಗುಂಟೆ ರೆಡ್ಡಿ ಕೆರೆ ಪ್ರವಾಸಿಗರ ಆಕರ್ಷಣೆ


Team Udayavani, Aug 8, 2022, 5:05 PM IST

tdy-15

ಶಿಡ್ಲಘಟ್ಟ: ಕರ್ನಾಟಕದ ಊಟಿಯೆಂದೇ ಖ್ಯಾತಿ ಪಡೆದ ನಂದಿ ಗಿರಿಧಾಮ ಇರುವ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಂಜಿಗುಂಟೆ ಗ್ರಾಮದ ರೆಡ್ಡಿಕೆರೆ ಒಂದು ರೀತಿಯ ಮಿನಿ ಜೋಗ ಜಲಪಾತವಾಗಿ ಪರಿವರ್ತನೆಗೊಂಡಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

ತಾಲೂಕಿನ ಗಂಜಿಗುಂಟೆ ಗ್ರಾಪಂನ ರೆಡ್ಡಿ ಕೆರೆ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಮೈದುಂಬಿ ಹರಿಯುತ್ತಿದೆ. ಕೋಡಿಯಿಂದ ಧುಮ್ಮಿಕ್ಕುವ ಜಲಧಾರೆಯ ದೃಶ್ಯ ಜೋಗ ಜಲಪಾತ ನೆನಪಿಸುತ್ತದೆ. ನೀರಿನ ವೈಭವವನ್ನು ನೋಡುವುದಕ್ಕೆ ಎರಡು ಕಣ್ಣು ಸಾಲದು ಎಂದು ಈಭಾಗಕ್ಕೆ ಭೇಟಿ ನೀಡುವ ಪ್ರವಾಸಿಗರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ರೆಡ್ಡಿಕೆರೆಯನ್ನು ಪ್ರವಾಸಿ ತಾಣ ಮಾಡಲು ಎಲ್ಲಾ ರೀತಿಯ ಅವಕಾಶಗಳಿದ್ದರೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿದೆ.

ತೀರಾ ಹಿಂದುಳಿದ ಪ್ರದೇಶ: ಶಿಡ್ಲಘಟ್ಟ ತಾಲೂಕಿನ ಅತ್ಯಂತ ಹಿಂದುಳಿದ ಪ್ರದೇಶವಾಗಿರುವ ಗಂಜಿಗುಂಟೆ ಗ್ರಾಮ ರೆಡ್ಡಿಕೆರೆಯ ಜಲಧಾರೆಯಿಂದ ತಾಲೂಕಿನಲ್ಲಿ ಖ್ಯಾತಿ ಪಡೆದುಕೊಂಡಿದೆ. ಈಗಾಗಲೇ ರೆಡ್ಡಿಕೆರೆಗೆ ಸಹಸ್ರಾರು ಮಂದಿ ಬಂದು ಇಲ್ಲಿನ ನೈಸರ್ಗಿಕ ಸಂಪತ್ತು, ಬೆಟ್ಟಗುಡ್ಡಗಳ ಸಾಲಿನ ಮಧ್ಯೆ ಕುಳಿತು ಮಿನಿಜೋಗ ಜಲಪಾತ ಎಂದು ಖ್ಯಾತಿ ಹೊಂದಿರುವ ಕೆರೆಯ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ತಾಲೂಕು ಆಡಳಿತ ಗಮನಹರಿಸಲಿ: ರೆಡ್ಡಿಕೆರೆಯನ್ನು ಪ್ರವಾಸೋದ್ಯಮ ಕೇಂದ್ರವಾಗಲು ಎಲ್ಲಾ ರೀತಿಯ ಅವಕಾಶಗಳು ಇದ್ದರೂ, ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತ ಅಭಿವೃದ್ಧಿಗೊಳಿಸಲು ಮೀನಮೇಷ ಎಣಿಸುತ್ತಿದೆ ಎಂಬ ದೂರು ಕೇಳಿ ಬರುತ್ತಿದೆ. ನರೇಗಾ ಯೋಜನೆ ಬಳಸಿಕೊಂಡು ರೆಡ್ಡಿಕೆರೆ ಅಭಿವೃದ್ಧಿಗೊಳಿಸಲು ಗ್ರಾಪಂ ಅಧಿಕಾರಿಗಳು ಮುಂದಾಗಬೇಕಾಗಿದೆ.

ಜಲಧಾರೆ: ಮಳೆಯಿಂದ ತುಂಬಿ ತುಳುಕಾಡುತ್ತಿರುವ ಕೆರೆಯ ನೀರು ಧುಮಕುತ್ತಿರುವ ದೃಶ್ಯ ನೋಡಿದರೆ ಜೋಗ ಜಲಪಾತದ ಅನುಭವವಾಗುತ್ತದೆ. ಈ ಭಾಗದಲ್ಲಿ ಸುತ್ತಮುತ್ತಲ ಪ್ರದೇಶ ಹಸಿರುಮಯವಾಗಿದೆ. ಎಲ್ಲಿ ನೋಡಿದರೂ ಬೆಟ್ಟಗುಡ್ಡೆಗಳ ಸಾಲು. ಇದರ ಮಧ್ಯೆ ಹರಿಯುತ್ತಿರುವ ಕೋಡಿ ನೀರು ಸ್ಥಳೀಯರಿಗೆ ನಿಜ ಅರ್ಥದಲ್ಲಿ ಭೂಲೋಕದ ಸ್ವರ್ಗ ಎನಿಸುತ್ತದೆ. ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ವಿಶೇಷವಾಗಿ ಆರೋಗ್ಯ ಸಚಿವರು ಶಿಡ್ಲಘಟ್ಟ ತಾಲೂಕಿನ ಗಂಜಿಗುಂಟೆ ಗ್ರಾಮದ ರೆಡ್ಡಿಕೆರೆಯನ್ನು ಪ್ರವಾಸೋದ್ಯಮದ ಕೇಂದ್ರವಾಗಿ ಅಭಿವೃದ್ಧಿಗೊಳಿಸಿ ಹಿಂದುಳಿದ ಪ್ರದೇಶದ ಪ್ರಗತಿಗೆ ಮುಂದಾಗಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.

ಪ್ರವಾಸಿ ತಾಣ ಮಾಡಿ : ಶಿಡ್ಲಘಟ್ಟ ತಾಲೂಕಿನ ಗಂಜಿಗುಂಟೆ ರೆಡ್ಡಿಕೆರೆ ಪ್ರಕೃತಿಯ ಸೌಂದರ್ಯ ತನ್ನ ಮಡಲಲ್ಲಿಟ್ಟು ಕೊಂಡಿದೆ. ಸುತ್ತಮುತ್ತಲು ಬೆಟ್ಟಗುಡ್ಡಗಳ ಸಾಲು, ಹಸಿರು ವಾತಾವರಣ ಕಂಡು ಬರುತ್ತಿದೆ. ಇಲ್ಲಿನ ಕೆರೆಯಲ್ಲಿ ಬೋಟಿಂಗ್‌ ಮಾಡಲು ಸಹ ಉತ್ತಮ ಅವಕಾಶಗಳಿವೆ. ಆದರೆ, ಈ ಸ್ಥಳವನ್ನು ಪ್ರವಾಸೋದ್ಯಮ ಕೇಂದ್ರ ಮಾಡಲು ಇಚ್ಛಾಶಕ್ತಿಯನ್ನು ವ್ಯಕ್ತಪಡಿಸಬೇಕಾಗಿದೆ.

ರೆಡ್ಡಿಕೆರೆ ಪ್ರವಾಸಿಗರಿಗೆ ನೆಚ್ಚಿನ ತಾಣವಾಗಿದೆ. ಸುತ್ತಮುತ್ತ ಲಿನ ಜನ ಇಲ್ಲಿಗೆ ಆಗಮಿಸಿ ಕೆರೆಯ ಸೌಂದರ್ಯ ಸವಿಯುತ್ತಾರೆ. ತಾಲೂಕು, ಜಿಲ್ಲಾಡಳಿತ ಪ್ರವಾಸಿ ತಾಣ ಮಾಡಿದರೆ, ನಮ್ಮ ಗ್ರಾಪಂನಿಂದ ಸಹಕಾರ ಕೊಡಲು ಸಿದ್ಧರಾಗಿದ್ದೇವೆ. ನರಸಿಂಹಮೂರ್ತಿ, ಉಪಾಧ್ಯಕ್ಷ, ಗಂಜಿಗುಂಟೆ ಗ್ರಾಪಂ.

ಗಂಜಿಗುಂಟೆ ಗ್ರಾಮದ ರೆಡ್ಡಿಕೆರೆಯ ನೀರು ಕುಡಿಯಲು ಯೋಗ್ಯವಾಗಿದೆ ಎಂದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ. ಕೆರೆಯನ್ನು ಪ್ರವಾಸೋದ್ಯ ಮದ ಕೇಂದ್ರವಾಗಿ ಪರಿವರ್ತನೆ ಮಾಡುವ ಆಲೋಚನೆ ಇದೆ. ಮುಂದಿನ ಮೂರು ತಿಂಗಳ ಅವಧಿಯಲ್ಲಿ ರೆಡ್ಡಿಕೆರೆ ಸ್ವರೂಪ ಬದಲಾವಣೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿ, ತಾಲೂಕು ಮಾತ್ರವಲ್ಲದೆ, ಜಿಲ್ಲೆಯ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಿ, ಕೆರೆ ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಮಹೇಶ್ಪಿಡಿಒ, ಗಂಜಿಗುಂಟೆ ಗ್ರಾಪಂ

 

ಎಂ..ಅಬ್ದುಲ್ವಹಾಬ್

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.