ಮಹನೀಯರು ಎಲ್ಲಾ ವರ್ಗಕ್ಕೂ ಸೀಮಿತ
Team Udayavani, Feb 3, 2020, 3:00 AM IST
ಶಿಡ್ಲಘಟ್ಟ: ಮಹನೀಯರನ್ನು ಅವರ ಸಾಧನೆ, ಸಮಾಜಕ್ಕೆ ಕೊಟ್ಟ ಕೊಡುಗೆ ಮೇಲೆ ಗುರುತಿಸಬೇಕೆ ಹೊರತು ಜಾತಿ ಧರ್ಮದಿಂದ ಅಲ್ಲ ಎಂದು ಶಾಸಕ ವಿ.ಮುನಿಯಪ್ಪ ಹೇಳಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಗರದ ಕಂದಾಯ ಭವನದ ಆವರಣದಲ್ಲಿ ಆಯೋಜಿಸಿದ್ದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹನೀಯರನ್ನು ಅವರ ಜಾತಿ ಧರ್ಮದ ಆಧಾರದಲ್ಲಿ ನೋಡುವಂತ ಕೆಟ್ಟ ಸಂಪ್ರದಾಯ ಶುರುವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸಮಾಜಕ್ಕೆ ಕೊಟ್ಟ ಕೊಡುಗೆ ಸಾಧನೆಯ ಮೇಲೆ ಮಹನೀಯರನ್ನು ಗುರುತಿಸಬೇಕು ಎಂದರು.
ತಹಶೀಲ್ದಾರ್ ಎಂ.ದಯಾನಂದ ಮಾತನಾಡಿ, ಸಮಾದಲ್ಲಿರುವ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ದೃಷ್ಟಿಯಿಂದ ಸರ್ಕಾರ ಅನೇಕ ಯೋಜನೆಗಳನ್ನೂ ಜಾರಿಗೊಳಿಸಿದರೂ ಸಹ ಹಿಂದುಳಿದ ವರ್ಗಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಸೌಲಭ್ಯಗಳು ಲಭಿಸಿಲ್ಲವೆಂಬ ಕೊರಗಿದೆ ಎಂದ ಅವರು, ಮಾಚಿದೇವರ ಜೀವನಾದರ್ಶ ಎಲ್ಲರಿಗೂ ದಾರಿದೀಪವಾಗಬೇಕು ಎಂದರು.
ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಎಂ.ದೇವರಾಜ್ ಮಡಿವಾಳರ ಸಂಸ್ಕೃತಿ ಆಚಾರ ವಿಚಾರ ಕುರಿತು ಪ್ರಧಾನ ಭಾಷಣ ಮಾಡಿ, ಪ್ರಾಚೀನ ಕಾಲದಿಂದಲೂ ಮಡಿವಾಳರಿಗೆ ತನ್ನದೇ ಆದ ಗೌರವವಿದೆ. ಸವಿತಾ ಸಮಾಜ ಮತ್ತು ಮಡಿವಾಳರು ಸಹೋದರು ಇದ್ದಂತೆ ಎಂದರು.
ಮಡಿವಾಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್.ಎನ್.ಮುರಳೀಧರ್ ಮಾತನಾಡಿ, ಮಡಿವಾಳ ಸಮುದಾಯ ಭವನ ನಿರ್ಮಿಸಲು ಅಗತ್ಯ ನಿವೇಶನ ಒದಗಿಸಿ ಸಮುದಾಯದ ಮಕ್ಕಳಿಗೆ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಒದಗಿಸಲು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ನಿವೃತ್ತ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಎಸ್.ಎಂ.ಕೃಷ್ಣಪ್ಪ ಮಾತನಾಡಿದರು. ಸಮುದಾಯದಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ಹಿರಿಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ನಗರದಲ್ಲಿ ಜನಾಕರ್ಷಕ ಪಲ್ಲಕ್ಕಿ ಮೆರವಣಿಗೆ ನಡೆಸಲಾಯಿತು. ಕಲಾವಿದರು ಕಲೆ ಪ್ರದರ್ಶಿಸಿ ಗಮನ ಸೆಳೆದರು.
ರಾಜ್ಯ ಮಡಿವಾಳರ ಸಂಘದ ಉಪಾಧ್ಯಕ್ಷ ಆರ್.ವಿ.ರಾಜಣ್ಣ, ಮಡಿವಾಳ ಯುವಕರ ಸಂಘದ ಅಧ್ಯಕ್ಷ ಡಿ.ವಿ.ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಮುನಿರಾಜು, ಕಂದಾಯ ನಿರೀಕ್ಷಕ ವಿಶ್ವನಾಥ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ